AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?

HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
TV9 Web
| Edited By: ಸಾಧು ಶ್ರೀನಾಥ್​|

Updated on: Oct 04, 2022 | 6:06 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು (HD Kumaraswamy) ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ತಮ್ಮ ಶಾಸಕರ ಜೊತೆ ಪ್ರಯಾಣ ಹೆಚ್‌ಡಿಕೆ ಇಂದು ಮತ್ತು ನಾಳೆ ಹೈದರಾಬಾದ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ತೆಲಂಗಾಣ (Telangana) ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು (K Chandrasekhar Rao) ನವರಾತ್ರಿ ಸಂದರ್ಭದಲ್ಲಿ ನೂತನ ಪಕ್ಷ ಘೋಷಣೆ ಮಾಡುವುದಾಗಿ ಈ ಹಿಂದೆ ಘೋಷಿಸಿದಂತೆ ನಾಳೆ ಹೈದರಾಬಾದ್‌ನಲ್ಲಿ (Hyderabad) ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಕೆಸಿಆರ್​ ಆಹ್ವಾನದ ಮೇರೆಗೆ HDK ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ.

ಸಿಎಂ ಕೆಸಿಆರ್‌ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಕೆ.ಸಿ.ಆರ್​ ಅವರು ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಅಧಿನಾಯಕ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದರು. ಪಕ್ಷ ಸ್ಥಾಪನೆ ಬಗ್ಗೆಯೂ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿಕೆ ಜತೆ ಚರ್ಚಿಸಿದ್ದರು.

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ