AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಆರ್ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಹೆಚ್​ಡಿ ಕುಮಾರಸ್ವಾಮಿ ಗರಂ; ಪಕ್ಷದಿಂದ ಹೊರಹಾಕಲು ಸೂಚನೆ

ಶಿವರಾಮೇಗೌಡ ಪಕ್ಷದಿಂದ ಹೊರಹಾಕಲು ಹೆಚ್‌.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್ ನೀಡಿ ಪಕ್ಷದಿಂದ ಹೊರಹಾಕಲು ಸೂಚನೆ ಕೊಡಲಾಗಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ‌ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಎಲ್​ಆರ್ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಹೆಚ್​ಡಿ ಕುಮಾರಸ್ವಾಮಿ ಗರಂ; ಪಕ್ಷದಿಂದ ಹೊರಹಾಕಲು ಸೂಚನೆ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on:Jan 31, 2022 | 5:25 PM

Share

ಬೆಂಗಳೂರು: ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಶಿವರಾಮೇಗೌಡ ಪಕ್ಷದಿಂದ ಹೊರಹಾಕಲು ಹೆಚ್‌.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್ ನೀಡಿ ಪಕ್ಷದಿಂದ ಹೊರಹಾಕಲು ಸೂಚನೆ ಕೊಡಲಾಗಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ‌ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಸಚಿವ ಆನಂದ್ ಸಿಂಗ್, ಡಿ.ಕೆ.ಶಿವಕುಮಾರ್​ ಭೇಟಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಉತ್ತರಪ್ರದೇಶ, ಗೋವಾ, ಪಂಜಾಬ್ ಚುನಾವಣೆ ನಡೀತಿದೆ. ಬೆಳಗ್ಗೆ ಒಂದು ಪಕ್ಷ, ಸಂಜೆ ಇನ್ನೊಂದು ಪಾರ್ಟಿಗೆ ಹೋಗ್ತಾರೆ. ಇಂದು ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ. ಇಂಥವರು ಇಂಥದ್ದೇ ಪಕ್ಷದಲ್ಲಿರ್ತಾರೆಂದು ಊಹಿಸಲಾಗಲ್ಲ. ಚುನಾವಣೆ ಸಮಯದಲ್ಲಿ ಏನಾಗುತ್ತೆ ಎಂದು ನೋಡೋಣ ಎಂದು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರ ಕೊಡುಗೆ ಏನು. ನನ್ನನ್ನು ಸುಳ್ಳುಗಾರ ಎನ್ನುವ ಸಂಸದರು ಏನೇನು ಮಾಡಿದ್ದಾರೆ. ನನ್ನ ವಿರುದ್ಧ ಬೇಕಾಬಿಟ್ಟಿ ಆರೋಪಮಾಡಿದರೆ ಸುಮ್ಮನಿರಲ್ಲ ಎಂದು ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಂಸದ ಡಿ.ಕೆ. ಸುರೇಶ್ ಇತ್ತೀಚೆಗೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅವರಿಬ್ಬರ ನಡುವಿನ ವಾಗ್ವಾದ ಮತ್ತೆ ಮುಂದುವರಿದಿದೆ.

ಶಿವರಾಮೇಗೌಡ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ

ಇತ್ತ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಕೆ.ಎಂ. ದೊಡ್ಡಿಯಲ್ಲಿ ಜಿ. ಮಾದೇಗೌಡ ಅಭಿಮಾನಿಗಳಿಂದ ಧರಣಿ ನಡೆಸಲಾಗಿದೆ. ಶಿವರಾಮೇಗೌಡ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಾದೇಗೌಡ ವಿರುದ್ಧ ಶಿವರಾಮೇಗೌಡ ಲಘುವಾಗಿ ಮಾತಾಡಿದ್ದರು. ಹೀಗಾಗಿ ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: ವೈರಲ್ ಆಡಿಯೋ: ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು ನನ್ನದೇ ಎಂದ ಶಿವರಾಮೇಗೌಡ -ಶಿಸ್ತುಕ್ರಮಕ್ಕೆ ಜೆಡಿಎಸ್ ತೀರ್ಮಾನ?

ಇದನ್ನೂ ಓದಿ: ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

Published On - 3:28 pm, Mon, 31 January 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು