AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ! ಜೆಡಿಎಸ್ ಶಾಸಕ ಶ್ರೀನಿವಾಸ್​ಗೌಡ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕೆಂಡ

ರಾಜಕೀಯದಲ್ಲಿ ಇದೆಲ್ಲಾ ಕಾಮನ್ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶ್ರೀನಿವಾಸ್​ಗೌಡ ವಿರುದ್ಧ ಕೆಂಡ ಕಾರಿದ್ದಾರೆ. ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ.

ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ! ಜೆಡಿಎಸ್ ಶಾಸಕ ಶ್ರೀನಿವಾಸ್​ಗೌಡ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕೆಂಡ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Jun 10, 2022 | 1:30 PM

Share

ಬೆಂಗಳೂರು: ಇಂದು (ಜೂನ್ 10) ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election 2022) ಜೆಡಿಎಸ್ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್​ಗೌಡ (Srinivas Gowda) ಕಾಂಗ್ರೆಸ್​ಗೆ ಮತದಾನ ಮಾಡಿದ್ದಾರೆ. ಈ ಬಗ್ಗೆ ಶಾಸಕರೇ ಮಾತನಾಡಿ, ನಾನು ಕಾಂಗ್ರೆಸ್​ಗೆ ಮತ ಹಾಕಿದ್ದೇನೆ. ನಾನು ಹಿಂದೆ ಕಾಂಗ್ರೆಸ್​ನಿಂದಲೇ ಸಚಿವನಾಗಿದ್ದೆ. ಕುಮಾರಸ್ವಾಮಿ ಸಿಟ್ಟಾದರೆ ಆಗಲಿ ಬಿಡಿ. ರಾಜಕೀಯದಲ್ಲಿ ಇದೆಲ್ಲಾ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶ್ರೀನಿವಾಸ್​ಗೌಡ ವಿರುದ್ಧ ಕೆಂಡ ಕಾರಿದ್ದಾರೆ. ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ. ಇಂಥವರಿಗೆ ಪಕ್ಷದಿಂದ ಶಿಸ್ತು ಕ್ರಮ ಅಗತ್ಯವಿಲ್ಲ. ಈ ರೀತಿಯಾಗಿ ಮಾಡಿ ಜನರ ಮುಂದೆ ಹೇಗೆ ಹೋಗುತ್ತಾರೆ ಎಂದು ಗರಂ ಆದರು.

ಇನ್ನುಗುಬ್ಬಿ ಜೆಡಿಎಸ್​ ಶಾಸಕ ಶ್ರೀನಿವಾಸ್​  ಯಾರಿಗೂ ಮತ ಚಲಾಯಿಸಿಲ್ಲ. ಬ್ಯಾಲೆಟ್ ಪೇಪರ್​ ಖಾಲಿ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಇಬ್ಬರು ಅಡ್ಡ ಮತದಾನದ ನಿರೀಕ್ಷೆ ಮೊದಲೇ ಇತ್ತು. ಜೆಡಿಎಸ್​ಗೆ ಮತ ಹಾಕುತ್ತೇನೆ ಎಂದು ಗುಬ್ಬಿ ಶ್ರೀನಿವಾಸ್ ಹೇಳಿ ಈ ರೀತಿ ಮಾಡಿದ್ದಾರೆ. ಇಲ್ಲಿಂದ ಹೊಸ ರಾಜಕೀಯ ಚಾಪ್ಟರ್ ಶುರು ಆಗುತ್ತದೆ. ಜನ ಹೊಸ ಚಾಪ್ಟರ್ ಶುರು ಮಾಡುತ್ತಾರೆ. ಎಂಟರಿಂದ ಹತ್ತು ಜನ ಅಡ್ಡ ಮತದಾನ ಮಾಡುತ್ತಾರೆ ಎನ್ನುವ ಕಾಂಗ್ರೆಸ್ ನಿರೀಕ್ಷೆ ಹುಸಿಯಾಗಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನ ಕಾಂಗ್ರೆಸ್​ಗೆ ಗೂಟ ಹೊಡೆಯುತ್ತಾರೆ ಎಂದರು.

ಇದನ್ನೂ ಓದಿ: ನನ್ನ ಮತವನ್ನು ಪೆಟ್ಟಿಗೆಗೆ ಹಾಕುವ ಮೊದಲು ಶಿವಕುಮಾರ್​ಗೆ ತೋರಿಸಿಲ್ಲ: ಹೆಚ್ ಡಿ ರೇವಣ್ಣ

ಇದನ್ನೂ ಓದಿ
Image
ENG vs NZ: ಸೋಲಿನ ಸುಳಿಯಲ್ಲಿರುವ ನ್ಯೂಜಿಲೆಂಡ್​ಗೆ ಆಘಾತ; ನಾಯಕ ವಿಲಿಯಮ್ಸನ್​ಗೆ ಕೊರೊನಾ ಸೋಂಕು
Image
Historical Place : ಹರಿಯಾಣದ ಅಸಿಗಢ್ ಕೋಟೆ, ಇದು ಜೀವಂತ ಇತಿಹಾಸ
Image
Viral Video: ಸೈಕಲ್ ಸವಾರಿ ವೇಳೆ ಬಿದ್ದ ಗೋರಿಲ್ಲಾ, ನೆಟ್ಟಿಜನ್​ಗಳಿಗೆ ಸಖತ್ ಮನರಂಜನೆ
Image
Viral Video: ಆ್ಯಂಬುಲೆನ್ಸ್​ ಇಲ್ಲದೆ 4 ವರ್ಷದ ಮಗಳ ಹೆಣವನ್ನು ಹೊತ್ತು ಬಸ್​ನಲ್ಲಿ ಹೋದ ತಂದೆ!

ಆಗ ಕೆ ಸಿ ರಾಮಮೂರ್ತಿನ ಗೆಲ್ಲಸಿಕೊಂಡರು. ಅವರನ್ನ ಕಾಂಗ್ರೆಸ್ ಪಕ್ಷ ಉಳಿಸಿಕೊಂಡರಾ? ಈಗಲೂ 14 ಶಾಸಕರು ಸುಮ್ಮನೆ ಕೂರಿಸಿಕೊಂಡಿದ್ದಾರೆ. ಬಿಜೆಪಿನ ಗೆಲ್ಲಿಸಲು ಸಿದ್ದರಾಮಯ್ಯ ಕೂರಿಸಿಕೊಂಡಿದ್ದಾರೆ. ಕಾಂಗ್ರೆಸ್​ನ ಇಬ್ಬರು, ಮೂವರು ಶಾಸಕರ ಜೊತೆ ನಾನು ಮಾತನಾಡಿದ್ದೆ. ಎರಡನೇ ಪ್ರಾಶಸ್ತ್ಯ ಮತ ನಮಗೆ ಹಾಕಿ ಎಂದು ಕೇಳಿದ್ದೆ. ಆದರೆ ಜೆಡಿಎಸ್​ಗೆ ಮತ ಹಾಕಲೇಬೇಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿನ ಗೆಲ್ಲಿಸಲು ಇವರು ಹೀಗೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯನವರ ರಾಜಕಾರಣ. ಇನ್ನುಮುಂದೆ ನಮ್ಮನ್ನ ಬಿಜೆಪಿ ಟೀಂ ಅಂತ ಕರೆಯೋದನ್ನ‌ ನಿಲ್ಲಿಸಿ. ನಾವು ಅವರನ್ನ ಕರೆಯ ಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಾನು ಮತ ಹಾಕಿ ರೇವಣ್ಣನವರಿಗೆ ತೋರಿಸಿದ್ದೇನೆ-ಶ್ರೀನಿವಾಸ್: ನಾನು ಜೆಡಿಎಸ್​​ಗೆ ಮತ ಹಾಕಿದ್ದೇನೆ ಎಂದು ಹೇಳಿದ್ದ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ ಹಾಕಿ ರೇವಣ್ಣನವರಿಗೆ ತೋರಿಸಿದ್ದೇನೆ. ನಮ್ಮ ತಂದೆ ಅಷ್ಟೋ ಇಷ್ಟೋ ವಿದ್ಯಾಭ್ಯಾಸ ಕಲಿಸಿದ್ದಾರೆ. ಮತ ಎಣಿಕೆ ವೇಳೆ ಎಲ್ಲವೂ ಗೊತ್ತಾಗಲಿದೆ. ಕುಮಾರಸ್ವಾಮಿ ಯಾಕೆ ಹೀಗೆ ಹೇಳಿದ್ರೋ ಗೊತ್ತಾಗುತ್ತಿಲ್ಲ. ನನಗೂ ಮತದಾನದ ಹಕ್ಕಿನ ಬೆಲೆ ಗೊತ್ತಿದೆ. ಹೆಚ್​ ಡಿ ಕುಮಾರಸ್ವಾಮಿಯವರ ಮನಸ್ಥಿತಿಯೇ ಹೀಗೆ. ಕುಮಾರಸ್ವಾಮಿ ದೊಡ್ಡವರು, ಅವರು ಏನು ಹೇಳಿದ್ರು ನಡೆಯುತ್ತೆ. ಯಾರದ್ದು ಕೀಳು ಮಟ್ಟದ ರಾಜಕಾರಣ ಎಂದು ಗೊತ್ತಾಗುತ್ತೆ. ಸಂಜೆ ವೇಳೆ ಎಲ್ಲವೂ ಗೊತ್ತಾಗಲಿದೆ. ನಮ್ಮಂಥವರು ಗೆದ್ದಿದ್ದರಿಂದಲೇ ಹೆಚ್​​ಡಿಕೆ ಸಿಎಂ ಆಗಿದ್ದು ಎಂದು ಶ್ರೀನಿವಾಸ್ ಹೇಳಿದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Fri, 10 June 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್