AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಳಿಯುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಕಮಿಷನ್ ದಂಧೆ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಗ್ಗೆ ಪೆನ್​ಡ್ರೈವ್ ಸಾಕ್ಷಿ ತೋರಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿ ವಿದೇಶ ಪ್ರವಾಸಕ್ಕೆ ತೆರಳಿದ್ದ ಕುಮಾರಸ್ವಾಮಿ ಇದೀಗ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದ್ರೆ ವಿಮಾನ ಇಳಿಯುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

ವಿಮಾನ ಇಳಿಯುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಕಮಿಷನ್ ದಂಧೆ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 04, 2023 | 11:10 AM

Share

ಬೆಂಗಳೂರು, (ಆಗಸ್ಟ್.4): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸ(foreign Trip) ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವಿದೇಶದಿಂದ ಬೆಂಗಳೂರಿಗೆ ಮರುಳುತ್ತಿದ್ದಂತೆಯೇ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಪರ್ಸೆಂಟೇಜ್​​ ನೀಡುವಂತೆ ಗುತ್ತಿಗೆದಾರರಿಗೆ ಹೇಳಿದ್ದಾರಂತೆ. ನಾನು ಯುರೋಪ್​ ಪ್ರವಾಸದಲ್ಲಿದ್ದಾಗಲೇ ಕಮಿಷನ್ ಬಗ್ಗೆ ಮಾಹಿತಿ ಬಂತು ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಯುರೋಪ್ ಪ್ರವಾಸದಿಂದ ಕುಮಾರಸ್ವಾಮಿ ವಾಪಸ್, ಸರ್ಕಾರ ಬೀಳಿಸಲು ವಿದೇಶದಲ್ಲಿ ತಂತ್ರ ನಡೆದಿದೆ ಎಂದಿದ್ದ ಡಿಕೆ ಶಿವಕುಮಾರ್​ಗೆ​ ತಿರುಗೇಟು

ಬೆಂಗಳೂರಿನಲ್ಲೇ ಪರ್ಸೆಂಟೇಜ್​​​ ನೀಡಲು ಹೇಳಿದ್ದಾರಂತೆ. ಮಂತ್ರಿಗಳು, ಮಂತ್ರಿಗಳ ಚೇಲಾಗಳು ಕಮಿಷನ್ ಕೇಳುತ್ತಿದ್ದಾರಂತೆ. ಇಂತವರು ರಾಹುಲ್ ಮುಂದೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾತಾಡುತ್ತಾರಂತೆ. ಹೊರನೋಟಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುತ್ತಾರೆ. ಆದರೆ ಕಾಂಗ್ರೆಸ್​ ಸ್ವಾತಂತ್ರ್ಯ ಬಂದಾಗಿನಿಂದಲೂ ಅಧಿಕಾರ ನಡೆಸಿದೆ. ಅಂದಿನಿಂದಲೂ ವಲೂಲಿಗಾಗಿಯೇ ಕಾಂಗ್ರೆಸ್​ ಪಕ್ಷ ಇದೆ ಎಂದು ಕಿಡಿಕಾರಿದರು.

ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್​ಗೆ ಅಧಿಕಾರ ನೀಡಿ ಹೋಯ್ತು. ಈಸ್ಟ್ ಇಂಡಿಯಾ ಕಂಪನಿಯ ವಸೂಲಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಕಾಂಗ್ರೆಸ್​​ನವರು ಭ್ರಷ್ಟಾಚಾರ ನಿಲ್ಲಿಸುತ್ತಾರಾ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಬಿಡಿಎ ಅಧಿಕಾರಿಗಳಿಗೆ 250 ಕೋಟಿ ರೂ. ಸಂಗ್ರಹ ಮಾಡಲು ಹೇಳಿದ್ದಾರಂತೆ. ದೆಹಲಿಗೆ ಹೇಗೆ ಹಣ ಕಳಿಸಬೇಕು ಅಂತಾ ಹೇಳುತ್ತೇವೆಂದಿದ್ದಾರಂತೆ. ಕೆಲ ಬಿಡಿಎ ಅಧಿಕಾರಿಗಳೇ ಈ ವಿಚಾರವನ್ನು ನನ್ನ ಬಳಿ ಹೇಳಿದ್ದಾರೆ. ಸದ್ಯ ಯಾವುದೇ ಪೆನ್​ಡ್ರೈವ್ ಬಿಡುಗಡೆ ಮಾಡಲ್ಲ, ಜನರಿಗೆ ಗೊತ್ತಾಗಲಿ ಎಂದು ಹೇಳಿದರು.

ಇನ್ನು ಇದೇ ವೇಳೆ ರಾಜ್ಯ ಪೊಲೀಸ್ ಇಲಾಖೆ ನಡೆಯುತ್ತಿರುವ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗೃಹ ಇಲಾಖೆಯಲ್ಲಿ ಯಾವ ರೀತಿ ವರ್ಗಾವಣೆ ದಂಧೆ ನಡೆಯಿತು, ಪೊಲೀಸ್ ಅಧಿಕಾರಿಗಳನ್ನ ಯಾವ ಮಟ್ಟಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಾನು ವಿದೇಶದಲ್ಲಿದ್ದರೂ ಪ್ರತಿನಿತ್ಯದ ಬೆಳವಣಿಗೆಗಳನ್ನ ಗಮನಿಸಿದ್ದೇನೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:04 am, Fri, 4 August 23

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು