AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಿಂದಲೇ ಅಖಾಡಕ್ಕಿಳಿಯುತ್ತಾರಾ ದೇವೇಗೌಡ್ರು? ಪ್ರಜ್ವಲ್ ರೇವಣ್ಣ ಗತಿ ಏನು?

ಲೋಕಸಭಾ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಮಾತುಕತೆ ಹಂತದಲ್ಲಿದ್ದು, ಜೆಡಿಎಸ್, ಹಾಲಿ ಬಿಜೆಪಿ ಸಂಸದರು ಇರುವ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ. ಇನ್ನೊಂದೆಡೆ ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ನಡೆಗೆ ಬಿಜೆಪಿ ನಾಯಕರುಗಳೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಕ್ಷೇತ್ರದಲ್ಲಿ ಹಾಸನ ಒಂದು. ಹೀಗಾಗಿ ಜೆಡಿಎಸ್​ ಮೆಗಾ ಪ್ಲ್ಯಾನ್ ಮಾಡಿದೆ.

ಹಾಸನದಿಂದಲೇ ಅಖಾಡಕ್ಕಿಳಿಯುತ್ತಾರಾ ದೇವೇಗೌಡ್ರು? ಪ್ರಜ್ವಲ್ ರೇವಣ್ಣ ಗತಿ ಏನು?
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Dec 01, 2023 | 10:30 AM

Share

ಹಾನಸ, (ಡಿಸೆಂಬರ್ 01): ಈ ಬಾರಿ ಹಾಸನ  ಲೋಕಸಭಾ ‌ಕ್ಷೇತ್ರದಿಂದ (Hassan Loksabha constituency)ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ (H.D.Devegowda) ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಪ್ರಜ್ವಲ್ ರೇವಣ್ಣ ಬದಲು ದೇವೇಗೌಡರೇ ಸ್ಪರ್ಧಿಸುವಂತೆ ಒತ್ತಡ ಹೇರಲಾಗುತ್ತಿದೆಯಂತೆ. ಹಾಗಾಗಿ ಹಾಸನ(Hassan) ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲು ದೇವೇಗೌಡರು ಮುಂದಾಗಿದ್ದು, ಚುನಾಯಿತ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಹೆಜ್ಜೆ ಇಡುವ ಪ್ಲ್ಯಾನ್ ಮಾಡಿದ್ದಾರೆ.

ಇಂದು(ಡಿಸೆಂಬರ್ 1ರಂದು ಹೊಳೆನರಸೀಪುರ ತಾಲೂಕು ಶ್ರೀರಾಮದೇವರ ಕಟ್ಟೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್​ ಕೋರ್​ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಸಂಸದರು, ಶಾಸಕರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಗ್ರಾಪಂ ಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿದ್ದು, ಸಭೆಗೆ ಹಾಜರಾಗಿ ಪೂರಕ ಸಲಹೆ ಸೂಚನೆ ನೀಡುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕ್ಷೇತ್ರ ಹಂಚಿಕೆ ಫೈನಲ್ ಆಯ್ತಾ? ಮಂಡ್ಯದಲ್ಲಿ ಲೋಕಸಭಾ ತಯಾರಿ ಆರಂಭಿಸಿದ ಜೆಡಿಎಸ್ ನಾಯಕ, ಸುಮಲತಾ ನಡೆ ಏನು?

ಬಿಜೆಪಿ-ಜೆಡಿಎಸ್ ಚುನಾವಣಾ ಮೈತ್ರಿ ಆಗಿರುವ ಹಿನ್ನೆಲೆ ದೇವೇಗೌಡರು ಸ್ಪರ್ಧೆ ಮಾಡಿದರೆ ಪಕ್ಷಾತೀತವಾಗಿ ಬೆಂಬಲ ಎಂಬ ಲೆಕ್ಕಾಚಾರವಿದೆ. ಒಂದು ವೇಳೆ ಮತ್ತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಸಿಮೆಂಟ್ ಮಂಜು ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳಿವೆ. ಹೀಗಾಗಿ ದೇವೇಗೌಡರೇ ಸ್ಪರ್ಧೆ ಮಾಡಿದರೆ ಇಬ್ಬರೂ ವಿರೋಧ ಮಾಡುವುದಿಲ್ಲ. ಬದಲಿಗೆ ಎಲ್ಲಾ ಬಿಜೆಪಿ ನಾಯಕರು ಬೆಂಬಲ ನೀಡುತ್ತಾರೆ ಎನ್ನುವುದು ಜೆಡಿಎಸ್ ನಾಯಕರ ಲೆಕ್ಕಾಚಾರವಾಗಿದೆ. ಹೀಗಾಗಿ ತವರು ಜಿಲ್ಲೆಯಿಂದಲೇ ಅಖಾಡಕ್ಕಿಳಿಯುತ್ತಾರಾ ಮಾಜಿ ಪ್ರಧಾನಿ ದೇವೇಗೌಡರು? ಎಂಬ ಪ್ರಶ್ನೆ ಕಾಡತೊಡಗಿದೆ.

ಒಂದು ವೇಳೆ ಜಿಲ್ಲೆಯ ಜೆಡಿಎಸ್ ನಾಯಕರ ಅಭಿಪ್ರಾಯದಂತೆ ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಒಪ್ಪಿದರೆ ಪ್ರಜ್ವಲ್ ರೇವಣ್ಣ ಗತಿ ಏನು ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಒಂದು ವೇಳೆ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ದೇವೇಗೌಡ್ರು ಇಲ್ಲ ಪ್ರಜ್ಲಲ್ ರೇವಣ್ಣ ಸ್ಪರ್ಧಿಸಹುದು. ಮೂಲಗಳ ಪ್ರಕಾರ ದೇವೇಗೌಡ ಅವರು ಮೊಮ್ಮಗನ ರಾಜಕೀಯಕ್ಕೆ ಅಡ್ಡಗಾಲು ಹಾಕದಿರುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಹೀಗಾಗಿ ದೇವೇಗೌಡ ಹಾಸನದಿಂದ ಸ್ಪರ್ಧೆ ಮಾಡುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!