AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಧ್ವಜ ವಿವಾದ: ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡಲು ಮುಂದಾದ ಕಾಂಗ್ರೆಸ್

Mandya Hanuman Flag Row: ಮಂಡ್ಯದ ಕೆರಗೋಡು ಗ್ರಾಮದ ಧ್ವಜ ವಿವಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿಕೊಂಡು ಬೃಹತ್ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡಲು ಮುಂದಾಗಿದೆ. ಈ ಸಂಬಂಧ ಕಾಂಗ್ರೆಸ್ ಶಾಸಕ ರವಿ ಗಾಣಿಗ ಮಾಹಿತಿ ನೀಡಿದ್ದಾರೆ.

ಹನುಮ ಧ್ವಜ ವಿವಾದ: ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡಲು ಮುಂದಾದ ಕಾಂಗ್ರೆಸ್
ಕಾಂಗ್ರೆಸ್ ಶಾಸಕ ರವಿ ಗಾಣಿಗ
TV9 Web
| Edited By: |

Updated on: Jan 29, 2024 | 7:45 PM

Share

ಮಂಡ್ಯ, (ಜನವರಿ 29): ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶುರುವಾದ ಧ್ವಜ ವಿವಾದ ಏಕಾಏಕಿ ರಾಜಕೀಯ ತಿರುವು ಪಡೆದುಕೊಂಡಿದ್ದು, ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಹನುಮ ಧ್ವಜ ಇಳಿಸಿ ರಾಷ್ಟ್ರ ಧ್ವಜ ಹಾರಿಸಿದ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪತ್ಯಾರೋಪ ತಾರಕ್ಕೇರಿದೆ. ಅಲ್ಲದೇ ಹನುಮ ಧ್ವಜ ಹಾರಿಸಲೇಬೇಕೆಂದು ಬಿಜೆಪಿ-ಜೆಡಿಎಸ್ ನಾಯಕರು ಮಂಡ್ಯ ಚಲೋ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಂಡ್ಯ ಕಾಂಗ್ರೆಸ್​ ಶಾಸಕ ರವಿ ಗಾಣಿಗ ಸಹ ಬಿಜೆಪಿ ಮತ್ತು ಜೆಡಿಎಸ್​ಗೆ ಟಕ್ಕರ್ ನೀಡಲು ತ್ರಿರಂಗ ನಡಿಗೆ ಯಾತ್ರೆ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರವಿ ಗಾಣಿಗ, ನಾನು ಶಾಂತಿ ಸಭೆ ಮಾಡಲು ಹೋಗಿದ್ರೆ ಕೊಲೆ ಮಾಡುತ್ತಿದ್ರು. ನನ್ನ ಫ್ಲೆಕ್ಸ್​​ ಅನ್ನೇ ಬಿಡ್ತಿಲ್ಲ, ಇನ್ನು ನಾನು ಹೋಗಿದ್ರೆ ಬಿಡ್ತಿದ್ರಾ? ನನಗೂ ಕೇಸರಿ ಧ್ವಜದ ವಿವಾದಕ್ಕೂ ಸಂಬಂಧವಿಲ್ಲ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಶಾಂತಿ ಯಾತ್ರೆ ಮಾಡುತ್ತೇವೆ. ಶೀಘ್ರದಲ್ಲೇ ಶಾಂತಿ ಯಾತ್ರೆ ದಿನಾಂಕ ಘೋಷಣೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೆರಗೋಡಿಗೆ ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ಪ್ರತಿಭಟನೆಯಿಂದ ಕಾಲ್ಕಿತ್ತ ಬಿಜೆಪಿ ನಾಯಕರು; ದೋಸ್ತಿಗಳಲ್ಲಿ ಬಿರುಕು?

ನಾನು ಕೂಡ ಹಿಂದೂ, ಎಲ್ಲಾ ದೇವರನ್ನು ಪೂಜೆ ಮಾಡುತ್ತೇನೆ. ಮಂಡ್ಯದ RSS ಕಚೇರಿಗೆ ನಾನು 1 ಲಕ್ಷ ದೇಣಿಗೆ ಕೊಟ್ಟಿದ್ದೇನೆ. ಜನವರಿ 22ರಂದು ಸ್ಥಳೀಯ ರಾಮಮಂದಿರಕ್ಕೆ ಹೋಗಿದ್ದೇನೆ. ಇವರಿಂದ ದೇವರನ್ನು ಪೂಜೆ ಮಾಡುವುದನ್ನು ಕಲಿಯಬೇಕಿಲ್ಲ. ನಮ್ಮ ಇಂಟಲಿಜೆನ್ಸ್​ ಫೇಲ್ ಆಗಿದೆ. ಇಷ್ಟು ದೊಡ್ಡ ಗಲಾಟೆ ಆಗುತ್ತೆ, ಹೊರಗಿನಿಂದ ಬಂದು ಗಲಾಟೆ ಮಾಡಿದ್ದಾರೆ. ನಮ್ಮ ಇಂಟಲಿಜೆನ್ಸ್ ನವರು ಯಾಕೆ ಅವರನ್ನ ಒಳಗೆ ಬಿಟ್ಟರು. ಈ ಬಗ್ಗೆಯೂ ನಾನು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ