AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on: Oct 15, 2023 | 1:52 PM

Share

ಬೆಂಗಳೂರು, (ಅಕ್ಟೋಬರ್ 15): ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ ದಾಳಿಯಲ್ಲಿ ಮಾಜಿ ಕಾರ್ಪೋರೆಟರ್​ ಹಾಗೂ ಬಿಲ್ಡರ್​ ಮನೆಗಳಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ಇದು ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷಗಳು ಕಾಂಗ್ರೆಸ್ ಸರ್ಕಾರವ ವಿರುದ್ಧ ಮುಗಿಬಿದ್ದಿವೆ. ಪಂಚರಾಜ್ಯ ಚುನಾವಣೆಗೆ ಸಂಗ್ರಹಿಸಲ್ಪ ಹಣ ಎಂದು ಆರೋಪಿಸಿದ್ದಾರೆ. ಇದರ ಮಧ್ಯೆ ಇದೀಗ ಮಾಜಿ ಮುಖ್ಯಮಂತ್ರಿ ಹೆಎಚ್​ಡಿ ಕುಮಾರಸ್ವಾಮಿ (HD Kumaraswamy), ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ ಎಂದು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ. ಅದರ ಒಳಗುಟ್ಟು ರಟ್ಟಾಗಿದೆ. ‘ಬ್ರ್ಯಾಂಡ್’ ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿಟಿ ರವಿ ವ್ಯಂಗ್ಯ

ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಕಿರಿಕಾರಿದ್ದಾರೆ.

ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ, ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಆರೋಪಿಸಿದ್ದಾರೆ.

ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ. ನೂರು ಎಕರೆ ಸರಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಸಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಬೀದಿಗಿಳಿದಾರು ಹುಷಾರು ಎಂದು ಎಚ್ಚರಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು