ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧೆ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಹೆಚ್​ಸಿ ಮಹಾದೇವಪ್ಪ

ಮುಂದಿನ ಲೋಕಸಭಾ ಚುನಾವಣೆಗೆ ಕೆಲ ಸಚಿವರು ಸ್ಪರ್ಧೆ ಮಾಡುವ ಸಂದರ್ಭ ಬರಬಹುದು. ಹೀಗಾಗಿ ಎಲ್ಲದಕ್ಕೂ ಸಿದ್ಧರಾಗಿ ಎಂದು ಹೈಕಮಾಂಡ್​ ಸೂಚನೆ ನೀಡಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದೀಗ ಇದಕ್ಕೆ ಸಚಿವ ಮಹಾದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧೆ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಹೆಚ್​ಸಿ ಮಹಾದೇವಪ್ಪ
ಸಚಿವ ಹೆಚ್.ಸಿ.ಮಹದೇವಪ್ಪ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 07, 2023 | 3:12 PM

ಮೈಸೂರು, (ಆಗಸ್ಟ್ 07): ಮುಂದಿನ ಲೋಕಸಭಾ ಚುನಾವಣೆಗೆ (Loksabha Elections 2024) ರಾಜ್ಯ ಕಾಂಗ್ರೆಸ್ (Congress) ನಾಯಕರಿಗೆ ಹೈಕಮಾಂಡ್ ಕನಿಷ್ಠ 20 ಸ್ಥಾನಗಳನ್ನ ಗೆಲ್ಲಲು ಬಿಗ್ ಬಿಗ್ ಟಾಸ್ಕ್​ ಕೊಟ್ಟಿದೆ. ಹೈಕಮಾಂಡ್​, ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಈ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದೆ. ಅದರಲ್ಲೂ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆಲ ಸಚಿವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್​ ವಲಯದಲ್ಲಿ ಸುದ್ದಿ  ಹರಿದಾಡುತ್ತಿವೆ. ಅದರಲ್ಲೂ ಮೈಸೂರು ಲೋಕಸಭಾ ಚುನಾವಣೆಗೆ ಸಚಿವ ಹೆಚ್​ಸಿ ಮಹಾದೇವಪ್ಪ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಹೇಳಿಬಂದಿವೆ. ಇನ್ನು ಈ ಬಗ್ಗೆ ಸ್ವತಃ ಸಚಿವ ಮಹಾದೇವಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲ್ಯಾನ್, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಮಹತ್ವದ ಹುದ್ದೆ?

ಮೈಸೂರಿನಲ್ಲಿ ಇಂದು (ಆಗಸ್ಟ್ 07) ಸುದ್ದಿಗಾರರೊಂದಿಗೆ ಮಾತನಾಡಿದ ಮಹಾದೇವಪ್ಪ ಸಚಿವರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಪಕ್ಷದಲ್ಲಿ ಯಾವ ಚರ್ಚೆಯೂ ಆಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿದೆ ಅಷ್ಟೇ. ನಮಗೆ ಅಂತಹ ಯಾವುದೇ ಸೂಚನೆ ಬಂದಿಲ್ಲ. ಪಕ್ಷದಲ್ಲೂ ಚರ್ಚೆಗಳು ನಡೆದಿಲ್ಲ. ನಡೆಯದಿರುವ ಚರ್ಚೆ ನಿಮ್ಮ ಗಮನಕ್ಕೆ ಹೇಗೆ ಬಂತು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.

ಡಾ ಹೆಚ್​ಸಿ ಮಹಾದೇವಪ್ಪ ಅವರನ್ನು ಮೈಸೂರು ಲೋಕಸಭೆ ಕ್ಷೇತ್ರದಿಂದ ನಿಲ್ಲಸಬೇಕು. ಎಂಎಲ್​ಎ ಕ್ಷೇತ್ರವನ್ನು ಅವರ ಪುತ್ರನಿಗೆ ನೀಡುವ ಬಗ್ಗೆ ಚಿಂತನೆಗಳು ನಡೆದಿವೆಯಂತೆ. ಇನ್ನು ಬೆಳಗಾವಿ ಕ್ಷೇತ್ರದಿಮದ ಸತೀಶ್ ಜಾರಕಿಹೊಳಿ, ಮಂಡ್ಯದಿಂದ ಎನ್​ ಚಲುವರಾಯಸ್ವಾಮಿ.ಹೀಗೆ ಕೆಲ ಪ್ರಮುಖ ಸಚಿವರನ್ನು ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಚರ್ಚೆಗಳು ನಡೆದಿವೆಯಂತೆ.  ಹೀಗಾಗಿ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಹೈಕಮಾಂಡ್​, ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!