Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
Follow us
TV9 Web
| Updated By: guruganesh bhat

Updated on: Oct 02, 2021 | 7:32 PM

ಬೆಂಗಳೂರು: ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಜೇಬು ತುಂಬಿಸಿದ್ದೀರಿ? ಡಿಆರ್ಪಿ ಎಂದರೆ ನಿಮಗೆ ಬೇಕಾದಂತೆ ಬಳಸಿಕೊಳ್ಳುವುದಾ? ಗುತ್ತಿಗೆದಾರರಿಗೆ ಕೊಡೋಕೆ ನಿಮ್ಮ ಬಳಿ ದುಡ್ಡಿದೆ. ಆದರೆ ರೈತರಿಗೆ ದುಡ್ಡು ಕೊಡಲು ನಿಮ್ಮ ಬಳಿ ಆಗದು ಅಲ್ಲವೇ? ನಾವು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅನ್ಯಾಯ ಮಾಡಿದ್ದೀವೆಂದು ಸುಳ್ಳು ಅರೋಪ ಮಾಡಿದ್ದಾರೆ. ನೀರಾವರಿ ಹೋರಾಟ ಮಾಡಿದ ಕುಟುಂಬದಲ್ಲಿ ನಾವು ಹುಟ್ಟಿದ್ದೇವೆ ಎಂಬುದನ್ನು ಮರೆಯಬೇಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಎತ್ತಿನಹೊಳೆ ಯೊಜನೆಯ ಹೆಸರಲ್ಲಿ ಯಾರೆಲ್ಲ ಕಿಸೆ ತುಂಬಿಸಿಕೊಂಡಿದ್ದೀರಿ ಎಂದು ಅವರು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ನನಗೆ ಸಿಕ್ಕಿದ್ದು ತಾತ್ಕಾಲಿಕ ಅಧಿಕಾರ. ಸಿದ್ದರಾಮಯ್ಯ ಖಜಾನೆ ಭರ್ತಿ ಮಾಡಿಹೋಗಿದ್ದಕ್ಕೆ ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಮನೆ ಕೊಡೋದಕ್ಕಾಗಿಲ್ಲ ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಸಿದ್ದರಾಮಯ್ಯ ಐದು ವರ್ಷ ಆಡಳಿತ ಮಾಡಿದ್ರಲ್ಲ ಯಾಕೆ ಆಗಲಿಲ್ಲ. ಇದೇ ರಮೇಶ್ ಕುಮಾರ್ ಏನೆಲ್ಲ ಮಾತನಾಡಿದ್ರು ಸಭೆಯಲ್ಲಿ? ಇವರೆಲ್ಲ ಸತ್ಯ ಹರಿಶ್ಚಂದ್ರ ಮಕ್ಕಳು. ನಮ್ಮ ಪಕ್ಷದಿಂದ ಮಹಾನಾಯಕರ ಹಿಂಡೇ ಹೋಯಿತು. ಆದರೂ ನಾವು 45 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆವು ಎಂದು ಅವರು ವ್ಯಾಖ್ಯಾನಿಸಿದರು.

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಜಾರಿಗಾಗಿ ಮತ್ತೊಮ್ಮೆ ಪಾದಯಾತ್ರೆಗೆ ಬಾಗಲಕೋಟೆ ಸಜ್ಜು

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ