AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ: ಜಿಟಿ ದೇವೇಗೌಡ ಹೇಳಿಕೆ

GT Devegowda: ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳ್ತೇನೆ. ಹೆಚ್.ಡಿ. ಕುಮಾರಸ್ವಾಮಿಗೆ ಯಾವ ಅಭಿಪ್ರಾಯವಾದರೂ ಇರಲಿ. ನನ್ನ ನಿರ್ಧಾರ ಮಾತ್ರ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.

ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ: ಜಿಟಿ ದೇವೇಗೌಡ ಹೇಳಿಕೆ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 07, 2021 | 2:37 PM

Share

ಮೈಸೂರು: ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳ್ತೇನೆ. ಹೆಚ್.ಡಿ. ಕುಮಾರಸ್ವಾಮಿಗೆ ಯಾವ ಅಭಿಪ್ರಾಯವಾದರೂ ಇರಲಿ. ನನ್ನ ನಿರ್ಧಾರ ಮಾತ್ರ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮ ನಿಮಿತ್ತ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಸ್ಥಳೀಯರು ನನ್ನನ್ನು ಆಹ್ವಾನಿಸಿದ್ದಾರೆ. ಹೀಗಾಗಿ ನಾನು ಆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ. ಕ್ಷೇತ್ರದ ಜನರು ನನ್ನನ್ನು ಆಹ್ವಾನಿಸಿದಾಗ ಹೋಗಲೇಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದಾಗಲೂ ಅವರ ಜತೆ ವೇದಿಕೆ ಹಂಚಿಕೊಂಡಿದ್ದೆ. ಮುಂದೆ ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ಹೇಳ್ತಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

ಕಾಂಗ್ರೆಸ್ ಸೇರುವ ಸುಳಿವು ಬಿಟ್ಟುಕೊಟ್ಟಿದ್ದ ಜಿಟಿ ದೇವೇಗೌಡ ಜೆಡಿಎಸ್​ನಲ್ಲಿ ಆದ ಅವಮಾನಗಳ ಬಗ್ಗೆ ಹೆಚ್​​.ಡಿ. ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇನೆ. ಆಗ ಅವರು ನಿನ್ನನ್ನು ಮರಿದೇವೇಗೌಡ ಎಂದುಕೊಂಡಿದ್ದೇನೆ. ನೀನು ನನ್ನ ಜೊತೆಯೇ ಇರಬೇಕೆಂದು ಹೇಳಿದ್ದರು. ಅದಕ್ಕೆ ನಾನು ದಯವಿಟ್ಟು ಕ್ಷಮಿಸಿ ಎಂದು ದೇವೇಗೌಡರಿಗೆ ಹೇಳಿದ್ದೆ. ನನ್ನೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಾತಾಡಿದ್ದಾರೆ ಎಂದಿದ್ದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಆಗಸ್ಟ್ 24 ರಂದು ತಿಳಿಸಿದ್ದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ಸೇರುವ ಬಗ್ಗೆ ಜಿ.ಟಿ. ದೇವೇಗೌಡ ಸುಳಿವು ನೀಡಿದ್ದರು.

ಮೈಸೂರು ಮಹಾನಗರ ಪಾಲಿಕೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕರಪತ್ರದಲ್ಲಿ ಹರೀಶ್‌ಗೌಡ ಫೋಟೋ ವಿಚಾರವಾಗಿ ಜಿ.ಟಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ನಮಗೆ ಆಪ್ತರು. ಹೀಗಾಗಿ ನನ್ನ ಪುತ್ರ ಹರೀಶ್ ಗೌಡ ಫೋಟೋ ಹಾಕಿದ್ದಾರೆ. ಆದರೆ ಹರೀಶ್ ಗೌಡ ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದ್ದರು.

ನಾನು ಯಾವತ್ತೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿಲ್ಲ. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಮೈಸೂರು ಮೇಯರ್ ಚುನಾವಣೆ ನಡೆದಿತ್ತು. ಆಗ, ಚುನಾವಣೆಯ ವೇಳೆ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನನ್ನ ಮನಸ್ಸಿಗೆ ಅನಿಸಿದ್ದನ್ನು ನಾನು ನೇರವಾಗಿ ಹೇಳುತ್ತೇನೆ. ಅದನ್ನು ಸಹಿಸಿಕೊಳ್ಳುವುದಕ್ಕೆ ಅವರಿಗೆ ಆಗಿಲ್ಲ. ನಂತರ ನಡೆದ ಜೆಡಿಎಸ್ ಸಭೆಗಳಿಗೆ ನನ್ನನ್ನು ಆಹ್ವಾನಿಸಿಲ್ಲ. ನಾನು ಜೆಡಿಎಸ್‌ನಲ್ಲೇ ಇದ್ದರೂ ಕರೆದು ಮಾತನಾಡಿಲ್ಲ. ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡುವಂತೆ ನಿಯೋಗ ತೆರಳಿತ್ತು. ಆದರೆ, ಸಾರಾರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಲು ಹೇಳಿದ್ದಾರೆ. ನಾನು ಯಾವುದೇ ಹುದ್ದೆ ಕೇಳದಿದ್ದರೂ ನನಗೆ ಅಪಮಾನ ಮಾಡಲಾಗಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ವಿರುದ್ಧ ಜಿ.ಟಿ. ದೇವೇಗೌಡ ಅಸಮಾಧಾನ ಹೊರಹಾಕಿದ್ದರು.

ಹಳೇ ವಿಷಯ ಕೆದಕಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಜಿ.ಟಿ. ದೇವೇಗೌಡ ಅಸಮಾಧಾನ ಹೊರಹಾಕಿದ್ದರು. ನಗರ ಪಾಲಿಕೆ ಚುನಾವಣೆ ಸಂಬಂಧ, ಟಿಕೆಟ್ ಹಂಚಿಕೆ ಸಂಬಂಧ ಚರ್ಚಿಸಿಲು ಕುಮಾರಸ್ವಾಮಿ ಕರೆ ಮಾಡಿದ್ದರು. ಆಗ ಹೆಚ್‌ಡಿಕೆ ಬಳಸಿದ ಭಾಷೆಯನ್ನು ಹೇಳಲಾಗುವುದಿಲ್ಲ. ಅಂತಹ ಭಾಷೆ ಬಳಸದಂತೆ ಕುಮಾರಸ್ವಾಮಿಗೆ ಹೇಳಿದ್ದೇನೆ. ಅದನ್ನು ಬಿಟ್ಟರೆ ಬೇರೆ ಏನನ್ನೂ ಕುಮಾರಸ್ವಾಮಿಗೆ ಹೇಳಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೈಮುಲ್ ನೂತನ ಅಧ್ಯಕ್ಷರಿಗೆ ಸಲಹೆ ಕೊಡುತ್ತಲೇ ಕುಮಾರಸ್ವಾಮಿಗೆ ಜಿಟಿ ದೇವೇಗೌಡ ಟಾಂಗ್

ಇದನ್ನೂ ಓದಿ: ಜೆಡಿಎಸ್​ ಬಗ್ಗೆ ಅಸಮಾಧಾನ; ಕಾಂಗ್ರೆಸ್ ಸೇರುವ ಸುಳಿವು ಬಿಟ್ಟುಕೊಟ್ಟ ಜಿಟಿ ದೇವೇಗೌಡ

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ