AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈಲ ಬೆಲೆ ಏರಿಕೆಗೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ನಿರಂತರವಾಗಿ 13 ದಿನದಿಂದ ಬೆಲೆ ಏರಿಕೆಯಾಗುತ್ತಿದೆ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., ಡೀಸೆಲ್ ಬೆಲೆ ಲೀಟರಿಗೆ 92.83 ರೂಪಾಯಿಗೆ ಜಿಗಿದಿದೆ.

ತೈಲ ಬೆಲೆ ಏರಿಕೆಗೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Apr 03, 2022 | 10:59 AM

Share

ಬೆಂಗಳೂರು: ಇಂದು (ಏಪ್ರಿಲ್ 3) ಬೆಳಗ್ಗೆ ಒಂದು ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದೆ. ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರ ಮತ್ತೆ ಏರಿಕೆಯಾಗಿದೆ. ಕಳೆದ 13 ದಿನಗಳಲ್ಲಿ ತೈಲ ದರ 8 ರೂಪಾಯಿ ಏರಿಕೆಯಾಗಿದೆ. ಇದಪ್ಪಾ ‘ಬಹುಜನ ಹಿತಾಯ, ಬಹುಜನ ಸುಖಾಯ’ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಅಂತ ತೈಲ ದರ ಏರಿಕೆಗೆ ಟ್ವಿಟರ್​ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ 13 ದಿನದಿಂದ ಬೆಲೆ ಏರಿಕೆಯಾಗುತ್ತಿದೆ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., ಡೀಸೆಲ್ ಬೆಲೆ ಲೀಟರಿಗೆ 92.83 ರೂಪಾಯಿಗೆ ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿಯಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಎಂದಿದ್ದಾರೆ.

ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಇದನ್ನೂ ಓದಿ

ಶ್ರೀಲಂಕಾಕ್ಕೆ ಭಾರತದಿಂದ ಅಕ್ಕಿ ಸರಬರಾಜು ಆರಂಭ: ಆರ್ಥಿಕ ಸಂಕಷ್ಟದಲ್ಲಿರುವ ದೇಶಕ್ಕೆ ಸಹಾಯಹಸ್ತ

Poetry: ಅವಿತಕವಿತೆ; ಆಗಿನ್ನೂ ಮಸೀದಿಗಳೇ ನನಗೆ ಎಟುಕಿರಲಿಲ್ಲ, ಇನ್ನು ಪಾಕಿಸ್ತಾನ ಗೊತ್ತಾಗುವುದು ಹೇಗೆ?

Published On - 10:56 am, Sun, 3 April 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?