AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
TV9 Web
| Edited By: |

Updated on: Oct 02, 2021 | 7:32 PM

Share

ಬೆಂಗಳೂರು: ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಜೇಬು ತುಂಬಿಸಿದ್ದೀರಿ? ಡಿಆರ್ಪಿ ಎಂದರೆ ನಿಮಗೆ ಬೇಕಾದಂತೆ ಬಳಸಿಕೊಳ್ಳುವುದಾ? ಗುತ್ತಿಗೆದಾರರಿಗೆ ಕೊಡೋಕೆ ನಿಮ್ಮ ಬಳಿ ದುಡ್ಡಿದೆ. ಆದರೆ ರೈತರಿಗೆ ದುಡ್ಡು ಕೊಡಲು ನಿಮ್ಮ ಬಳಿ ಆಗದು ಅಲ್ಲವೇ? ನಾವು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅನ್ಯಾಯ ಮಾಡಿದ್ದೀವೆಂದು ಸುಳ್ಳು ಅರೋಪ ಮಾಡಿದ್ದಾರೆ. ನೀರಾವರಿ ಹೋರಾಟ ಮಾಡಿದ ಕುಟುಂಬದಲ್ಲಿ ನಾವು ಹುಟ್ಟಿದ್ದೇವೆ ಎಂಬುದನ್ನು ಮರೆಯಬೇಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಎತ್ತಿನಹೊಳೆ ಯೊಜನೆಯ ಹೆಸರಲ್ಲಿ ಯಾರೆಲ್ಲ ಕಿಸೆ ತುಂಬಿಸಿಕೊಂಡಿದ್ದೀರಿ ಎಂದು ಅವರು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ನನಗೆ ಸಿಕ್ಕಿದ್ದು ತಾತ್ಕಾಲಿಕ ಅಧಿಕಾರ. ಸಿದ್ದರಾಮಯ್ಯ ಖಜಾನೆ ಭರ್ತಿ ಮಾಡಿಹೋಗಿದ್ದಕ್ಕೆ ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಮನೆ ಕೊಡೋದಕ್ಕಾಗಿಲ್ಲ ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಸಿದ್ದರಾಮಯ್ಯ ಐದು ವರ್ಷ ಆಡಳಿತ ಮಾಡಿದ್ರಲ್ಲ ಯಾಕೆ ಆಗಲಿಲ್ಲ. ಇದೇ ರಮೇಶ್ ಕುಮಾರ್ ಏನೆಲ್ಲ ಮಾತನಾಡಿದ್ರು ಸಭೆಯಲ್ಲಿ? ಇವರೆಲ್ಲ ಸತ್ಯ ಹರಿಶ್ಚಂದ್ರ ಮಕ್ಕಳು. ನಮ್ಮ ಪಕ್ಷದಿಂದ ಮಹಾನಾಯಕರ ಹಿಂಡೇ ಹೋಯಿತು. ಆದರೂ ನಾವು 45 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆವು ಎಂದು ಅವರು ವ್ಯಾಖ್ಯಾನಿಸಿದರು.

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಜಾರಿಗಾಗಿ ಮತ್ತೊಮ್ಮೆ ಪಾದಯಾತ್ರೆಗೆ ಬಾಗಲಕೋಟೆ ಸಜ್ಜು

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!