AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮ ಧ್ವಜ ವಿವಾದ: ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡಲು ಮುಂದಾದ ಕಾಂಗ್ರೆಸ್

Mandya Hanuman Flag Row: ಮಂಡ್ಯದ ಕೆರಗೋಡು ಗ್ರಾಮದ ಧ್ವಜ ವಿವಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿಕೊಂಡು ಬೃಹತ್ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡಲು ಮುಂದಾಗಿದೆ. ಈ ಸಂಬಂಧ ಕಾಂಗ್ರೆಸ್ ಶಾಸಕ ರವಿ ಗಾಣಿಗ ಮಾಹಿತಿ ನೀಡಿದ್ದಾರೆ.

ಹನುಮ ಧ್ವಜ ವಿವಾದ: ಮಂಡ್ಯದಲ್ಲಿ ಶಾಂತಿ ಯಾತ್ರೆ ಮಾಡಲು ಮುಂದಾದ ಕಾಂಗ್ರೆಸ್
ಕಾಂಗ್ರೆಸ್ ಶಾಸಕ ರವಿ ಗಾಣಿಗ
TV9 Web
| Edited By: |

Updated on: Jan 29, 2024 | 7:45 PM

Share

ಮಂಡ್ಯ, (ಜನವರಿ 29): ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶುರುವಾದ ಧ್ವಜ ವಿವಾದ ಏಕಾಏಕಿ ರಾಜಕೀಯ ತಿರುವು ಪಡೆದುಕೊಂಡಿದ್ದು, ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಹನುಮ ಧ್ವಜ ಇಳಿಸಿ ರಾಷ್ಟ್ರ ಧ್ವಜ ಹಾರಿಸಿದ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪತ್ಯಾರೋಪ ತಾರಕ್ಕೇರಿದೆ. ಅಲ್ಲದೇ ಹನುಮ ಧ್ವಜ ಹಾರಿಸಲೇಬೇಕೆಂದು ಬಿಜೆಪಿ-ಜೆಡಿಎಸ್ ನಾಯಕರು ಮಂಡ್ಯ ಚಲೋ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಂಡ್ಯ ಕಾಂಗ್ರೆಸ್​ ಶಾಸಕ ರವಿ ಗಾಣಿಗ ಸಹ ಬಿಜೆಪಿ ಮತ್ತು ಜೆಡಿಎಸ್​ಗೆ ಟಕ್ಕರ್ ನೀಡಲು ತ್ರಿರಂಗ ನಡಿಗೆ ಯಾತ್ರೆ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರವಿ ಗಾಣಿಗ, ನಾನು ಶಾಂತಿ ಸಭೆ ಮಾಡಲು ಹೋಗಿದ್ರೆ ಕೊಲೆ ಮಾಡುತ್ತಿದ್ರು. ನನ್ನ ಫ್ಲೆಕ್ಸ್​​ ಅನ್ನೇ ಬಿಡ್ತಿಲ್ಲ, ಇನ್ನು ನಾನು ಹೋಗಿದ್ರೆ ಬಿಡ್ತಿದ್ರಾ? ನನಗೂ ಕೇಸರಿ ಧ್ವಜದ ವಿವಾದಕ್ಕೂ ಸಂಬಂಧವಿಲ್ಲ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಶಾಂತಿ ಯಾತ್ರೆ ಮಾಡುತ್ತೇವೆ. ಶೀಘ್ರದಲ್ಲೇ ಶಾಂತಿ ಯಾತ್ರೆ ದಿನಾಂಕ ಘೋಷಣೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೆರಗೋಡಿಗೆ ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ಪ್ರತಿಭಟನೆಯಿಂದ ಕಾಲ್ಕಿತ್ತ ಬಿಜೆಪಿ ನಾಯಕರು; ದೋಸ್ತಿಗಳಲ್ಲಿ ಬಿರುಕು?

ನಾನು ಕೂಡ ಹಿಂದೂ, ಎಲ್ಲಾ ದೇವರನ್ನು ಪೂಜೆ ಮಾಡುತ್ತೇನೆ. ಮಂಡ್ಯದ RSS ಕಚೇರಿಗೆ ನಾನು 1 ಲಕ್ಷ ದೇಣಿಗೆ ಕೊಟ್ಟಿದ್ದೇನೆ. ಜನವರಿ 22ರಂದು ಸ್ಥಳೀಯ ರಾಮಮಂದಿರಕ್ಕೆ ಹೋಗಿದ್ದೇನೆ. ಇವರಿಂದ ದೇವರನ್ನು ಪೂಜೆ ಮಾಡುವುದನ್ನು ಕಲಿಯಬೇಕಿಲ್ಲ. ನಮ್ಮ ಇಂಟಲಿಜೆನ್ಸ್​ ಫೇಲ್ ಆಗಿದೆ. ಇಷ್ಟು ದೊಡ್ಡ ಗಲಾಟೆ ಆಗುತ್ತೆ, ಹೊರಗಿನಿಂದ ಬಂದು ಗಲಾಟೆ ಮಾಡಿದ್ದಾರೆ. ನಮ್ಮ ಇಂಟಲಿಜೆನ್ಸ್ ನವರು ಯಾಕೆ ಅವರನ್ನ ಒಳಗೆ ಬಿಟ್ಟರು. ಈ ಬಗ್ಗೆಯೂ ನಾನು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ