AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ; ಎಚ್​ಡಿ ಕುಮಾರಸ್ವಾಮಿ ವ್ಯಂಗ್ಯ

ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ. ಕಾಂಗ್ರೆಸ್‌ ಬಿಜೆಪಿಯ ಬಿ ಟೀಮೋ ಜೆಡಿಎಸ್ ಬಿ ಟೀಮೋ ಎಂಬ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Karnataka Politics: ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ; ಎಚ್​ಡಿ ಕುಮಾರಸ್ವಾಮಿ ವ್ಯಂಗ್ಯ
ಎಚ್​​ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 22, 2023 | 2:08 PM

Share

ಶಿವಮೊಗ್ಗ: ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಅವರು, ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿಕೆಗೆ ತಿರುಗೇಟು ನೀಡಿದರು. ನನ್ನ ವಿರುದ್ಧ ಆ ರೀತಿಯ ಮಾತು ಹೇಳಲು ಸುರ್ಜೇವಾಲ ಅವರಿಗೆ ನಾಚಿಕೆಯಾಗಬೇಕು. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ. ಕಾಂಗ್ರೆಸ್​ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ಎಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ. ಕಾಂಗ್ರೆಸ್‌ ಬಿಜೆಪಿಯ ಬಿ ಟೀಮೋ ಜೆಡಿಎಸ್ ಬಿ ಟೀಮೋ ಎಂಬ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಅಶ್ವತ್ಥನಾರಾಯಣ ವಿರುದ್ಧ ಕಿಡಿ

ಸಚಿವ ಅಶ್ವತ್ಥ ನಾರಾಯಣ ಅವರು ಹಾರೋಹಳ್ಳಿ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ನಡೆದುಕೊಂಡ ರೀತಿ ಸರಿಯಿಲ್ಲ. ಹೋಮ ನಡೆಯುತ್ತಿದ್ದ ಜಾಗಕ್ಕೂ ಹೋಗದೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಸರಿಯಲ್ಲ ಎಂದು ಎಚ್​ಡಿಕೆ ಹೇಳಿದರು. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ಅಶ್ವತ್ಥನಾರಾಯಣ ಮತ್ತು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಮಧ್ಯೆ ಮಾತಿನ ಸಮರ ನಡೆದಿತ್ತು.

ಇದನ್ನೂ ಓದಿ: ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್ ತೆಗೆದುಕೊಳ್ಳುವ ದುರ್ಬುದ್ಧಿ ನನಗೆ ಇಲ್ಲ; ಹಾರೋಹಳ್ಳಿ ಕಾರ್ಯಕ್ರಮದಲ್ಲಿ ಹೌಹಾರಿದ ಅನಿತಾ ಕುಮಾರಸ್ವಾಮಿಗೆ ಅಶ್ವತ್ಥ್ ಟಾಂಗ್

ರಾಮನಗರ ‌ಜಿಲ್ಲೆಯ ಹಾರೋಹಳ್ಳಿಯ ‘ಕರ್ನಾಟಕ ಪಬ್ಲಿಕ್ ಶಾಲೆ’ ಆವರಣದಲ್ಲಿ ಮಂಗಳವಾರ ನಡೆದಿದ್ದ ತಾಲೂಕು ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದ್ದ ಅಶ್ವಥ್ಥನಾರಾಯಣ, ತಾಲೂಕು ರಚನೆಗೆ ಬಿಜೆಪಿ ಸರ್ಕಾರ ಸಾಕಷ್ಟು ಶ್ರಮಿಮಿಸಿದೆ ಎಂದಿದ್ದರು. ಆಗ ಮಧ್ಯ ಪ್ರವೇಶಿಸಿದ್ದ ಅನಿತಾ ಕುಮಾರಸ್ವಾಮಿ ತಾಲೂಕು ರಚನೆಗೆ ನಾನು ಶ್ರಮಿಸಿದ್ದು ಎಂದು ಹೇಳಿದ್ದರ ಜತೆಗೆ, ಕೆಲವು ದಾಖಲೆಗಳನ್ನೂ ಪ್ರದರ್ಶಿಸಿದ್ದರು. ಇದು ಬಿಜೆಪಿ-ಜೆಡಿಎಸ್ ನಡುವಣ ವಾಕ್ಸಮರಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು