AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ! ಜೆಡಿಎಸ್ ಶಾಸಕ ಶ್ರೀನಿವಾಸ್​ಗೌಡ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕೆಂಡ

ರಾಜಕೀಯದಲ್ಲಿ ಇದೆಲ್ಲಾ ಕಾಮನ್ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶ್ರೀನಿವಾಸ್​ಗೌಡ ವಿರುದ್ಧ ಕೆಂಡ ಕಾರಿದ್ದಾರೆ. ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ.

ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ! ಜೆಡಿಎಸ್ ಶಾಸಕ ಶ್ರೀನಿವಾಸ್​ಗೌಡ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕೆಂಡ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Jun 10, 2022 | 1:30 PM

Share

ಬೆಂಗಳೂರು: ಇಂದು (ಜೂನ್ 10) ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election 2022) ಜೆಡಿಎಸ್ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್​ಗೌಡ (Srinivas Gowda) ಕಾಂಗ್ರೆಸ್​ಗೆ ಮತದಾನ ಮಾಡಿದ್ದಾರೆ. ಈ ಬಗ್ಗೆ ಶಾಸಕರೇ ಮಾತನಾಡಿ, ನಾನು ಕಾಂಗ್ರೆಸ್​ಗೆ ಮತ ಹಾಕಿದ್ದೇನೆ. ನಾನು ಹಿಂದೆ ಕಾಂಗ್ರೆಸ್​ನಿಂದಲೇ ಸಚಿವನಾಗಿದ್ದೆ. ಕುಮಾರಸ್ವಾಮಿ ಸಿಟ್ಟಾದರೆ ಆಗಲಿ ಬಿಡಿ. ರಾಜಕೀಯದಲ್ಲಿ ಇದೆಲ್ಲಾ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶ್ರೀನಿವಾಸ್​ಗೌಡ ವಿರುದ್ಧ ಕೆಂಡ ಕಾರಿದ್ದಾರೆ. ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ. ಇಂಥವರಿಗೆ ಪಕ್ಷದಿಂದ ಶಿಸ್ತು ಕ್ರಮ ಅಗತ್ಯವಿಲ್ಲ. ಈ ರೀತಿಯಾಗಿ ಮಾಡಿ ಜನರ ಮುಂದೆ ಹೇಗೆ ಹೋಗುತ್ತಾರೆ ಎಂದು ಗರಂ ಆದರು.

ಇನ್ನುಗುಬ್ಬಿ ಜೆಡಿಎಸ್​ ಶಾಸಕ ಶ್ರೀನಿವಾಸ್​  ಯಾರಿಗೂ ಮತ ಚಲಾಯಿಸಿಲ್ಲ. ಬ್ಯಾಲೆಟ್ ಪೇಪರ್​ ಖಾಲಿ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಇಬ್ಬರು ಅಡ್ಡ ಮತದಾನದ ನಿರೀಕ್ಷೆ ಮೊದಲೇ ಇತ್ತು. ಜೆಡಿಎಸ್​ಗೆ ಮತ ಹಾಕುತ್ತೇನೆ ಎಂದು ಗುಬ್ಬಿ ಶ್ರೀನಿವಾಸ್ ಹೇಳಿ ಈ ರೀತಿ ಮಾಡಿದ್ದಾರೆ. ಇಲ್ಲಿಂದ ಹೊಸ ರಾಜಕೀಯ ಚಾಪ್ಟರ್ ಶುರು ಆಗುತ್ತದೆ. ಜನ ಹೊಸ ಚಾಪ್ಟರ್ ಶುರು ಮಾಡುತ್ತಾರೆ. ಎಂಟರಿಂದ ಹತ್ತು ಜನ ಅಡ್ಡ ಮತದಾನ ಮಾಡುತ್ತಾರೆ ಎನ್ನುವ ಕಾಂಗ್ರೆಸ್ ನಿರೀಕ್ಷೆ ಹುಸಿಯಾಗಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನ ಕಾಂಗ್ರೆಸ್​ಗೆ ಗೂಟ ಹೊಡೆಯುತ್ತಾರೆ ಎಂದರು.

ಇದನ್ನೂ ಓದಿ: ನನ್ನ ಮತವನ್ನು ಪೆಟ್ಟಿಗೆಗೆ ಹಾಕುವ ಮೊದಲು ಶಿವಕುಮಾರ್​ಗೆ ತೋರಿಸಿಲ್ಲ: ಹೆಚ್ ಡಿ ರೇವಣ್ಣ

ಇದನ್ನೂ ಓದಿ
Image
ENG vs NZ: ಸೋಲಿನ ಸುಳಿಯಲ್ಲಿರುವ ನ್ಯೂಜಿಲೆಂಡ್​ಗೆ ಆಘಾತ; ನಾಯಕ ವಿಲಿಯಮ್ಸನ್​ಗೆ ಕೊರೊನಾ ಸೋಂಕು
Image
Historical Place : ಹರಿಯಾಣದ ಅಸಿಗಢ್ ಕೋಟೆ, ಇದು ಜೀವಂತ ಇತಿಹಾಸ
Image
Viral Video: ಸೈಕಲ್ ಸವಾರಿ ವೇಳೆ ಬಿದ್ದ ಗೋರಿಲ್ಲಾ, ನೆಟ್ಟಿಜನ್​ಗಳಿಗೆ ಸಖತ್ ಮನರಂಜನೆ
Image
Viral Video: ಆ್ಯಂಬುಲೆನ್ಸ್​ ಇಲ್ಲದೆ 4 ವರ್ಷದ ಮಗಳ ಹೆಣವನ್ನು ಹೊತ್ತು ಬಸ್​ನಲ್ಲಿ ಹೋದ ತಂದೆ!

ಆಗ ಕೆ ಸಿ ರಾಮಮೂರ್ತಿನ ಗೆಲ್ಲಸಿಕೊಂಡರು. ಅವರನ್ನ ಕಾಂಗ್ರೆಸ್ ಪಕ್ಷ ಉಳಿಸಿಕೊಂಡರಾ? ಈಗಲೂ 14 ಶಾಸಕರು ಸುಮ್ಮನೆ ಕೂರಿಸಿಕೊಂಡಿದ್ದಾರೆ. ಬಿಜೆಪಿನ ಗೆಲ್ಲಿಸಲು ಸಿದ್ದರಾಮಯ್ಯ ಕೂರಿಸಿಕೊಂಡಿದ್ದಾರೆ. ಕಾಂಗ್ರೆಸ್​ನ ಇಬ್ಬರು, ಮೂವರು ಶಾಸಕರ ಜೊತೆ ನಾನು ಮಾತನಾಡಿದ್ದೆ. ಎರಡನೇ ಪ್ರಾಶಸ್ತ್ಯ ಮತ ನಮಗೆ ಹಾಕಿ ಎಂದು ಕೇಳಿದ್ದೆ. ಆದರೆ ಜೆಡಿಎಸ್​ಗೆ ಮತ ಹಾಕಲೇಬೇಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿನ ಗೆಲ್ಲಿಸಲು ಇವರು ಹೀಗೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯನವರ ರಾಜಕಾರಣ. ಇನ್ನುಮುಂದೆ ನಮ್ಮನ್ನ ಬಿಜೆಪಿ ಟೀಂ ಅಂತ ಕರೆಯೋದನ್ನ‌ ನಿಲ್ಲಿಸಿ. ನಾವು ಅವರನ್ನ ಕರೆಯ ಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಾನು ಮತ ಹಾಕಿ ರೇವಣ್ಣನವರಿಗೆ ತೋರಿಸಿದ್ದೇನೆ-ಶ್ರೀನಿವಾಸ್: ನಾನು ಜೆಡಿಎಸ್​​ಗೆ ಮತ ಹಾಕಿದ್ದೇನೆ ಎಂದು ಹೇಳಿದ್ದ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ ಹಾಕಿ ರೇವಣ್ಣನವರಿಗೆ ತೋರಿಸಿದ್ದೇನೆ. ನಮ್ಮ ತಂದೆ ಅಷ್ಟೋ ಇಷ್ಟೋ ವಿದ್ಯಾಭ್ಯಾಸ ಕಲಿಸಿದ್ದಾರೆ. ಮತ ಎಣಿಕೆ ವೇಳೆ ಎಲ್ಲವೂ ಗೊತ್ತಾಗಲಿದೆ. ಕುಮಾರಸ್ವಾಮಿ ಯಾಕೆ ಹೀಗೆ ಹೇಳಿದ್ರೋ ಗೊತ್ತಾಗುತ್ತಿಲ್ಲ. ನನಗೂ ಮತದಾನದ ಹಕ್ಕಿನ ಬೆಲೆ ಗೊತ್ತಿದೆ. ಹೆಚ್​ ಡಿ ಕುಮಾರಸ್ವಾಮಿಯವರ ಮನಸ್ಥಿತಿಯೇ ಹೀಗೆ. ಕುಮಾರಸ್ವಾಮಿ ದೊಡ್ಡವರು, ಅವರು ಏನು ಹೇಳಿದ್ರು ನಡೆಯುತ್ತೆ. ಯಾರದ್ದು ಕೀಳು ಮಟ್ಟದ ರಾಜಕಾರಣ ಎಂದು ಗೊತ್ತಾಗುತ್ತೆ. ಸಂಜೆ ವೇಳೆ ಎಲ್ಲವೂ ಗೊತ್ತಾಗಲಿದೆ. ನಮ್ಮಂಥವರು ಗೆದ್ದಿದ್ದರಿಂದಲೇ ಹೆಚ್​​ಡಿಕೆ ಸಿಎಂ ಆಗಿದ್ದು ಎಂದು ಶ್ರೀನಿವಾಸ್ ಹೇಳಿದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Fri, 10 June 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್