AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ; ಎಚ್​ಡಿ ಕುಮಾರಸ್ವಾಮಿ ವ್ಯಂಗ್ಯ

ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ. ಕಾಂಗ್ರೆಸ್‌ ಬಿಜೆಪಿಯ ಬಿ ಟೀಮೋ ಜೆಡಿಎಸ್ ಬಿ ಟೀಮೋ ಎಂಬ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Karnataka Politics: ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ; ಎಚ್​ಡಿ ಕುಮಾರಸ್ವಾಮಿ ವ್ಯಂಗ್ಯ
ಎಚ್​​ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 22, 2023 | 2:08 PM

Share

ಶಿವಮೊಗ್ಗ: ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಅವರು, ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿಕೆಗೆ ತಿರುಗೇಟು ನೀಡಿದರು. ನನ್ನ ವಿರುದ್ಧ ಆ ರೀತಿಯ ಮಾತು ಹೇಳಲು ಸುರ್ಜೇವಾಲ ಅವರಿಗೆ ನಾಚಿಕೆಯಾಗಬೇಕು. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ. ಕಾಂಗ್ರೆಸ್​ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ಎಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ. ಕಾಂಗ್ರೆಸ್‌ ಬಿಜೆಪಿಯ ಬಿ ಟೀಮೋ ಜೆಡಿಎಸ್ ಬಿ ಟೀಮೋ ಎಂಬ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಅಶ್ವತ್ಥನಾರಾಯಣ ವಿರುದ್ಧ ಕಿಡಿ

ಸಚಿವ ಅಶ್ವತ್ಥ ನಾರಾಯಣ ಅವರು ಹಾರೋಹಳ್ಳಿ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ನಡೆದುಕೊಂಡ ರೀತಿ ಸರಿಯಿಲ್ಲ. ಹೋಮ ನಡೆಯುತ್ತಿದ್ದ ಜಾಗಕ್ಕೂ ಹೋಗದೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಸರಿಯಲ್ಲ ಎಂದು ಎಚ್​ಡಿಕೆ ಹೇಳಿದರು. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ಅಶ್ವತ್ಥನಾರಾಯಣ ಮತ್ತು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಮಧ್ಯೆ ಮಾತಿನ ಸಮರ ನಡೆದಿತ್ತು.

ಇದನ್ನೂ ಓದಿ: ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್ ತೆಗೆದುಕೊಳ್ಳುವ ದುರ್ಬುದ್ಧಿ ನನಗೆ ಇಲ್ಲ; ಹಾರೋಹಳ್ಳಿ ಕಾರ್ಯಕ್ರಮದಲ್ಲಿ ಹೌಹಾರಿದ ಅನಿತಾ ಕುಮಾರಸ್ವಾಮಿಗೆ ಅಶ್ವತ್ಥ್ ಟಾಂಗ್

ರಾಮನಗರ ‌ಜಿಲ್ಲೆಯ ಹಾರೋಹಳ್ಳಿಯ ‘ಕರ್ನಾಟಕ ಪಬ್ಲಿಕ್ ಶಾಲೆ’ ಆವರಣದಲ್ಲಿ ಮಂಗಳವಾರ ನಡೆದಿದ್ದ ತಾಲೂಕು ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದ್ದ ಅಶ್ವಥ್ಥನಾರಾಯಣ, ತಾಲೂಕು ರಚನೆಗೆ ಬಿಜೆಪಿ ಸರ್ಕಾರ ಸಾಕಷ್ಟು ಶ್ರಮಿಮಿಸಿದೆ ಎಂದಿದ್ದರು. ಆಗ ಮಧ್ಯ ಪ್ರವೇಶಿಸಿದ್ದ ಅನಿತಾ ಕುಮಾರಸ್ವಾಮಿ ತಾಲೂಕು ರಚನೆಗೆ ನಾನು ಶ್ರಮಿಸಿದ್ದು ಎಂದು ಹೇಳಿದ್ದರ ಜತೆಗೆ, ಕೆಲವು ದಾಖಲೆಗಳನ್ನೂ ಪ್ರದರ್ಶಿಸಿದ್ದರು. ಇದು ಬಿಜೆಪಿ-ಜೆಡಿಎಸ್ ನಡುವಣ ವಾಕ್ಸಮರಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು