Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಕೇಸ್​ ರದ್ದುಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಕೇಸ್​ ರದ್ದುಪಡಿಸಿದ ಹೈಕೋರ್ಟ್
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 07, 2023 | 8:42 PM

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ (BS Yediyurappa) ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ.

2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು

2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಎಂಟು ಎಜರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಸರ್ಕಾರದ ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ, ಈಗ ಮಾಜಿ ಸಿಎಂ ವಾಸ್ತವ್ಯ ಎಲ್ಲಿ?

ಬಳಿಕ ಕೋರ್ಟ್ ಆದೇಶದಂತೆ 2015ರ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ನಂತರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಆದ್ರೆ, ಅದನ್ನು 2020ರಲ್ಲಿ ಹೈಕೋರ್ಟ್ ವಜಾ ಮಾಡಿತ್ತು. ತನಿಖೆಯನ್ನು ವಿಳಂಬಗೊಳಿಸುತ್ತಿರುವುದಕ್ಕೆ ಪೊಲೀಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತರಾಟೆಗೆ ತೆಗೆದುಕೊಂಡಿದ್ದರು. ತನಿಖೆಯನ್ನು ಉದ್ದೇಶಪೂರ್ವಕವಾಗಿ ತಡ ಮಾಡಲಾಗುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಸುಪ್ರೀಂ ಕೋರ್ಟ್​ ಮೊರೆ ಹೋದ ಯಡಿಯೂರಪ್ಪ  

ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಡಿನೋಟಿಫೈ ಪ್ರಕರಣದ ತನಿಖೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಅ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಗೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಬಿಎಸ್‌ವೈ ವಿರುದ್ಧದ ತನಿಖೆಯನ್ನು ರದ್ದುಪಡಿಸುವಂತೆ ವಕೀಲರ ಮನವಿ ಮಾಡಿದ್ದರು. ಇದಕ್ಕೆ ಪ್ರತಿವಾದಿ ವಾಸುದೇವರೆಡ್ಡಿ ಪರ ವಕೀಲ ಕೆ.ವಿ.ಧನಂಜಯ ವಿರೋಧಿಸಿದ್ದು, ವಿಚಾರಣಾ ಹಂತದಲ್ಲಿರುವ ಪ್ರಕರಣಕ್ಕೆ ಈ ತಿದ್ದುಪಡಿ ಅನ್ವಯವಾಗಲ್ಲ ಎಂದಿದ್ದರು. ಬಳಿಕ ವಾದ ಮಂಡನೆಗೆ ವಕೀಲರು 2 ಗಂಟೆಗಳ ಕಾಲಾವಕಾಶ ಕೇಳಿದ್ದರು. ಇದರಿಂದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:30 pm, Wed, 7 June 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ