AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಲೆಕ್ಕ ಹಾಕಿರುವುದು ಗೃಹ ಸಚಿವರ ಮನೆಯಲ್ಲಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಎಣಿಕೆ ಮಾಡುತ್ತಿರುವುದು ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದಲ್ಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಲೆಕ್ಕ ಹಾಕಿರುವುದು ಗೃಹ ಸಚಿವರ ಮನೆಯಲ್ಲಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಹೆಚ್​ಡಿಕೆ, ಸ್ಯಾಂಟ್ರೋ ರವಿ, ಆರಗ ಜ್ಞಾನೇಂದ್ರ
TV9 Web
| Edited By: |

Updated on:Jan 08, 2023 | 2:59 PM

Share

ಬೀದರ್: ಸ್ಯಾಂಟ್ರೋ ರವಿ(Santro Ravi) ಜೊತೆಗೆ ಸಚಿವರು, ಬಿಜೆಪಿ (BJP) ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ(HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಯುವತಿಯರ ವಯಸ್ಸು.. ಚೆಂದಕ್ಕೆ ತಕ್ಕಂತೆ ಕೋಡ್​ ವರ್ಡ್: ಗರ್ಲ್ಸ್ ಸಪ್ಲೈಗೆ ಇಟ್ಟಿದ್ದ ‘ಕಾರ್’ ಕೋಡ್‌ವರ್ಡ್​ಗಳು ಹೀಗಿವೆ

ಬೀದರ್​ ಜಿಲ್ಲೆ ಬಸವಕಲ್ಯಾಣದಲ್ಲಿ ಇಂದು(ಜನವರಿ 08) ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.

ಸಚಿವ ಸೋಮಶೇಖರ್ ಜತೆ ಸ್ಯಾಂಟ್ರೋ ರವಿ ವರ್ಗಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಆ ವಿಡಿಯೋ ರೆಕಾರ್ಡ್ ನಾನು ಮಾಡಿಸಿದ್ದಾ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇಂತಹ ವಿಷಯ ಇಟ್ಟುಕೊಂಡು ರಾಜಕೀಯ ಮಾಡುವ ಕರ್ಮ ನನಗಿಲ್ಲ ಸಿಎಂ ದಲ್ಲಾಳಿಗಳೇ ಆಡಳಿತ ನಡೆಸುವ ಸ್ಥಿತಿ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿಗೆ ಆ ಹೆಸರು ಬಂದಿದ್ದು ಹೇಗೆ? ಇಲ್ಲಿದೆ ಮಂಡ್ಯ ಡಿವೈಎಸ್‌ಪಿ ಪುತ್ರನ ಸಂಪೂರ್ಣ ಜಾತಕ

ಕುಮಾರಕೃಪಾ ಹೊಸ ಕಟ್ಟಡದಲ್ಲಿ ಏನೆಲ್ಲಾ ನಡೆಯಿತು. ಉಸ್ತುವಾರಿ ಇದ್ದ ದೇವರಾಜನನ್ನು ಯಾಕೆ ಎತ್ತಂಗಡಿ ಮಾಡಿದರು? ಸಿಎಂ ಹೆಚ್ಚುವರಿ ಕಾರ್ಯದರ್ಶಿ ಜಗದೀಶ್ ಎತ್ತಂಗಡಿ ಯಾಕೆ ಆಯ್ತು? ಜಗದೀಶ್​​ಗೆ ಹೆಚ್ಚುವರಿ ಹೊಣೆ ಇತ್ತು, ಬೆಂಕಿ ಇಲ್ಲದೆ ಹೊಗೆ ಬರುತ್ತಾ? ನಿಮ್ಮ ತಂದೆಯವರು ಹೇಳಿಕೊಟ್ಟಿದ್ದು ಇದೇನಾ ಬೊಮ್ಮಾಯಿ ಅವರೇ? ರಾಯಿಸ್ಟ್ ಎಸ್.ಆರ್.ಬೊಮ್ಮಾಯಿರಿಂದ ಸಿಎಂ ಕಲಿತದ್ದು ಇದೇನಾ? ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಇದೆಲ್ಲಾ ಅಸಹ್ಯ ನಡೆದಿದೆ. ಇದೇನಾ ನಿಮ್ಮ ತಂದೆಯವರಿಂದ ಕಲಿತದ್ದು ಎಂದು ಸಿಎಂ ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:58 pm, Sun, 8 January 23

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ