AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HC Mahadevappa: ನಂಜನಗೂಡು ಚುನಾವಣಾ ಕಣದಿಂದ ಹಿಂದೆ ಸರಿದ ಹೆಚ್​​ಸಿ ಮಹದೇವಪ್ಪ; ಧ್ರುವನಾರಾಯಣ್ ಮಗನಿಗೆ ಬೆಂಬಲ

ನಂಜನಗೂಡು ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಮಾಜಿ ಸಚಿವ ಹೆಚ್​​ಸಿ ಮಹದೇವಪ್ಪ ಮೈಸೂರಿನಲ್ಲಿ ‘ಟಿವಿ9’ಗೆ ತಿಳಿಸಿದರು. ನಂಜನಗೂಡಿಗೆ ಧ್ರುವನಾರಾಯಣ್ ಪುತ್ರ ದರ್ಶನ್ ಧ್ರುವನಾರಾಯಣ್ ಅವರೇ ಅಭ್ಯರ್ಥಿ ಆಗಲಿ ಎಂದು ಅವರು ಹೇಳಿದರು.

Ganapathi Sharma
|

Updated on:Mar 15, 2023 | 7:25 PM

Share

ಮೈಸೂರು: ನಂಜನಗೂಡು (Nanjangud) ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಮಾಜಿ ಸಚಿವ ಹೆಚ್​​ಸಿ ಮಹದೇವಪ್ಪ (HC Mahadevappa) ಮೈಸೂರಿನಲ್ಲಿ ‘ಟಿವಿ9’ಗೆ ತಿಳಿಸಿದರು. ನಂಜನಗೂಡಿಗೆ ಧ್ರುವನಾರಾಯಣ್ ಪುತ್ರ ದರ್ಶನ್ ಧ್ರುವನಾರಾಯಣ್ (Darshan Dhruvanarayan) ಅವರೇ ಅಭ್ಯರ್ಥಿ ಆಗಲಿ. ನಾನು ನಂಜನಗೂಡು ಅಭ್ಯರ್ಥಿ ಆಗುವುದಿಲ್ಲ. ಧ್ರುವನಾರಾಯಣ್ ಅವರ ಮೃತದೇಹ ನೋಡಿದಾಗಲೇ, ನಾನು ಚುನಾವಣೆಗೆ ನಿಲ್ಲಬಾರದು ಎಂಬ ನಿರ್ಧಾರ ಮಾಡಿದ್ದೆ. ಈ ಕುರಿತು ಇನ್ನೂ ಯಾರ ಜತೆಗೂ ಚರ್ಚಸಿಲ್ಲ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ, ಕಾಂಗ್ರೆಸ್​ ದೊಡ್ಡ ಇಕ್ಕಟ್ಟಿನಿಂದ ಪಾರಾದಂತಾಗಿದೆ.

ಧ್ರುವನಾರಾಯಣ್ ತೀರಿಕೊಂಡ ದಿನವೇ ಮಾನಸಿಕವಾಗಿ ನಾನು ಈ ನಿರ್ಧಾರಕ್ಕೆ ಬಂದಿದ್ದೆ. ಆದರೆ, ಈ‌ ನಿರ್ಧಾರವನ್ನು ಪ್ರಕಟ ಮಾಡುವಾಗ ದರ್ಶನ್​ಗೆ ಸಾಂತ್ವನ ಹೇಳಿ ಘೋಷಿಸಬೇಕು ಎಂದುಕೊಂಡಿದ್ದೆ. ಜನರ ಹಿತ ಅಭಿವೃದ್ಧಿ, ಜೀವನ ಮೌಲ್ಯದ ಗೊತ್ತಿಲ್ಲದವರು ಸಾವಿನಲ್ಲೂ ರಾಜಕೀಯ ಮಾಡಿದರು. ಸಾವನ್ನು ಇನ್ನೊಬ್ಬರ ತಲೆಗೆ ಕಟ್ಟುವುದು ಎಲ್ಲಾ ಕಾಲದಲ್ಲೂ ನಡೆದಿದೆ. ಟೀಕೆ ಮಾಡುವವರು ಸಾವಿನಲ್ಲಿ ರಾಜಕೀಯ ಮಾಡಬಾರದು. ಸಾವನ್ನು ಬೇರೆಯವರ ತಲೆಗೆ ಕಟ್ಟದೆ ಅಭಿವೃದ್ಧಿ ಪರ ಕೆಲಸ ಮಾಡಲಿ. ಸಾವಲ್ಲಿ ಬೇಳೆ ಬೇಯಿಸಿಕೊಳ್ಳದ ಸದ್ಗುಣ ಟೀಕೆ ಮಾಡುವವರಿಗೆ ಬರಲಿ ಎಂದು ಅವರು ಹೇಳಿದ್ದಾರೆ.

ದರ್ಶನ್​ಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ನಾಯಕರಿಗೆ ಧ್ರುವನಾರಾಯಣ್ ಹಾಗೂ ದರ್ಶನ್ ಅಭಿಮಾನಿಗಳು ಒತ್ತಾಯಿಸಿದ್ದರು ಮತ್ತು ಈಗಲೂ ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ, ಸಿದ್ದರಾಮಯ್ಯ ಆಪ್ತರೂ ಆಗಿರುವ ಹೆಚ್​ಸಿ ಮಹದೇವಪ್ಪ ಕೂಡ ನಂಜನಗೂಡು ಟಿಕೆಟ್ ಆಕಾಂಕ್ಷಿಯಾಗಿರುವುದು ಕಾಂಗ್ರೆಸ್ ವರಿಷ್ಠರ ತಲೆನೋವಿಗೆ ಕಾರಣವಾಗಿತ್ತು.

ನನ್ನ ಮಗ ಬೇರೆಯಲ್ಲ, ದರ್ಶನ್ ಬೇರೆಯಲ್ಲ; ಮಹದೇವಪ್ಪ

ಪುತ್ರ ಸುನೀಲ್ ಬೋಸ್ ಜತೆಗೆ ಧ್ರುವನಾರಾಯಣ್ ಅವರ ಮನೆಗೆ ಬುಧವಾರ ಭೇಟಿ ನೀಡಿದ ಮಹದೇವಪ್ಪ, ದರ್ಶನ್ ಜತೆ ಮಾತುಕತೆ ನಡೆಸಿದ್ದಾರೆ. ಬಳಿಕ ತಮಗೆ ಮಗ ಸುನೀಲ್ ಬೇರೆಯಲ್ಲ ದರ್ಶನ್ ಬೇರೆಯಲ್ಲ ಎಂದು ಹೇಳಿದ್ದಾರೆ.

ರಾಮನಗರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೇಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಧ್ರುವನಾರಾಯಣ್ ಅಂತಿಮ ದರ್ಶನ ಪಡೆಯಲು ಖುದ್ದು ಮಲ್ಲಿಕಾರ್ಜುನ ಖರ್ಗೆ ಬಂದಿದ್ದರು. ಅಭಿಮಾನಿಗಳ ಆಕ್ರಂದನ ನೋಡಿದ್ದರು. ಅವರು ಹಾಗೂ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಧ್ರುವನಾರಾಯಣ ಅವರಿಗೆ ಪರ್ಯಾಯ ನಾಯಕ ಇಲ್ಲ. ಅವರು ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದರು. ನಾನಂತೂ ಧ್ರುವನಾರಾಯಣ ಮಗನ ಪರ ವಾದಿಸುವ ವಕೀಲ, ಜಡ್ಜ್ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ನಾನಂತೂ ಧ್ರುವನಾರಾಯಣ ಮಗನ ಪರ ವಾದಿಸುವ ವಕೀಲ, ಜಡ್ಜ್ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ: ಡಿಕೆ ಶಿವಕುಮಾರ್

ಆರ್. ಧ್ರುವನಾರಾಯಣ ಮಾರ್ಚ್ 11ರಂದು ಹೃದಯ ಸ್ತಂಭನದಿಂದ ನಿಧನರಾಗಿದ್ದರು.

ಅದಕ್ಕೂ ಮುನ್ನ, ಧ್ರುವನಾರಾಯಣ್​ಗೆ ಟಿಕೆಟ್ ನೀಡುವ ಬಗ್ಗೆ ಡಿಕೆ ಶಿವಕುಮಾರ್ ಒಲವು ಹೊಂದಿದ್ದರು. ಆದರೆ ಮಹದೇವಪ್ಪಗೆ ಟಿಕೆಟ್​ ನೀಡುವ ಬಗ್ಗೆ ಸಿದ್ದರಾಮಯ್ಯ ಒಲವು ಹೊಂದಿದ್ದರು. ಇಬ್ಬರ ನಡುವೆಯೂ ಸಮನ್ವಯತೆ ಸಾಧಿಸಲಾಗದ ಹಿನ್ನೆಲೆಯಲ್ಲಿ ಇಬ್ಬರ ಹೆಸರನ್ನೂ ಶಿಫಾರಸು ಮಾಡಿ ದೆಹಲಿಗೆ ರವಾನಿಸಲಾಗಿತ್ತು. ಇಬ್ಬರ ಹೆಸರೂ ಇದ್ದ ಬಗ್ಗೆ ಧ್ರುವನಾರಾಯಣ ಕೊಂಚ ಬೇಸರಗೊಂಡಿದ್ದರು. ಕಾರ್ಯಾಧ್ಯಕ್ಷರಾಗಿದ್ದುಕೊಂಡು ತಮಗೆ ಟಿಕೆಟ್​ ಖಚಿತವಾಗದ ಬಗ್ಗೆ ಬೇಸರ ಹೊಂದಿದ್ದರು ಎನ್ನಲಾಗಿತ್ತು. ಅವರ ನಿಧನದ ನಂತರ ಮತ್ತೆ ಹೈಕಮಾಂಡ್​ಗೆ ನಂಜನಗೂಡು ಟಿಕೆಟ್​ ನಿರ್ಧಾರ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಮಹದೇವಪ್ಪ ಹೇಳಿಕೆ ಕೈ ಪಕ್ಷದ ಹೈಕಮಾಂಡ್​ ಅನ್ನು ನಿರಾಳಗೊಳಿಸಬಹುದು ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Wed, 15 March 23

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್