AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಾಡಿನ ಹಿತರಕ್ಷಣೆಗಾಗಿ ನಾವು ಈ ಮೈತ್ರಿಗೆ ಮುಂದಾಗಿದೇವೆ; ಹಾಸನದಲ್ಲಿ ಹೆಚ್​ಡಿ ಕುಮಾರಸ್ವಾಮಿ

ಎಷ್ಟು ಕ್ಷೇತ್ರದಲ್ಲಿ ನಾವು ಸ್ಪರ್ಧೆ ಮಾಡ್ತೇವೆ ಎಂಬುದು ಮುಖ್ಯವಲ್ಲ. 28ಕ್ಕೆ 28 ಕ್ಷೇತ್ರದಲ್ಲೂ ಈ ಮೈತ್ರಿಯ ಸಂಬಂಧ ಚೆನ್ನಾಗಿ ಇರಬೇಕು. ಎರಡೂ ಪಕ್ಷಗಳು ಗೆಲ್ಲಬೇಕು ಎಂಬುದೇ ನಮ್ಮ ಮೊದಲ ಆದ್ಯತೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ನಾಡಿನ ಹಿತರಕ್ಷಣೆಗಾಗಿ ನಾವು ಈ ಮೈತ್ರಿಗೆ ಮುಂದಾಗಿದೇವೆ; ಹಾಸನದಲ್ಲಿ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: Ganapathi Sharma|

Updated on: Sep 13, 2023 | 7:00 PM

Share

ಹಾಸನ, ಸೆಪ್ಟೆಂಬರ್ 13: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ (BJP JDS alliance) ಸಾಧ್ಯತೆ ಬಗ್ಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬಹಿರಂಗ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, ಈ ನಾಡಿನ ಹಿತರಕ್ಷಣೆಗಾಗಿ ನಾವು ಈ ಮೈತ್ರಿಗೆ ಮುಂದಾಗಿದೇವೆ. ಒಂದೆಡೆ ಲೂಟಿ ಹೊಡೆಯುತ್ತಿದಾರೆ, ಇನ್ನೊಂದೆಡೆ ಇಂತಹ ಪರಿಸ್ಥಿತಿ ಇದೆ. ಇದೆಲ್ಲವನ್ನೂ ಸರಿಮಾಡಬೇಕಿದೆ ಎಂದು ಹೇಳಿದ್ದಾರೆ.

ಎಷ್ಟು ಕ್ಷೇತ್ರದಲ್ಲಿ ನಾವು ಸ್ಪರ್ಧೆ ಮಾಡ್ತೇವೆ ಎಂಬುದು ಮುಖ್ಯವಲ್ಲ. 28ಕ್ಕೆ 28 ಕ್ಷೇತ್ರದಲ್ಲೂ ಈ ಮೈತ್ರಿಯ ಸಂಬಂಧ ಚೆನ್ನಾಗಿ ಇರಬೇಕು. ಎರಡೂ ಪಕ್ಷಗಳು ಗೆಲ್ಲಬೇಕು ಎಂಬುದೇ ನಮ್ಮ ಮೊದಲ ಆದ್ಯತೆ. ಹಣ, ಅಧಿಕಾರದ ಮದದಲ್ಲಿ 20, 24 ಸೀಟು ಅಂತಾ ಹೇಳುತ್ತಿದ್ದಾರೆ. ಹಾಸನದಲ್ಲೂ ಮುಗಿಸಿ ಬಿಡ್ತೀವಿ ಎಂದು ಹೇಳುತ್ತಿದ್ದಾರೆ. ನಮ್ಮ ಮುಂದೆ ಇರುವ ಗುರಿ 28ಕ್ಕೆ 28 ಸ್ಥಾನವನ್ನೂ ಗೆಲ್ಲುವುದಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ; ಹೆಚ್​ಡಿ ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಮೈತ್ರಿಗೆ ಜೆಡಿಎಸ್​ ಕಾರ್ಯಕರ್ತರ ವಿರೋಧ ಇದೆಯೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ಯಾವತ್ತೂ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಮುಂದುವರಿದಿದೆ. ಮತ್ತೊಂದೆಡೆ ಬಿಜೆಪಿ ಹೋರಾಟವೂ ಮುಂದುವರಿದಿದೆ. ನಮ್ಮೆರಡು ಪಕ್ಷಗಳಲ್ಲಿ ಯಾವುದೇ ಗೊಂದಲ ಇಲ್ಲ, ಹೊಂದಾಣಿಕೆ ಇದೆ. ಶುಭ ಘಳಿಗೆ ಆರಂಭ ಎಂದು ಈ ನಾಡಿನ ಜನತೆ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಕಚೇರಿಗೆ ನನ್ನ ಹೆಣವೂ ಹೋಗಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್

ಬಿಜೆಪಿ ಕಚೇರಿಗೆ ನನ್ನ ಹೆಣವೂ ಹೋಗಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಕುಮಾರಸ್ವಾಮಿ, ಅವರು ಹಾಗೆ ಹೇಳುತ್ತಾರೆ. ಆ ಬಗ್ಗೆ ಮುಂದೆ ಚರ್ಚೆ ಮಾಡೋಣ. 2004 ರಲ್ಲಿ ಯಾಱರನ್ನು ಇಟ್ಟುಕೊಂಡು ಯಾರನ್ನು ಭೇಟಿಯಾದರು? ಜೆಡಿಎಸ್​ನಲ್ಲಿದ್ದರೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಯಾಱರನ್ನು ಭೇಟಿಯಾಗಿದ್ದರು, ಯಾರು ಸಿಎಂ ಆಗಬೇಕು, ಯಾರು ಡಿಸಿಎಂ ಆಗಬೇಕೆಂದು ಚರ್ಚಿಸಿದ್ದರು ಎಂಬುದೆಲ್ಲ ಈಗ ಇತಿಹಾಸ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಬಂದಿದೆ-ಬರಗಾಲ ತಂದಿದೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ, ವ್ಯಂಗ್ಯ

ಆಗಿನ ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಚರ್ಚಿಸಿದ್ದ ಇತಿಹಾಸ ಇದೆ. 2008 ರಲ್ಲಿ ಮೂವರು ಬಿಎಸ್ ಯಡಿಯೂರಪ್ಪ ಜೊತೆ ಮಂತ್ರಿ ಆಗಲು ಹೊರಟಿರಲಿಲ್ಲವೇ? ಹೆಚ್​.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿ ಹಣಕಾಸು ಖಾತೆ ಕೊಡಿ ಎಂದು ಬಿಎಸ್​​ವೈ ಜೊತೆ ಚರ್ಚೆ ಆಗಿರಲಿಲ್ಲವೇ? ಈಗ ಬಿಜೆಪಿಗೆ ನನ್ನ ಹೆಣವೂ ಹೋಗಲ್ಲ ಎಂದು ಹೇಳುತ್ತಿದ್ದೀರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜತೆಗೆ, ಇವರು ನಮಗಿಂತ ಮೊದಲೇ ಅರ್ಜಿ ಹಾಕಿಕೊಂಡು ಹೋಗಿದ್ದವರು ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ