AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? -ಸಿದ್ದರಾಮಯ್ಯ ಗುಡುಗು

ಹಾನಗಲ್​ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮಾನೆಯವರನ್ನ ಗೆಲ್ಲಿಸಿ ವಿಧಾನಸಭೆಗೆ ಕಳಿಸಿ. ದೀಪಾವಳಿಗೆ ಮುಂಚೆಯೇ ಮಾನೆಯವರನ್ನ ಗೆಲ್ಲಿಸಿ, ಪಟಾಕಿ ಹೊಡಿರಿ. ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ನನಗೆ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಇಲ್ಲ. ಅವರು ಮಾಡ್ತಿರೋದನ್ನ ನೋಡಿ ಕೋಪ ಬರ್ತಿದೆ- ಸಿದ್ದರಾಮಯ್ಯ ಗುಡುಗು

ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? -ಸಿದ್ದರಾಮಯ್ಯ ಗುಡುಗು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Oct 16, 2021 | 3:45 PM

Share

ಹಾವೇರಿ: ಮೋದಿ ವಿರುದ್ಧ ಮಾತಾಡಿದರೆ ದೇಶದ್ರೋಹಿ. ಸರ್ಕಾರದ ವಿರುದ್ಧ ಮಾತಾಡಿದರೆ ದೇಶದ್ರೋಹಿ ಅಂತಾರೆ ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಜರಿದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲೆ ಹಾನಗಲ್​ ತಾಲೂಕಿನ ಹೇರೂರು ಗ್ರಾಮದಲ್ಲಿ ಮಾತನಾಡುತ್ತಾ ರಾಜ್ಯ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ರೈತರು ಚಳವಳಿ ಮಾಡಿದ್ರೆ ಕಾರು ಹರಿಸಿ ಸಾಯಿಸುತ್ತಾರೆ. ಕೇಂದ್ರದ ಮಂತ್ರಿ ಮಗ ಕಾರು ಹರಿಸಿ ರೈತರನ್ನ ಸಾಯಿಸಿದ. ಇವರನ್ನ ಲಜ್ಜೆಗೆಟ್ಟವರು, ಕೊಲೆಗಡುಕರು ಅನ್ನಬೇಕಲ್ವಾ? ಎಂದು ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ನಮ್ಮ ಸರ್ಕಾರ ನೀಡಿದ್ದ ಎಲ್ಲ ಭರವಸೆಗಳನ್ನ ಈಡೇರಿಸಿದಿವಿ. ಆದರೆ ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ಬೊಮ್ಮಾಯಿ ನೀವೇನ್ ಮಾಡಿದ್ರಿ? ನಮ್ಮ ಬಳಿಯೇನೂ ನೋಟ್ ಪ್ರಿಂಟ್ ಹಾಕುವ ಮಷಿನ್ ಇಲ್ಲ. ಆದರೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಹೇರೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಐವತ್ತಾರು ಇಂಚಿನ ಎದೆಯಿದೆ ಅಂತಾರೆ‌. ಎದೆ ಇರೋದು ಮುಖ್ಯವಲ್ಲ. ಎದೆಯಲ್ಲಿ ಮಾತೃ ಹೃದಯ ಇರಬೇಕು. ಅದಿಲ್ಲದಿದ್ದರೆ ಎಷ್ಟು ಇಂಚಿನ ಎದೆ ಇದ್ದರೇನು ಉಪಯೋಗ? ಎಂದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವೋಟಿನ ಮೂಲಕ ಬಿಜೆಪಿ ಅಭ್ಯರ್ಥಿ ಸಜ್ಜನರನ್ನ ಸೋಲಿಸಿ, ಕಾಂಗ್ರೆಸ್​ ಅಭ್ಯರ್ಥಿ ಮಾನೆಯವರನ್ನ ಗೆಲ್ಲಿಸಿ ವಿಧಾನಸಭೆಗೆ ಕಳಿಸಿ. ದೀಪಾವಳಿಗೆ ಮುಂಚೆಯೇ ಮಾನೆಯವರನ್ನ ಗೆಲ್ಲಿಸಿ, ಪಟಾಕಿ ಹೊಡಿರಿ. ಈ ಚುನಾವಣೆಯನ್ನ ದೇಶದ ಜನರು ನೋಡ್ತಿದ್ದಾರೆ‌. ಕೊರೊನಾ‌ ಓಡಿಸಿ ಅಂದ್ರೆ ಜಾಗಟೆ ಬಾರಿಸಿ, ಚಪ್ಪಾಳೆ ತಟ್ಟಿ ಅಂದರು ಪ್ರಧಾನಿ ಮೋದಿ. ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ನನಗೆ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಇಲ್ಲ. ಅವರು ಮಾಡ್ತಿರೋದನ್ನ ನೋಡಿ ಕೋಪ ಬರ್ತಿದೆ ಎಂದು ಸಿದ್ದರಾಮಯ್ಯ ಗುಡುಗಿದರು.

ಇದನ್ನೂ ಓದಿ: ಮುಸ್ಲಿಮರನ್ನಾದ್ರು ಮಾಡ್ಲಿ, ದಲಿತರನ್ನಾದರೂ ಸಿಎಂ ಮಾಡಲಿ; ಅದು ಹೈಕಮಾಂಡ್, ಶಾಸಕರಿಗೆ ಬಿಟ್ಟ ವಿಚಾರ: ಸಿದ್ದರಾಮಯ್ಯ

Hanagal ByElection Congress Rally | ಹಾನಗಲ್ ಬೈಎಲೆಕ್ಷನ್​ನಲ್ಲಿ ಸಿದ್ದರಾಮಯ್ಯ ಪ್ರಚಾರ | TV9 Kannada

(hanagal by election congress leader siddaramaiah criticises pm narendra modi)

Published On - 3:39 pm, Sat, 16 October 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ