AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಎತ್ತಿನಹೊಳೆ ಹೆಸರಲ್ಲಿ ಯಾರ್ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಕುಮಾರಸ್ವಾಮಿ ಪ್ರಶ್ನೆ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
TV9 Web
| Edited By: |

Updated on: Oct 02, 2021 | 7:32 PM

Share

ಬೆಂಗಳೂರು: ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಜೇಬು ತುಂಬಿಸಿದ್ದೀರಿ? ಡಿಆರ್ಪಿ ಎಂದರೆ ನಿಮಗೆ ಬೇಕಾದಂತೆ ಬಳಸಿಕೊಳ್ಳುವುದಾ? ಗುತ್ತಿಗೆದಾರರಿಗೆ ಕೊಡೋಕೆ ನಿಮ್ಮ ಬಳಿ ದುಡ್ಡಿದೆ. ಆದರೆ ರೈತರಿಗೆ ದುಡ್ಡು ಕೊಡಲು ನಿಮ್ಮ ಬಳಿ ಆಗದು ಅಲ್ಲವೇ? ನಾವು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅನ್ಯಾಯ ಮಾಡಿದ್ದೀವೆಂದು ಸುಳ್ಳು ಅರೋಪ ಮಾಡಿದ್ದಾರೆ. ನೀರಾವರಿ ಹೋರಾಟ ಮಾಡಿದ ಕುಟುಂಬದಲ್ಲಿ ನಾವು ಹುಟ್ಟಿದ್ದೇವೆ ಎಂಬುದನ್ನು ಮರೆಯಬೇಡಿ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಎತ್ತಿನಹೊಳೆ ಯೊಜನೆಯ ಹೆಸರಲ್ಲಿ ಯಾರೆಲ್ಲ ಕಿಸೆ ತುಂಬಿಸಿಕೊಂಡಿದ್ದೀರಿ ಎಂದು ಅವರು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ನನಗೆ ಸಿಕ್ಕಿದ್ದು ತಾತ್ಕಾಲಿಕ ಅಧಿಕಾರ. ಸಿದ್ದರಾಮಯ್ಯ ಖಜಾನೆ ಭರ್ತಿ ಮಾಡಿಹೋಗಿದ್ದಕ್ಕೆ ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಮನೆ ಕೊಡೋದಕ್ಕಾಗಿಲ್ಲ ಎತ್ತಿನಹೊಳೆ ಯೋಜನೆ ಹೆಸರಲ್ಲಿ ಯಾರ ಯಾರ ಜೇಬು ತುಂಬಿಸಿದ್ದೀರಿ ಸಿದ್ದರಾಮಯ್ಯನವರೇ? ಸಿದ್ದರಾಮಯ್ಯ ಐದು ವರ್ಷ ಆಡಳಿತ ಮಾಡಿದ್ರಲ್ಲ ಯಾಕೆ ಆಗಲಿಲ್ಲ. ಇದೇ ರಮೇಶ್ ಕುಮಾರ್ ಏನೆಲ್ಲ ಮಾತನಾಡಿದ್ರು ಸಭೆಯಲ್ಲಿ? ಇವರೆಲ್ಲ ಸತ್ಯ ಹರಿಶ್ಚಂದ್ರ ಮಕ್ಕಳು. ನಮ್ಮ ಪಕ್ಷದಿಂದ ಮಹಾನಾಯಕರ ಹಿಂಡೇ ಹೋಯಿತು. ಆದರೂ ನಾವು 45 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೆವು ಎಂದು ಅವರು ವ್ಯಾಖ್ಯಾನಿಸಿದರು.

ಸಿದ್ದರಾಮಯ್ಯ ಜೆಡಿಎಸ್​ನಲ್ಲಿದ್ದಾಗ ಶೇ.20ರಷ್ಟು ವೋಟ್ ಶೇರ್ ಬಂದಿತ್ತು. ಈಗಲೂ ನಮ್ಮ ವೋಟ್ ಶೇರ್ ಶೇ.18ರಿಂದ 20ರಷ್ಟಿದೆ. ನಮ್ಮ ಪಕ್ಷದ ಶಕ್ತಿ ನಾಯಕರಲ್ಲ, ಕಾರ್ಯಕರ್ತರು. ನಾವು ಏಕಾಂಗಿಯಾಗಿ 38ರಿಂದ 40 ಸೀಟ್ ಗೆದ್ದಿದ್ದೇವೆ. 130 ಸೀಟ್ ಗೆಲ್ಲುವುದು ಅಸಾಧ್ಯವಾದದ್ದಲ್ಲ. ಯಾರೋ ನಾಲ್ಕು ಜನ ಹೋದರೆ ಗಾಬರಿಯಾಗಬೇಕಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಜಾರಿಗಾಗಿ ಮತ್ತೊಮ್ಮೆ ಪಾದಯಾತ್ರೆಗೆ ಬಾಗಲಕೋಟೆ ಸಜ್ಜು

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ