AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಉಭಯ ಪಕ್ಷಗಳ ಸಮನ್ವಯ ಸಭೆ ಬೆಂಗಳೂರಿನಲ್ಲಿ ಶುಕ್ರವಾರ ನಡೆಯಿತು. ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ದೇವೇಗೌಡರ ಸಹಕಾರ, ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.

ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ
ಬಿವೈ ವಿಜಯೇಂದ್ರ
ಕಿರಣ್​ ಹನಿಯಡ್ಕ
| Edited By: |

Updated on: Mar 29, 2024 | 1:11 PM

Share

ಬೆಂಗಳೂರು, ಮಾರ್ಚ್​ 29: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಆಶೀರ್ವಾದ ನಮಗೆ ಆನೆ ಬಲ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಾಗಿತ್ತು. ಈ ಸಮ್ಮಿಲನ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಆಗಲಿದೆ. ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಹೊಂದಾಣಿಕೆ ಆಗಿತ್ತು. ಆದರೆ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಅಂದಿನ ಕಾಲಘಟ್ಟದಲ್ಲಿ ದೇವೇಗೌಡರ ಸಮ್ಮತಿ‌ ಇರಲಿಲ್ಲ ಎಂಬುದೂ ಗೊತ್ತಿರುವ ವಿಚಾರ. ಇದೀಗ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿರುವುದು ಆನೆ ಬಲ ತಂದಿದೆ ಎಂದು ಹೇಳಿದರು.

ರಾಜದಲ್ಲಿ ಹಲವು ಹೊಂದಾಣಿಕೆ ರಾಜಕಾರಣ ನಡೆದಿದೆ. ಮೈತ್ರಿಯನ್ನು ರಾಜ್ಯದ ಜನ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಇನ್ನೂ ಕೂಡಾ ಸಮನ್ವಯತೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಆರೋಗ್ಯದ ಸಮಸ್ಯೆಯನ್ನು ಕಡೆಗಣಿಸಿ ಕುಮಾರಸ್ವಾಮಿ ಪ್ರವಾಸ ಕೈಗೊಂಡು ಬದ್ಧತೆ ತೋರಿಸಿದ್ದಾರೆ. ಸಿಎಂ ಕನಿಷ್ಠ 15-20 ಮಂತ್ರಿಗಳನ್ನು ಸ್ಫರ್ಧೆ ಮಾಡಿಸಬೇಕು ಎಂದುಕೊಂಡಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ಎಷ್ಟು ಗಟ್ಟಿಯಾಗಿದೆ ಅಂದರೆ, ಕಾಂಗ್ರೆಸ್ ಪಕ್ಷದ ಯಾವುದೇ ಮಂತ್ರಿ ಸ್ಪರ್ಧಿಸುವ ಎದೆಗಾರಿಕೆ ತೋರಿಸಲು ಸಾಧ್ಯವಾಗಿಲ್ಲ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ-ಜೆಡಿಎಸ್​​ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಹೆಚ್.​ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್​.ಅಶೋಕ್​, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್​​ ಶಾಸಕ ಬಂಡೆಪ್ಪ ಕಾಶೆಂಪೂರ್​, ಎಂಎಲ್​ಸಿ ಶರವಣ, ಸಂಸದ ಸದಾನಂದಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾದರು.

ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ; ಎಷ್ಟು ಗೊತ್ತಾ?

ಹೆಚ್.ಡಿ. ದೇವೇಗೌಡ, ಯಡಿಯೂರಪ್ಪ, ಕುಮಾರಸ್ವಾಮಿ, ವಿಜಯೇಂದ್ರ, ಅಶೋಕ್, ರಾಧಾ ಮೋಹನ್ ದಾಸ್, ಕಾರಜೋಳ ಮತ್ತು ಜಿ.ಟಿ. ದೇವೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಲುಗಳನ್ನು ಧರಿಸಿ ಸಭೆಯಲ್ಲಿ ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು