AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ: ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಮತದಾರರ ಅಂಕಿ-ಅಂಶ; ಸಂಪೂರ್ಣ ವಿವರ ಇಲ್ಲಿದೆ

Karnataka Byelections: ಚುನಾವಣೆ ನಡೆಯಲಿರುವ ಹಾವೇರಿ ಜಿಲ್ಲೆಯ ಹಾನಗಲ್, ವಿಜಯಪುರ ಜಿಲ್ಲೆಯ ಸಿಂದಗಿ, ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ, ಜಾತಿವಾರು ಲೆಕ್ಕಾಚಾರ ಹಾಗೂ ಇತರ ಅಂಕಿ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಉಪಚುನಾವಣೆ: ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಮತದಾರರ ಅಂಕಿ-ಅಂಶ; ಸಂಪೂರ್ಣ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 29, 2021 | 10:46 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳು ಗೆಲ್ಲುವ ಪಣತೊಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಪ್ರಚಾರ ಕಣದಲ್ಲಿ ಪಾಲ್ಗೊಂಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪರವಾಗಿ ಹಾಗೂ ಜೆಡಿಎಸ್ ಪರವಾಗಿ ಹೆಚ್​.ಡಿ. ಕುಮಾರಸ್ವಾಮಿ, ಹೆಚ್.ಡಿ. ದೇವೇಗೌಡ ಪ್ರಚಾರ ಮಾಡಿದ್ದಾರೆ.

ಚುನಾವಣೆ ನಡೆಯಲಿರುವ ಹಾವೇರಿ ಜಿಲ್ಲೆಯ ಹಾನಗಲ್, ವಿಜಯಪುರ ಜಿಲ್ಲೆಯ ಸಿಂದಗಿ, ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ, ಜಾತಿವಾರು ಲೆಕ್ಕಾಚಾರ ಹಾಗೂ ಇತರ ಅಂಕಿ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಮತದಾರರ ವಿವರ ಮತ್ತು ಜಾತಿವಾರು ಲೆಕ್ಕಾಚಾರ: ಪುರುಷ ಮತದಾರರು: 105405 ಮಹಿಳಾ ಮತದಾರರು: 98798 ಇತರೆ ಮತದಾರರು: 03 ಸೇವಾ ಮತದಾರರು: 83 ಒಟ್ಟು ಮತದಾರರು: 204289

ಜಾತಿವಾರು ಲೆಕ್ಕಾಚಾರ ಲಿಂಗಾಯತ: 76000 ಮುಸ್ಲಿಂ: 34000 ಗಂಗಾಮತ: 28000 ಪರಿಶಿಷ್ಟ ಜಾತಿ: 25000 ಪರಿಶಿಷ್ಟ ಪಂಗಡ: 17000 ಕುರುಬ: 8000 ಮರಾಠಾ: 6000 ಒಬಿಸಿ: 10000 ಜೈನ್: 2000

ಸಿಂದಗಿ ಉಪಚುನಾವಣೆ ಸಮರ, ಕ್ಷೇತ್ರದ ಮತದಾರರ ವಿವರ ಮತ್ತು ಜಾತಿವಾರು ಲೆಕ್ಕಾಚಾರ: ಒಟ್ಟು ಮತದಾರರು: 2,34,309 ಪುರುಷ ಮತದಾರರು: 1,20,949 ಮಹಿಳಾ ಮತದಾರರು: 1,13,327 ಇತರೆ ಮತದಾರರು: 33

ಕ್ಷೇತ್ರದಲ್ಲಿ ಜಾತಿವಾರು ಮಾಹಿತಿ ಕುರುಬ ಸಮಾಜ: 37,000 ಗಾಣಿಗ: 31,000 ಪಂಚಮಸಾಲಿ: 22,000 ಮುಸ್ಲಿಂ: 38,000 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ: 55,000 ಕೋಳಿ ಕಬ್ಬಲಿಗ: 21,000 ಬಣಜಿಗ: 11,500 ಆದಿ ಬಣಜಿಗ: 4,000 ಜಂಗಮ: 6,500 ಕುಡಒಕ್ಕಲಿಗ: 3,500 ರೆಡ್ಡಿ: 3,500

ಉಪ ಚುನಾವಣೆಗೆ ಮೂರು ಪಕ್ಷದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಬಿಜೆಪಿ, ಕಾಂಗ್ರೆಸ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ವಿವರ ಹೀಗಿದೆ. ಬಿಜೆಪಿ ಹಾನಗಲ್ ಉಪಚುನಾವಣೆ ಅಭ್ಯರ್ಥಿ- ಶಿವರಾಜ್ ಸಜ್ಜನರ ಸಿಂಧಗಿ ಉಪಚುನಾವಣೆ ಅಭ್ಯರ್ಥಿ- ರಮೇಶ್ ಭೂಸನೂರು

ಕಾಂಗ್ರೆಸ್ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ- ಶ್ರೀನಿವಾಸ್ ಮಾನೆ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ- ಅಶೋಕ ಮನಗೂಳಿ

ಜೆಡಿಎಸ್ ಸಿಂಧಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ- ನಾಜಿಯಾ ಶಕೀಲಾ ಅಂಗಡಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ- ನಿಯಾಜ್ ಶೇಖ್

ಇದನ್ನೂ ಓದಿ: Hangal Byelections: ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ; ಹಾನಗಲ್​ನಲ್ಲಿ ಭರ್ಜರಿ ಪ್ರಚಾರ

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ನೆರಳಲ್ಲಿ ಸಿದ್ದರಾಮಯ್ಯ vs ಬಿಜೆಪಿ ಟ್ವೀಟ್ ವಾರ್

Published On - 4:14 pm, Wed, 27 October 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ