AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷರತ್ತುಗಳಿಲ್ಲದೆ ಗ್ಯಾರಂಟಿ ಜಾರಿಮಾಡಬೇಕು, ಇಲ್ಲಾಂದ್ರೆ ಜೂನ್​ 1ರಿಂದ ಹೋರಾಟ: ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಗ್ಯಾರಂಟಿ ಕಾರ್ಡ್​ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 2:57 PM

Share

ಮೈಸೂರು: ಗ್ಯಾರಂಟಿ ಕಾರ್ಡ್​ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಗ್ಯಾರಂಟಿಗಳ ಜಾರಿ ಬಗ್ಗೆ ಜೂನ್​ 1ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೆ ಗ್ಯಾರಂಟಿಗಳನ್ನು ಜಾರಿಮಾಡಬೇಕು. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್​ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್​ನ ಗ್ಯಾರಂಟಿ ಸ್ಕೀಂ ಪರ ಇದ್ದೇನೆ ಎಂದು ಹೇಳಿದರು.

ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಅನ್ನೋದು ಕನ್ನಡಿಗರಿಗೆ ಗೊತ್ತು. ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿ ಇದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ.

ಇದನ್ನೂ ಓದಿ: MP holds presser; ಕಾಂಗ್ರೆಸ್ ನೀಡಿದ ಗ್ಯಾರಂಟಿಗಳಿಗೆ ಷರತ್ತು ಅನ್ವಯ ಅಂತ ಎಲ್ಲೂ ಉಲ್ಲೇಖವಾಗಿಲ್ಲ: ಪ್ರತಾಪ್ ಸಿಂಹ, ಸಂಸದ

ಕಂಡೀಷನ್ ಹಾಕಿದರೆ ಜೂನ್ 1 ರಿಂದ ಹೋರಾಟ

ಗ್ಯಾರಂಟಿ ಕಾರ್ಡ್ ಅಲ್ಲಿ ಕಂಡೀಷನ್ ಅಪ್ಲೈ ಅಂತಾ ಎಲ್ಲೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಯಣಕ್ಕೆ ಅವಕಾಶ ಕೊಡಬೇಕು. ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಕಟ್ಟಬೇಡಿ. 200 ಯೂನಿಟ್ ಮೇಲೆ ಎಷ್ಟು ಯೂನಿಟ್ ಬಳಸುತ್ತಿರಾ ಹೆಚ್ಚುವರಿಗೆ ಮಾತ್ರ ಕಟ್ಟಿ. ಕಂಡೀಷನ್ ಹಾಕಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದರು.

ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ

ನಿಮ್ಮ‌ ಮುಖ ನೋಡಿ ಮತ ಹಾಕಿಲ್ಲ, ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ ಅದು ನೆನಪಿರಲಿ. ನಾವು ಸೋತಿದ್ದೇವೆ, ಹೊರತು ಸತ್ತಿಲ್ಲ. ಕೊಟ್ಟ ಭರವಸೆ ಈಡೇರಿಸಿ. ರಾಜಸ್ಥಾನದಲ್ಲಿ ಇದೇ ರೀತಿ ಹೇಳಿ ಇವತ್ತಿನವರೆಗೆ ಮಾಡಿಲ್ಲ. ಸಿದ್ದರಾಮಯ್ಯ ಅಥವಾ ನಾನು ಯಾರು ಆರ್ಥಿಕ ತಜ್ಞರಲ್ಲ. ಸಿಎಂ ಕುರ್ಚಿ ಅನ್ನೋದು ಯಾರ ಸ್ವತ್ತಲ್ಲ. ಆದರೆ ಪೊಲೀಸ್ ವ್ಯವಸ್ಥೆ ಅನ್ನೋದು ಶಾಶ್ವತ ಇರುತ್ತದೆ. ವಿಧಾನಸೌಧದದಲ್ಲಿ ಕೂತು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತೀರಾ ಎಂದು ಪ್ರಶ್ನಿಸಿದರು. ಮೊದಲು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವುದು ನಿಲ್ಲಿಸಿ ಎಂದು ಪ್ರತಾಪ ಸಿಂಹ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’: ಮಾಜಿ ಸಚಿವ ಡಾ ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ

ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ತಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಎಷ್ಟು ಪರ್ಸೆಂಟ್ ಕಮಿಷನ್​ಗಾಗಿ ಕಾಯುತ್ತಿದ್ದೀರಾ? ಕಾಮಗಾರಿಗೆ ಹಣ ಬಿಡುಗಡೆ ಮಾಡದೆ ಯಾಕೆ ತಡೆದಿದ್ದೀರಾ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೀರಾ, ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಕೂಡಲೇ ತನಿಖೆಗೆ ಆದೇಶಿಸಲಿ. ತಪ್ಪು ಮಾಡಿದವರನ್ನು ಶಿಕ್ಷಿಸಿ ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ. ಕಮಿಷನ್​​ ಪಡೆದವರನ್ನು ಜೈಲಿಗೆ ಕಳಿಸುವ ಹೊಣೆ ನಿಮ್ಮದು. ಇಲ್ಲದಿದ್ರೆ ನೀವು ಹೇಳಿದ್ದು ಸುಳ್ಳು ಅಂತಾಗುತ್ತೆ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ