AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಸಿಎಂ ಇಬ್ರಾಹಿಂ

ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ Image Credit source: ANI
Sunil MH
| Edited By: |

Updated on: Oct 17, 2023 | 6:32 PM

Share

ಬೆಂಗಳೂರು, ಅಕ್ಟೋಬರ್ 17: ಜೆಡಿಎಸ್ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಎನ್​ಡಿಎ ಜತೆ ಮೈತ್ರಿ ಘೋಷಣೆ ಮಾಡಿರುವುದಕ್ಕೆ ಇಬ್ರಾಹಿಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಸೋಮವಾರ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ್ದ ಅವರು, ಜೆಡಿಎಸ್​ ಅಧ್ಯಕ್ಷ ತಾವು. ತಮ್ಮ ಅನುಮತಿ ಇಲ್ಲದೆ ಯಾವುದೇ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು. ಅಲ್ಲದೆ, ತಮ್ಮ ಬಳಿ ಸಮಾಲೋಚನೆ ಮಾಡದೆ ಮೈತ್ರಿ ಘೋಷಣೆ ಮಾಡಿದ್ದಕ್ಕೆ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಮ್ಮದೇ ಒರಿಜಿನಲ್ ಜೆಡಿಎಸ್: ಇಬ್ರಾಹಿಂ ಈ ಹೇಳಿಕೆ ಹಿಂದೆ ಇದ್ಯಾ ಅವರ ಕೈವಾಡ? ಜಿಟಿ ದೇವೇಗೌಡ ಬಾಂಬ್

ಅಲ್ಲದೆ, ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಎಲ್ಲ ಶಾಸಕರ ಜತೆ ಚರ್ಚೆ ಮಾಡಲಾಗುವುದು. ನಂತರ ಪತ್ರ ಮುಖೇನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರಿಗೆ ಮನವಿ ಸಲ್ಲಿಸಲಾಗುವುದು ಎಂದು ಇಬ್ರಾಹಿಂ ಹೇಳಿದ್ದರು. ಅಲ್ಲದೆ, ದೇವೇಗೌಡರ ಮಾತನ್ನು ಮೀರಿ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೆಚ್​ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಿದ್ದಾರೆ ಎಂಬ ವದಂತಿಗಳೂ ಹಬ್ಬಿದ್ದವು. ಇದಾದ ನಂತರ ಉಚ್ಚಾಟನೆ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು