AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಸಿಎಂ ಇಬ್ರಾಹಿಂ

ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ Image Credit source: ANI
ಸುನಿಲ್​ ಎಮ್​ ಹೆಚ್​
| Edited By: |

Updated on: Oct 17, 2023 | 6:32 PM

Share

ಬೆಂಗಳೂರು, ಅಕ್ಟೋಬರ್ 17: ಜೆಡಿಎಸ್ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಎನ್​ಡಿಎ ಜತೆ ಮೈತ್ರಿ ಘೋಷಣೆ ಮಾಡಿರುವುದಕ್ಕೆ ಇಬ್ರಾಹಿಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಸೋಮವಾರ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ್ದ ಅವರು, ಜೆಡಿಎಸ್​ ಅಧ್ಯಕ್ಷ ತಾವು. ತಮ್ಮ ಅನುಮತಿ ಇಲ್ಲದೆ ಯಾವುದೇ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು. ಅಲ್ಲದೆ, ತಮ್ಮ ಬಳಿ ಸಮಾಲೋಚನೆ ಮಾಡದೆ ಮೈತ್ರಿ ಘೋಷಣೆ ಮಾಡಿದ್ದಕ್ಕೆ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಮ್ಮದೇ ಒರಿಜಿನಲ್ ಜೆಡಿಎಸ್: ಇಬ್ರಾಹಿಂ ಈ ಹೇಳಿಕೆ ಹಿಂದೆ ಇದ್ಯಾ ಅವರ ಕೈವಾಡ? ಜಿಟಿ ದೇವೇಗೌಡ ಬಾಂಬ್

ಅಲ್ಲದೆ, ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಎಲ್ಲ ಶಾಸಕರ ಜತೆ ಚರ್ಚೆ ಮಾಡಲಾಗುವುದು. ನಂತರ ಪತ್ರ ಮುಖೇನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರಿಗೆ ಮನವಿ ಸಲ್ಲಿಸಲಾಗುವುದು ಎಂದು ಇಬ್ರಾಹಿಂ ಹೇಳಿದ್ದರು. ಅಲ್ಲದೆ, ದೇವೇಗೌಡರ ಮಾತನ್ನು ಮೀರಿ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೆಚ್​ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಿದ್ದಾರೆ ಎಂಬ ವದಂತಿಗಳೂ ಹಬ್ಬಿದ್ದವು. ಇದಾದ ನಂತರ ಉಚ್ಚಾಟನೆ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ