AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ, ಈ ಬಾರಿ ಯಾರ ಜೊತೆಗೆ ಹೋಗಿದ್ದಾರೆ ಗೊತ್ತಾ?

ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಈಗ ಮತ್ತೆ ವಿದೇಶಕ್ಕೆ ಹಾರಿದ್ದಾರೆ.

ಮತ್ತೆ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ, ಈ ಬಾರಿ ಯಾರ ಜೊತೆಗೆ ಹೋಗಿದ್ದಾರೆ ಗೊತ್ತಾ?
ಹೆಚ್​ಡಿ ಕುಮಾರಸ್ವಾಮಿ Image Credit source: PTI
ನವೀನ್ ಕುಮಾರ್ ಟಿ
| Updated By: ರಮೇಶ್ ಬಿ. ಜವಳಗೇರಾ|

Updated on: Aug 08, 2023 | 9:02 AM

Share

ಬೆಂಗಳೂರು, (ಆಗಸ್ಟ್ 08): ಮೊನ್ನೇ ಅಷ್ಟೇ ಕುಟುಂಬದ ಜೊತೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy), ಇದೀಗ ಮತ್ತೆ ವಿದೇಶಕ್ಕೆ (Foreign) ಹಾರಿದ್ದಾರೆ. ಹೌದು.. ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಈಗ ಮತ್ತೆ ಸಿಂಗಾಪುರಕ್ಕೆ ತೆರಳಿದ್ದಾರೆ. ನಿನ್ನೆ(ಆಗಸ್ಟ್ 07) ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: ಯುರೋಪ್ ಪ್ರವಾಸದಿಂದ ಕುಮಾರಸ್ವಾಮಿ ವಾಪಸ್, ಸರ್ಕಾರ ಬೀಳಿಸಲು ವಿದೇಶದಲ್ಲಿ ತಂತ್ರ ನಡೆದಿದೆ ಎಂದಿದ್ದ ಡಿಕೆ ಶಿವಕುಮಾರ್​ಗೆ​ ತಿರುಗೇಟು

ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಸಾಥ್ ನೀಡಿದ್ದಾರೆ. ಕುಮಾರಸ್ವಾಮಿ ಅವರು ಈ ವಿದೇಶ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ. ಆದ್ರೆ, ಯಾವ ಕಾರಣಕ್ಕೆ ಹೋಗಿದ್ದಾರೆ ಎಂದು ಕಾರಣ ತಿಳಿದುಬಂದಿಲ್ಲ.

ಕಳೆದ ವಾರ ಅಷ್ಟೇ ಕುಮಾರಸ್ವಾಮಿ ಕುಟುಂಬದ ಜೊತೆ ಯುರೋಪ್ ಪ್ರವಾಸಕ್ಕೆ ತೆರಳಿದ್ದರು. ಕುಮಾರಸ್ವಾಮಿ ವಿದೇಶ ಪ್ರವಾಸ ಬೆನ್ನಲ್ಲೇ ಇತ್ತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು. ಸಿಂಗಾಪುರಕ್ಕೆ ಹೋಗಿ ನಮ್ಮ ಸರ್ಕಾರವನ್ನು ಬೀಳಿಸುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದ್ದರು. ಇದೀಗ ಮತ್ತೆ ಕುಮಾರಸ್ವಾಮಿ ವಿದೇಶಕ್ಕೆ ಹಾರಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!