AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ​ ಪ್ರಚಾರ: ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?

Hangal assembly by election: ಹಾನಗಲ್‌ ಕ್ಷೇತ್ರಕ್ಕೆ ಚುನಾವಣೆ ಉಸ್ತುವಾರಿಯನ್ನಾಗಿಯೂ ಅವರನ್ನು ನೇಮಕ ಮಾಡಲಾಗಿತ್ತು. ಆದ್ರೆ ಸಚಿವ ಮುರುಗೇಶ್ ನಿರಾಣಿ ಹೆಚ್ಚು ಪ್ರಚಾರ ಕಾರ್ಯ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಇದರಿಂದ ಮತದಾರರಿಗೆ ಏನು ಸಂದೇಶ ರವಾನೆಯಾಗಿದೆ ಎಂಬುದು ಮತದಾನದ ದಿನ ಅರ್ಥವಾಗಲಿದೆ.

ಉಪಚುನಾವಣೆ ​ ಪ್ರಚಾರ: ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?
ಉಪಚುನಾವಣೆ ​ ಪ್ರಚಾರದಲ್ಲಿ ಆಸಕ್ತಿ ತೋರದ ಸಚಿವ ನಿರಾಣಿ! ಸಿಎಂ ಬೊಮ್ಮಾಯಿ ಸುಸ್ತು, ಮತದಾರರಿಗೆ ತಲುಪಿದ ಸಂದೇಶ ಏನು?
TV9 Web
| Updated By: ಸಾಧು ಶ್ರೀನಾಥ್​|

Updated on:Oct 27, 2021 | 10:02 AM

Share

ಹಾವೇರಿ: ರಾಜ್ಯದಲ್ಲಿ ಇದೇ ಶನಿವಾರ 2 ಕ್ಷೇತ್ರಗಳಿಗೆ ಅಸೆಂಬ್ಲಿ ಬೈ ಎಲಕ್ಷನ್ ನಡೆಯಲಿದೆ. ಇಂದು ​ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ವತಿಯಿಂದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆದಿದೆ. ಬಹುತೇಕ ಎಲ್ಲ ನಾಯಕರೂ ಎರಡೂ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಡೀ ಆಡಳಿತ ಉಪಚುನಾವನೆಗೆ ಮುಡಿಪಾಗಿದೆ ಎಂಬ ಆರೋಪಗಳೂ ಪ್ರತಿಪಕ್ಷಗಳಿಂದ ಕೇಳಿಬಂದಿದೆ. ಈ ಮಧ್ಯೆ ಆಡಳಿತ ಪಕ್ಷ ಬಿಜೆಪಿಯಲ್ಲಿ ಒಂದು ವರ್ಗದ ನಾಯಕರು ಪ್ರಚಾರ ಕಾರ್ಯದಲ್ಲಿ ಅಷ್ಟೇನೂ ಆಸಕ್ತಿ ತೋರಿಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಅದರಲ್ಲಿ ಪ್ರಮುಖವಾಗಿ ಕೇಳಿಬಂದಿರುವ ಹೆಸರು ಸಣ್ಣ ಮತ್ತು ಬೃಹತ್​ ಕೈಗಾರಿಕೆ ಸಚಿವ ಮುರುಗೇಶ್​ ನಿರಾಣಿ ಅವರದ್ದು.

ಲಿಂಗಾಯತ ಮತ್ತು ಪಂಚಮಸಾಲಿ ಮತಗಳಿಗೆ ಹೊಡೆತ ಹೌದು ಈ ಭಾಗದ ಪ್ರಭಾವೀ ನಾಯಕ, ಸಚಿವ ಮುರುಗೇಶ್​ ನಿರಾಣಿ ಉಪಚುನಾವಣೆಯಲ್ಲಿ ಹೆಚ್ಚು ಆಸಕ್ತಿ ತೋರಿಸಿಲ್ಲ. ಇದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಸು ಬೇಸ್ತು ಬಿದ್ದಿದ್ದಾರೆ. ಸಿಎಂ ಬೊಮ್ಮಾಯಿ ನಿರೀಕ್ಷೆಗೆ ತಕ್ಕಂತೆ ಸಚಿವ ನಿರಾಣಿ ಕೆಲಸ ಮಾಡಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಲಿಂಗಾಯತ ಮತ್ತು ಪಂಚಮಸಾಲಿ ಮತಗಳನ್ನು ಸಳೆಯಲು ಸಚಿವ ಮುರುಗೇಶ್ ನಿರಾಣಿ ಮಹತ್ತರ ಪಾತ್ರವಹಿಸಬೇಕಿತ್ತು. ಹಾನಗಲ್‌ ಕ್ಷೇತ್ರಕ್ಕೆ (Hangal assembly by election) ಚುನಾವಣೆ ಉಸ್ತುವಾರಿಯನ್ನಾಗಿಯೂ ಅವರನ್ನು ನೇಮಕ ಮಾಡಲಾಗಿತ್ತು. ಆದ್ರೆ ಸಚಿವ ಮುರುಗೇಶ್ ನಿರಾಣಿ ಹೆಚ್ಚು ಪ್ರಚಾರ ಕಾರ್ಯ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಇದರಿಂದ ಮತದಾರರಿಗೆ ಏನು ಸಂದೇಶ ರವಾನೆಯಾಗಿದೆ ಎಂಬುದು ಮತದಾನದ ದಿನ ಅರ್ಥವಾಗಲಿದೆ.

Also Read: ಅವ ಮುರುಗೇಶ್‌ ನಿರಾಣಿ ಯಾರ ಯಾರ ಸಿಡಿ ಇಟ್ಟಾನ ಎಲ್ಲಾ ಹೇಳ್ತೀನಿ: ಬಸನಗೌಡ ಪಾಟೀಲ ಯತ್ನಾಳ್

ByElection: ನಾಳೆಯಿಂದ ಅಭ್ಯರ್ಥಿಗಳ ಮನೆ ಮನೆ ಪ್ರಚಾರ ಶುರು |Tv9kannada

(Hangal assembly by election minister murugesh nirani absent from campaign what is the message to voters)

Published On - 9:53 am, Wed, 27 October 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ