AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಇರುವವರಿಗೆ ವಿದ್ಯುತ್​​ ಫ್ರೀ ಇದೆಯೇ?

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ.

ಗಂಗಾಧರ​ ಬ. ಸಾಬೋಜಿ
|

Updated on:Jun 02, 2023 | 4:56 PM

Share

ಬೆಂಗಳೂರು: ಫ್ರೀ..ಫ್ರೀ..ಫ್ರೀ…ಅಂತಾನೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದ ಐದು ಘೋಷಣೆಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಪೈಕಿ ಗೃಹಜ್ಯೋತಿ ಯೋಜನೆ (Gruha Jyothi Scheme) ಒಂದು. ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಸಿಎಂ ಹೇಳಿದ್ದಾರೆ. ಈ ಯೋಜನೆ ಮೂಲಕ 200 ಯೂನಿಟ್ ವಿದ್ಯುತ್​ನ್ನು ಕಾಂಗ್ರೆಸ್​ ಸರ್ಕಾರ ಉಚಿತ ನೀಡುತ್ತಿದೆ. ಹಾಗಾದ್ರೆ ಬಾಡಿಗೆದಾರರಿಗೂ ಈ ಯೋಜನೆ ಅನ್ವಯಿಸುತ್ತಾ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ಹೀಗಿದೆ. ​​    ​

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ. ಒಂದು ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್ ನಂಬರ್ ಇದ್ದರೆ ಹೊಂದಿದ್ದರೆ ಅದನ್ನು ಕಮರ್ಷಿಯಲ್​ ಎಂದು ಪರಿಗಣಿಸಲಾಗುವುದು. ಹಾಗಾಗಿ ಬಾಡಿಗೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯವಾಗಲ್ಲ ಎಂದಿದ್ದಾರೆ.

ಇದನ್ನೂ ಓದಿ: Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ

ಸಿಂಗಲ್ ಬಿಲ್ಡಿಂಗ್​ನಲ್ಲಿ ಬಾಡಿಗೆದಾರರಿದ್ದರೆ ಮಾತ್ರ ಉಚಿತವಿರುತ್ತದೆ. ಒಂದು ಬಿಲ್ಡಿಂಗ್​ನಲ್ಲಿ ಒಂದು ಮನೆ RR ನಂಬರ್​ ಮಾತ್ರ ಪರಿಗಣನೆ ಮಾಡಲಾಗುತ್ತಿದೆ. ಒಂದು ಬಿಲ್ಡಿಂಗ್​ನಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್​ ನಂಬರ್​ಯಿದ್ದರೆ, ಅದರ ಲಾಭವನ್ನು ಬಿಲ್ಡಿಂಗ್ ಮಾಲೀಕರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

12 ತಿಂಗಳ ಸರಾಸರಿ ವಿದ್ಯುತ್​ ಬಿಲ್​ ಪರಿಗಣೆ

12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡಲಾಗುವುದು. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಗೃಹಜ್ಯೋತಿ ಸೇರಿದಂತೆ ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಗಳನ್ನು ಸಹ ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Fri, 2 June 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ