AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಬಿಸಿ: ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ ಎಂದ ಕುಮಾರಸ್ವಾಮಿ

ಕರ್ನಾಟಕದ ಗ್ರಾಮಗಳಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್‌ ಶುರುವಾಗಿದೆ. ಇದರಿಂದ ಬೇಸತ್ತ ರೈತರು ವಿದ್ಯುತ್ ಪ್ರಸರಣಾ ಕೇಂದ್ರಗಳಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಳೆಗಾಲದಲ್ಲೇ ಲೋಡ್ ಶೆಡ್ಡಿಂಗ್​ ಶುರುವಾದ್ರೆ ಇನ್ನು ಬೇಸಿಗೆಯ ಕಥೆ ಹೇಗೆ ಎನ್ನುವ ಆತಂಕ ಶುರುವಾಗಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ ಎಂದಿದ್ದಾರೆ.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಬಿಸಿ: ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ ಎಂದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on:Oct 10, 2023 | 11:05 AM

Share

ಬೆಂಗಳೂರು, (ಅಕ್ಟೋಬರ್ 10): ರಾಜ್ಯದಲ್ಲಿ ಮಳೆಗಾಲದಲ್ಲೇ ಅನಿಯಮಿತ ಲೋಡ್‌ ಶೆಡ್ಡಿಂಗ್‌ (loadshedding) ಆರಂಭವಾಗಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ವಿದ್ಯುತ್‌ (electricity) ಬೇಡಿಕೆ ಹೆಚ್ಚಾಗಿ ಉತ್ಪಾದನೆ ಕುಂಠಿತಗೊಂಡು, ವಿದ್ಯುತ್‌ ಅಭಾವ ಸೃಷ್ಟಿಯಾಗುತ್ತದೆ. ಆದರೆ, ಈ ಬಾರಿ ಅಕ್ಟೋಬರ್‌ನಲ್ಲೇ ವಿದ್ಯುತ್‌ ಕೊರತೆ ಎದುರಾಗಿದೆ. ಇದಕ್ಕೆ ಕಾರಣ ಮಳೆ ಕೊರತೆ. ಹೌದು…ಸರಿಯಾದ ಸಮಯಕ್ಕೆ ಮಳೆಯಾಗದಿರುವುದರಿಂದ ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಕಡಿಮೆಯಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಹಳ್ಳಿಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಾಡುತ್ತಿದೆ. ಇನ್ನೊಂದೆಡೆ ಯಾವುದೇ ಲೋಕಡ್ ಶೆಡ್ಡಿಂಗ್ ಮಾಡುತ್ತಿಲ್ಲವೆಂದು ಇಂಧನ ಸಚಿವ ಜಾರ್ಜ್​ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಹ ಗ್ರಾಮಗಲ್ಲಿ ಲೋಡ್ ಶೆಡ್ಡಿಂಗ್ ಶಾಕ್ ಎದುರಾಗಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 6ನೇ ಗ್ಯಾರಂಟಿ ಕೊಡಲು ಸನ್ನಾಹವನ್ನೂ ನಡೆಸಿದೆ. ಅದರ ಹೆಸರು ಕತ್ತಲೆಭಾಗ್ಯ ಎಂದು ಹೆಚ್​ಡಿಕೆ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸನ್ನಾಹವನ್ನೂ ನಡೆಸಿದೆ. ಅದರ ಹೆಸರು ಕತ್ತಲೆಭಾಗ್ಯ. ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೆಚ್ಚಾದ ವಿದ್ಯುತ್ ಬೇಡಿಕೆ: ಕೊರತೆ ಆಗದಂತೆ ನಾವು ಪ್ಲ್ಯಾನ್ ಮಾಡಿಕೊಂಡಿದ್ದೇವೆ ಎಂದ ಜಾರ್ಚ್

ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಕಾಂಗ್ರೆಸ್ ಸರ್ಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ. ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆ ಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ. ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಎಂದು ಪ್ರಶ್ನಿಸಿದ್ದಾರೆ.

ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:38 am, Tue, 10 October 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು