AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಉಭಯ ಪಕ್ಷಗಳ ಸಮನ್ವಯ ಸಭೆ ಬೆಂಗಳೂರಿನಲ್ಲಿ ಶುಕ್ರವಾರ ನಡೆಯಿತು. ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ದೇವೇಗೌಡರ ಸಹಕಾರ, ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.

ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ
ಬಿವೈ ವಿಜಯೇಂದ್ರ
ಕಿರಣ್​ ಹನಿಯಡ್ಕ
| Edited By: |

Updated on: Mar 29, 2024 | 1:11 PM

Share

ಬೆಂಗಳೂರು, ಮಾರ್ಚ್​ 29: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಆಶೀರ್ವಾದ ನಮಗೆ ಆನೆ ಬಲ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಾಗಿತ್ತು. ಈ ಸಮ್ಮಿಲನ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಆಗಲಿದೆ. ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಹೊಂದಾಣಿಕೆ ಆಗಿತ್ತು. ಆದರೆ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಅಂದಿನ ಕಾಲಘಟ್ಟದಲ್ಲಿ ದೇವೇಗೌಡರ ಸಮ್ಮತಿ‌ ಇರಲಿಲ್ಲ ಎಂಬುದೂ ಗೊತ್ತಿರುವ ವಿಚಾರ. ಇದೀಗ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿರುವುದು ಆನೆ ಬಲ ತಂದಿದೆ ಎಂದು ಹೇಳಿದರು.

ರಾಜದಲ್ಲಿ ಹಲವು ಹೊಂದಾಣಿಕೆ ರಾಜಕಾರಣ ನಡೆದಿದೆ. ಮೈತ್ರಿಯನ್ನು ರಾಜ್ಯದ ಜನ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಇನ್ನೂ ಕೂಡಾ ಸಮನ್ವಯತೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಆರೋಗ್ಯದ ಸಮಸ್ಯೆಯನ್ನು ಕಡೆಗಣಿಸಿ ಕುಮಾರಸ್ವಾಮಿ ಪ್ರವಾಸ ಕೈಗೊಂಡು ಬದ್ಧತೆ ತೋರಿಸಿದ್ದಾರೆ. ಸಿಎಂ ಕನಿಷ್ಠ 15-20 ಮಂತ್ರಿಗಳನ್ನು ಸ್ಫರ್ಧೆ ಮಾಡಿಸಬೇಕು ಎಂದುಕೊಂಡಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ಎಷ್ಟು ಗಟ್ಟಿಯಾಗಿದೆ ಅಂದರೆ, ಕಾಂಗ್ರೆಸ್ ಪಕ್ಷದ ಯಾವುದೇ ಮಂತ್ರಿ ಸ್ಪರ್ಧಿಸುವ ಎದೆಗಾರಿಕೆ ತೋರಿಸಲು ಸಾಧ್ಯವಾಗಿಲ್ಲ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ-ಜೆಡಿಎಸ್​​ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಹೆಚ್.​ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್​.ಅಶೋಕ್​, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್​​ ಶಾಸಕ ಬಂಡೆಪ್ಪ ಕಾಶೆಂಪೂರ್​, ಎಂಎಲ್​ಸಿ ಶರವಣ, ಸಂಸದ ಸದಾನಂದಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾದರು.

ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ; ಎಷ್ಟು ಗೊತ್ತಾ?

ಹೆಚ್.ಡಿ. ದೇವೇಗೌಡ, ಯಡಿಯೂರಪ್ಪ, ಕುಮಾರಸ್ವಾಮಿ, ವಿಜಯೇಂದ್ರ, ಅಶೋಕ್, ರಾಧಾ ಮೋಹನ್ ದಾಸ್, ಕಾರಜೋಳ ಮತ್ತು ಜಿ.ಟಿ. ದೇವೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಲುಗಳನ್ನು ಧರಿಸಿ ಸಭೆಯಲ್ಲಿ ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ