AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ರಾಜಕೀಯ ವೈರತ್ವ ಮರೆತು ಒಂದಾದ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿಪಿ ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. ಸಂಧಾನ ಯಶಸ್ವಿಯಾದ ನಂತರ ಯೋಗೇಶ್ವರ್ ಅವರು ಎರೆಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ರಾಜಕೀಯ ವೈರತ್ವ ಮರೆತು ಒಂದಾದ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿಪಿ ಯೋಗೇಶ್ವರ್
Sunil MH
| Edited By: |

Updated on: Oct 05, 2023 | 1:44 PM

Share

ಬೆಂಗಳೂರು, ಅ.5: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿ.ಪಿ. ಯೋಗೇಶ್ವರ್ (C.P. Yogeshwar) ಮತ್ತು ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ (H.D. Kumaraswamy) ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. ಸಂಧಾನ ಯಶಸ್ವಿಯಾದ ನಂತರ ಯೋಗೇಶ್ವರ್ ಅವರು ಎರೆಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಮಾಗಡಿ ಮಾಜಿ ಶಾಸಕ ಮಂಜು ಮತ್ತು ರಾಮನಗರ ಜಿಲ್ಲಾ ಮುಖಂಡರು ಸೇರಿ ಸಂಧಾನ ಸಭೆ ನಡೆಸಿ ಇಬ್ಬರು ನಾಯಕರನ್ನು ಒಂದಾಗಿಸಿದ್ದಾರೆ. ಇದರ ಬೆನ್ನಲ್ಲೇ ಎರಡನೇ ಬಾರಿ ಆಸ್ಪತ್ರೆಗೆ ಭೇಟಿ ನೀಡಿದ ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ? ಎನ್ ಚಲುವರಾಯಸ್ವಾಮಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಅವರು ಜೆಡಿಎಸ್ ಜೊತೆ ಒಟ್ಟಾಗಿ ಹೋದರೆ ಗೆಲ್ಲುವ ಅವಕಾಶ ಹೆಚ್ಚಿದೆ. ಇದೇ ಕಾರಣಕ್ಕೆ ಜೆಡಿಎಸ್ ಜೊತೆ ಮುನಿಸು ಬಿಟ್ಟು ಕೈಜೋಡಿಸಿದ್ದಾರೆ.

ಜೆಡಿಎಸ್ ಜೊತೆ ಒಟ್ಟಾಗಿ ಹೋಗದೇ ಇದ್ದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ಗೆ ಅನುಕೂಲ ಹೆಚ್ಚು. ಅದ್ದರಿಂದ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಉಭಯ ನಾಯಕರು ಒಂದಾಗಿದ್ದಾರೆ. ಕಳೆಸ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಬೆಂಬಲ ನೀಡದೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಇದರಿಂದ ಕಾಂಗ್ರೆಸ್ ಗೆಲ್ಲಲು ಅನುಕೂಲ ಆಗಿತ್ತು.

ಈಗ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಕುಮಾರಸ್ವಾಮಿ ಯೋಗೇಶ್ವರ್ ಒಟ್ಟಾದರೆ ಬಿಜೆಪಿ ಅಭ್ಯರ್ಥಿ ಗೆಲುವು ಸುಲಭವಾಗಲಿದೆ. ಹೀಗಾಗಿ ಇಬ್ಬರ ನಡುವೆ ಏನೇ ವೈಷಮ್ಯ ಇದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಉಭಯ ನಾಯಕರು ಒಂದಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ