AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕತ್ವ ಅಸಿಂಧು ಕೋರಿ ಅರ್ಜಿ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್, ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್​ ಜಾರಿ

ಚುನಾವಣೆಯಲ್ಲಿ ಅಕ್ರಮ ಜಯಗಳಿಸಿದ್ದಾರೆಂದು ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಮತ್ತು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿರುವ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಶಾಸಕತ್ವ ಅಸಿಂಧು ಕೋರಿ ಅರ್ಜಿ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್, ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್​ ಜಾರಿ
ಮಾಜಿ ಸಚಿವ ಹೆಚ್​ಡಿ ರೇವಣ್ಣ, ಸಚಿವ ಪ್ರಿಯಾಂಕ್ ಖರ್ಗೆ
Ramesha M
| Edited By: |

Updated on: Aug 02, 2023 | 4:55 PM

Share

ಬೆಂಗಳೂರು, ಆಗಸ್ಟ್​ 02: ಚುನಾವಣೆಯಲ್ಲಿ ಅಕ್ರಮ ಜಯಗಳಿಸಿದ್ದಾರೆಂದು ಮಾಜಿ ಸಚಿವ ಹೆಚ್​.ಡಿ. ರೇವಣ್ಣ (HD Revanna) ಮತ್ತು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿರುವ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಶಾಸಕತ್ವ ಅಸಿಂಧು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಅಶ್ವತ್ ರಾಮ್ ಎಂಬುವವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆವಾಗಿ ಪ್ರಿಯಾಂಕ್ ಖರ್ಗೆಗೆ ಹೈಕೋರ್ಟ್ ಬುಧವಾರ ಸಮನ್ಸ್​ ಜಾರಿ ಮಾಡಿದೆ.

ಪಂಚಾಯಿತಿ ಚುನಾವಣೆಯ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡಿಲ್ಲ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರಗಿ ವಾದ ಮಂಡಿಸಿದ್ದು, ಸೆ. 5ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇದನ್ನೂ ಓದಿ: ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್

ಚುನಾವಣಾ ತಕರಾರು ಅರ್ಜಿ ಸಂಬಂಧ ಮಾಜಿ ಸಚಿವ ಹೆಚ್. ಡಿ.ರೇವಣ್ಣ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಖರ್ಗೆ, ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ; ವಿವಾದಿತ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅರಗ ಜ್ಞಾನೇಂದ್ರ

ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಆಸಿಂಧುಗೊಳಿಸುವಂತೆ ಕೋರಿ ಕೆಎಂ ಶಂಕರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡುವ ಮೂಲಕ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?