AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ರಾಜಕೀಯ ವೈರತ್ವ ಮರೆತು ಒಂದಾದ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿಪಿ ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. ಸಂಧಾನ ಯಶಸ್ವಿಯಾದ ನಂತರ ಯೋಗೇಶ್ವರ್ ಅವರು ಎರೆಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ರಾಜಕೀಯ ವೈರತ್ವ ಮರೆತು ಒಂದಾದ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿಪಿ ಯೋಗೇಶ್ವರ್
ಸುನಿಲ್​ ಎಮ್​ ಹೆಚ್​
| Edited By: Rakesh Nayak Manchi|

Updated on: Oct 05, 2023 | 1:44 PM

Share

ಬೆಂಗಳೂರು, ಅ.5: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿ.ಪಿ. ಯೋಗೇಶ್ವರ್ (C.P. Yogeshwar) ಮತ್ತು ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ (H.D. Kumaraswamy) ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. ಸಂಧಾನ ಯಶಸ್ವಿಯಾದ ನಂತರ ಯೋಗೇಶ್ವರ್ ಅವರು ಎರೆಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಮಾಗಡಿ ಮಾಜಿ ಶಾಸಕ ಮಂಜು ಮತ್ತು ರಾಮನಗರ ಜಿಲ್ಲಾ ಮುಖಂಡರು ಸೇರಿ ಸಂಧಾನ ಸಭೆ ನಡೆಸಿ ಇಬ್ಬರು ನಾಯಕರನ್ನು ಒಂದಾಗಿಸಿದ್ದಾರೆ. ಇದರ ಬೆನ್ನಲ್ಲೇ ಎರಡನೇ ಬಾರಿ ಆಸ್ಪತ್ರೆಗೆ ಭೇಟಿ ನೀಡಿದ ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ? ಎನ್ ಚಲುವರಾಯಸ್ವಾಮಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಅವರು ಜೆಡಿಎಸ್ ಜೊತೆ ಒಟ್ಟಾಗಿ ಹೋದರೆ ಗೆಲ್ಲುವ ಅವಕಾಶ ಹೆಚ್ಚಿದೆ. ಇದೇ ಕಾರಣಕ್ಕೆ ಜೆಡಿಎಸ್ ಜೊತೆ ಮುನಿಸು ಬಿಟ್ಟು ಕೈಜೋಡಿಸಿದ್ದಾರೆ.

ಜೆಡಿಎಸ್ ಜೊತೆ ಒಟ್ಟಾಗಿ ಹೋಗದೇ ಇದ್ದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ಗೆ ಅನುಕೂಲ ಹೆಚ್ಚು. ಅದ್ದರಿಂದ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಉಭಯ ನಾಯಕರು ಒಂದಾಗಿದ್ದಾರೆ. ಕಳೆಸ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಬೆಂಬಲ ನೀಡದೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಇದರಿಂದ ಕಾಂಗ್ರೆಸ್ ಗೆಲ್ಲಲು ಅನುಕೂಲ ಆಗಿತ್ತು.

ಈಗ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಕುಮಾರಸ್ವಾಮಿ ಯೋಗೇಶ್ವರ್ ಒಟ್ಟಾದರೆ ಬಿಜೆಪಿ ಅಭ್ಯರ್ಥಿ ಗೆಲುವು ಸುಲಭವಾಗಲಿದೆ. ಹೀಗಾಗಿ ಇಬ್ಬರ ನಡುವೆ ಏನೇ ವೈಷಮ್ಯ ಇದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಉಭಯ ನಾಯಕರು ಒಂದಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ