AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ: ಶ್ರೀಕಾಂತ್ ಪ್ರಕರಣ ಉಲ್ಲೇಖಿಸಿ ದೇವೇಗೌಡ ವಾಗ್ದಾಳಿ

ನಾವು ಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿಯನ್ನು ‌ಸೋಲಿಸಿ 20 ಸೀಟ್ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಎಲ್ಲರ ನಿರೀಕ್ಷೆ ಮೀರಿ ಜನ ತೀರ್ಪು ಕೊಡುತ್ತಾರೆ. ಆಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​ ಹವಾ ಮುಗಿಯುತ್ತದೆ ಎಂದು ದೇವೇಗೌಡ ಹೇಳಿದರು.

ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ: ಶ್ರೀಕಾಂತ್ ಪ್ರಕರಣ ಉಲ್ಲೇಖಿಸಿ ದೇವೇಗೌಡ ವಾಗ್ದಾಳಿ
ಹೆಚ್​ಡಿ ದೇವೇಗೌಡ
Sunil MH
| Edited By: |

Updated on: Jan 05, 2024 | 2:01 PM

Share

ಬೆಂಗಳೂರು, ಜನವರಿ 5: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಪೂಜಾರಿ ವಿರುದ್ಧದ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತರುವ ಮೂಲಕ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು  ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ (HD Deve Gowda) ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಜತೆ ಚುನಾವಣೆ ಎದುರಿಸುತ್ತೇವೆ, ಇದರಲ್ಲಿ ಸಂಶಯ ಬೇಡ. ಎನ್​ಡಿಎ ಮೈತ್ರಿಕೂಟದ ಭಾಗವಾಗಿದ್ದಾಗ ನಮ್ಮ ಅಭಿಪ್ರಾಯ ಹೇಳುವ ಸ್ವಾತಂತ್ರ್ಯ ನಮಗೆ ಇದೆ. ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ. 4 ರಾಜ್ಯಗಳ ಚುನಾವಣೆಗೆ‌ ಅವರು ಎಷ್ಟು ಹಣ ತೆಗೆದುಕೊಂಡು ಹೋಗಿದ್ದಾರೆ? ಡಿಸಿಎಂ ಡಿಕೆ ಶಿವಕುಮಾರ್ ಎಷ್ಟು ಹಣ ಸಾಗಿಸಿದ್ದಾರೆ, ಎಷ್ಟು ಹಣ ಸೀಜ್ ಆಗಿದೆ ಎಂದು ಪ್ರಶ್ನಿಸಿದ ದೇವೇಗೌಡರು, ಈ ಬಗ್ಗೆ ಚುನಾವಣೆ ಆಯೋಗ ಗಮನ ಹರಿಸಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ದೇಶಕ್ಕೆ ಬುದ್ಧಿ ಹೇಳುತ್ತಾರೆ. ಅವರಿಗೆ ಅಕ್ರಮ ತಡೆಯಲು ಶಕ್ತಿ ಇದೆಯಾ? ಟಿಪ್ಪು ಸುಲ್ತಾನ್​ ವಿಚಾರ ಬಿಟ್ಟರೆ ಈ ದೇಶದಲ್ಲಿ ಬೇರೆ ಬೇರೇನೂ ಇಲ್ವಾ ಎಂದು ಅವರು ಪ್ರಶ್ನಿಸಿದರು.

ನಾವೂ ರಾಮನ ಪೂಜೆ ಮಾಡುತ್ತೇವೆ. ಅಜ್ಮೀರ್ ದರ್ಗಾ, ಗೋಲ್ಡನ್ ಟೆಂಪಲ್, ತಿರುಪತಿಗೂ ಹೋಗಿದ್ದೇನೆ ಎಂದು ಅವರು ಹೇಳಿದರು.

ನಾವು ಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿಯನ್ನು ‌ಸೋಲಿಸಿ 20 ಸೀಟ್ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಎಲ್ಲರ ನಿರೀಕ್ಷೆ ಮೀರಿ ಜನ ತೀರ್ಪು ಕೊಡುತ್ತಾರೆ. ಆಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​ ಹವಾ ಮುಗಿಯುತ್ತದೆ ಎಂದು ದೇವೇಗೌಡ ಹೇಳಿದರು.

ಇದನ್ನೂ ಓದಿ: ಬಡವರ ಜಮೀನು ಉಳಿಸಿಕೊಟ್ಟರೆ ಸಿದ್ದರಾಮಯ್ಯಗೆ ಆಭಾರಿ: ನೈಸ್ ಯೋಜನಯಿಂದ ಬಡವರಿಗೆ ಅನ್ಯಾಯವೆಂದ ದೇವೇಗೌಡ

ಇಷ್ಟೇ ಅಲ್ಲದೆ, ನೈಸ್ ಅಕ್ರಮ ವಿಚಾರವಾಗಿಯೂ ಮಾತನಾಡಿದ ದೇವೇಗೌಡರು, ಸಿದ್ದರಾಮಯ್ಯ ಬಡವರನ್ನು ಉಳಿಸುವ ಕೆಲಸ ಮಾಡಲಿ. ಬಡವರನ್ನ, ಅವರ ಜಮೀನನ್ನ ಸಿದ್ದರಾಮಯ್ಯ ಉಳಿಸಿಕೊಟ್ರೆ ಅವರಿಗೆ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​