AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೀಗ ಸಂಪೂರ್ಣವಾಗಿ ಜೆಡಿಎಸ್​ನಿಂದ ದೂರ ಉಳಿದಿದ್ದೇನೆ: ಜಿಟಿ ದೇವೇಗೌಡ ಹೇಳಿಕೆ

ನಾನು ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇದ್ದೇನೆ. ಅವರೂ ನಮ್ಮನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆದಿಲ್ಲ. ನಾನೀಗ ಸಂಪೂರ್ಣವಾಗಿ ಜೆಡಿಎಸ್​ನಿಂದ ದೂರ ಉಳಿದಿದ್ದೇನೆ ಎಂದು ಜಿ.ಟಿ. ದೇವೇಗೌಡ ಹೇಳಿದ್ದಾರೆ.

ನಾನೀಗ ಸಂಪೂರ್ಣವಾಗಿ ಜೆಡಿಎಸ್​ನಿಂದ ದೂರ ಉಳಿದಿದ್ದೇನೆ: ಜಿಟಿ ದೇವೇಗೌಡ ಹೇಳಿಕೆ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 14, 2021 | 3:21 PM

Share

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ನಮ್ಮ ಕುಟುಂಬಸ್ಥರು ಸ್ಪರ್ಧಿಸಲ್ಲ. ಪ್ರಚಾರಕ್ಕಾಗಿ ನಮ್ಮ ಕುಟುಂಬದ ಹೆಸರು ಪ್ರಸ್ತಾಪಿಸುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ವಿರುದ್ಧ ಶಾಸಕ ಜಿ.ಟಿ. ದೇವೇಗೌಡ ಇಂದು (ನವೆಂಬರ್ 14) ವಾಗ್ದಾಳಿ ನಡೆಸಿದ್ದಾರೆ. ನಾನು ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇದ್ದೇನೆ. ಅವರೂ ನಮ್ಮನ್ನು ಯಾವುದೇ ಕಾರ್ಯಕ್ರಮಕ್ಕೆ ಕರೆದಿಲ್ಲ. ನಾನೀಗ ಸಂಪೂರ್ಣವಾಗಿ ಜೆಡಿಎಸ್​ನಿಂದ ದೂರ ಉಳಿದಿದ್ದೇನೆ ಎಂದು ಜಿ.ಟಿ. ದೇವೇಗೌಡ ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪಕ್ಷ ಬಿಡಬೇಡಿ ಎಂದಿದ್ದರು. ನಮ್ಮ ಮನೆಗೆ ಬಂದು ಇಲ್ಲೇ ಇರಬೇಕೆಂದು ಹೇಳಿದರು. ಅವರಿಗೂ ನನಗಾದ ಅಪಮಾನ, ನೋವನ್ನ ಹೇಳಿದ್ದೇನೆ. ಹೀಗೆ ಇರುವಾಗ ನಾನು ಹೇಗೆ ಜೆಡಿಎಸ್ ಪಕ್ಷದಲ್ಲಿ ಇರಲು ಸಾಧ್ಯ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕೇಳಿದ್ದಾರೆ. ಈ ಮೂಲಕ, ಮತ್ತೊಮ್ಮೆ ಪಕ್ಷ ತ್ಯಜಿಸುವ ಸುಳಿವು ನೀಡಿದ್ದಾರೆ.

ಜಿಟಿ ದೇವೇಗೌಡ ಕಾಂಗ್ರೆಸ್​​ಗೆ ಬಂದಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ. ಜಿ.ಟಿ. ದೇವೇಗೌಡರಿಗೆ ಕಾಂಗ್ರೆಸ್​ಗೆ ಬರುವುದಕ್ಕೆ ಮನಸ್ಸಿದೆ. ಆದರೆ, ಅವರಿನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಲ್ಲ. ಅವರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ದೇವೇಗೌಡರು, ಹೆಚ್​ಡಿ ಕುಮಾರಸ್ವಾಮಿ ಪ್ರಯತ್ನ ಮಾಡುತ್ತಿದ್ದಾರೆ. ಜಿಟಿಡಿ ನನ್ನ ರಾಜಕೀಯ ಎದುರಾಳಿ, ವೈಯಕ್ತಿಕ ದ್ವೇಷಿ ಅಲ್ಲ. ಅವರು ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿ ನಮ್ಮ ಪಕ್ಷಕ್ಕೆ ಬರುವುದಿದ್ದರೆ ಬರಲಿ. ಯಾರೇ ನಮ್ಮ ಕಾಂಗ್ರೆಸ್​​ ಪಕ್ಷಕ್ಕೆ ಬಂದರೂ ನಾವು ಸ್ವಾಗತಿಸುತ್ತೇವೆ ಎಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಮತ್ತೆ ನನಗೆ ಈ ಕ್ಷೇತ್ರಕ್ಕೆ ಬರುವುದಕ್ಕೆ ತುಂಬಾ ಬೇಸರ ಆಗಿತ್ತು. ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು, ಜಿ.ಟಿ. ದೇವೇಗೌಡ ಪರಸ್ಪರ ಎದುರಾಗಿದ್ದೆವು. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ ಅವರು. ಸೋತ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕುಳಿತುಕೊಳ್ಳುವ ಬಗ್ಗೆ ಸಾಕಷ್ಟು ಕುತೂಹಲ ಇತ್ತು. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತವನು, ಜಿ.ಟಿ. ದೇವೇಗೌಡರು ಗೆದ್ದಿದ್ದಾರೆ. ಜನರು ಕರೆದ ಮೇಲೆ ಒಂದೇ ವೇದಿಕೆಗೆ ಬರಲೇ ಬೇಕು. ಹಾಗಾಗಿ ಒಟ್ಟಿಗೇ ಕೂತಿದ್ದೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಜಿಟಿ ದೇವೇಗೌಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ರಣತಂತ್ರ; ಲಲಿತಾ ದೇವೇಗೌಡ ಕಣಕ್ಕಿಳಿಸಲು ಚಿಂತನೆ

ಇದನ್ನೂ ಓದಿ: Siddaramaiah: ಜಿಟಿ ದೇವೇಗೌಡ ನನ್ನನ್ನೇ ಚುನಾವಣೆಯಲ್ಲಿ ಸೋಲಿಸಿದ್ದ ಗಿರಾಕಿ; ಜಿಟಿಡಿ ಬಗ್ಗೆ ಸಿದ್ದರಾಮಯ್ಯ ಗುಣಗಾನ

Published On - 3:18 pm, Sun, 14 November 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ