AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡ್ತಿದ್ದೇವೆ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ: ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Feb 09, 2022 | 5:38 PM

Share

ಬೆಂಗಳೂರು: ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ. ಅನಿತಾರನ್ನು ಮುಂದಿನ ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು (ಫೆಬ್ರವರಿ 9) ಹೇಳಿಕೆ ನೀಡಿದ್ದಾರೆ. ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನ ಕಣಕ್ಕಿಳಿಸಬೇಕಾಯಿತು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ ಎಂಬ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡಿ ನಿರ್ಧಾರ ಮಾಡ್ತೇವೆ. ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾ ಕುಮಾರಸ್ವಾಮಿ ಸ್ಪರ್ಧೆ ಕುರಿತು ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡ್ತಿದ್ದೇವೆ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಜೆಡಿಎಸ್​ ನಾಯಕ ವೈಎಸ್​ವಿ ದತ್ತಾ ಪಕ್ಷ ತೊರೆಯುವ ವಿಚಾರವಾಗಿ ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ಒಂದೆರಡು ವಿಚಾರದಲ್ಲಿ ಹೆಚ್​ಡಿಕೆ ಮೇಲೆ ಬೇಸರ ಇರಬಹುದು. ಕುಮಾರಸ್ವಾಮಿಯೇ ಹಿಂದೆ ದತ್ತಾರನ್ನ ಎಂಎಲ್‌ಸಿ ಮಾಡಿದ್ದರು. ನನ್ನ ಜೊತೆ ಇರುವಂತೆ ವೈಎಸ್‌ವಿ ದತ್ತಾಗೆ ಹೇಳಿದ್ದೇನೆ. ಪುಟ್ಟರಾಜು ವಿಚಾರದಲ್ಲೂ ಇಂತಹ ಊಹಾಪೋಹಗಳಿದ್ದವು. ಮೇಲುಕೋಟೆ ಶಾಸಕ ಸಿ.ಎಸ್​. ಪುಟ್ಟರಾಜು ಸ್ಪಷ್ಟನೆ ನೀಡಿದ್ದರು ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: Opinion: ಹೆಚ್​ ಡಿ ದೇವೇಗೌಡರ ಕೈಯಲ್ಲಿ ಸಿಎಂ ಇಬ್ರಾಹಿಂ ಒಂದು ರಾಜಕೀಯ ಅಸ್ತ್ರವಾಗಬಹುದೇ? ಒಂದು ವಿಶ್ಲೇಷಣೆ

ಇದನ್ನೂ ಓದಿ: Hijab Row: ಹಿಜಾಬ್ ಹೆಸರಿನಲ್ಲಿ ಮಕ್ಕಳಲ್ಲಿ ಏಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ?; ಹೆಚ್​ಡಿ ಕುಮಾರಸ್ವಾಮಿ ಕಿಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!