AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಘಟಬಂಧನ್​ನಿಂದ ಜೆಡಿಎಸ್​ನ್ನು ದೂರವಿಟ್ಟ ವಿಪಕ್ಷಗಳು: ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

ಇಂದಿನಿಂದ ಎರಡು ದಿನಗಳ ಕಾಳ ಬೆಂಗಳೂರಿನಲ್ಲಿ ವಿಪಕ್ಷಗಳ ಜಂಟಿ ಸಭೆ ನಡೆಯಲಿದ್ದು, ಈ ಸಭೆಯಿಂದ ಜೆಡಿಎಸ್​ ಪಕ್ಷವನ್ನು ದೂರ ಇಡಲಾಗಿದೆ. ಇದಕ್ಕೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು.

ಮಹಾಘಟಬಂಧನ್​ನಿಂದ ಜೆಡಿಎಸ್​ನ್ನು ದೂರವಿಟ್ಟ ವಿಪಕ್ಷಗಳು: ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on: Jul 17, 2023 | 10:27 AM

Share

ಬೆಂಗಳೂರು, (ಜುಲೈ 17): ಮುಂಬರುವ ಲೋಕಸಭೆ ಚುನಾವಣೆಗೆ (Loksabha Election’s 2024) ಭರ್ಜರಿ ತಯಾರಿ ನಡೆದಿವೆ. ಈ ಬಾರಿ ನರೇಂದ್ರ ಮೋದಿಯನ್ನು(Narendra Modi) ಮಣಿಸಲು ವಿಪಕ್ಷಗಳು(Opposition Meeting) ಒಗ್ಗಟ್ಟಾಗಿದ್ದು, ಈ ಸಂಬಂಧ ತಂತ್ರಗಳನ್ನು ರೂಪಿಸಲು ಇಂದಿನಿಂದ ಎರಡು ದಿನಗಳ ಬೆಂಗಳೂರಿನಲ್ಲಿ(Bengaluru) ಮಹತ್ವದ ಸಭೆ ನಡೆಸಲಿವೆ. ಆದ್ರೆ, ಈ ಸಭೆಗೆ ಜೆಡಿಎಸ್​ಗೆ ಆಹ್ವಾನ ಕೊಟ್ಟಿಲ್ಲ. ಇನ್ನು ಈ ಬಗ್ಗೆ ಸ್ವತಃ ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯಿಸಿದ್ದು, ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್​ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್​​​​ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಮಹಾಸಂಗಮ, ಮೋದಿ ವಿರುದ್ಧದ ಯುದ್ಧಕ್ಕೆ ಕರ್ನಾಟಕದಿಂದ್ಲೇ ರಣಕಹಳೆ!

ಬೆಂಗಳೂರಿನಲ್ಲಿ ಇಂದು (ಜುಲೈ 17) ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಪಾಪ ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ಇಟ್ಟಿಲ್ಲ. ಜೆಡಿಎಸ್ ಮುಳುಗಿಹೋಗಿದೆ ಅನ್ನೋ ಭ್ರಮೆಯಲ್ಲಿ ಮಹಾಘಟಬಂದನ್ ವ್ಯವಸ್ಥಾಪಕರು ಇದ್ದಾರೆ. ಆಹ್ವಾನ ಕೊಟ್ಟರು,ಇಲ್ಲವೋ ಎನ್ನುವುದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ಇವರಿಗೆ ರೈತರ ಸಾವು ಕಾಣಿಸುತ್ತಿಲ್ಲ. ಇಂದಿನವರೆಗೂ ಆತ್ಮಹತ್ಯೆಗೆ ಒಳಗಾಗಬೇಡಿ ಎಂದು ಸಂದೇಶ ಸರ್ಕಾರ ನೀಡಿಲ್ಲ. ಇದು ಬೇಕಾಗಿಲ್ಲ ಎಂದು ಪರೋಕ್ಷವಾಗಿ ಮಹಾಘಟಬಂದನ್ ಸಭೆ ಬಗ್ಗೆ ಟೀಕಿಸಿದರು.

ಇನ್ನು ಇದೇ ವೇಳೆ ಎನ್​ಡಿಎ ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ. ಮುಂದೆ ನೋಡೋಣ. ನನ್ನ ಪಕ್ಷ ಸಂಘಟನೆ ಏನಿದೆ, ನಾಡಿನ ಸಮಸ್ಯೆ ಏನಿದೆ ಅದನ್ನ ನೋಡುತ್ತಿದ್ದೇನೆ ಎಂದರು.

ಬಿಜೆಪಿ ಕಟ್ಟಿಹಾಕಲು ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗ್ತಿವೆ. ಇದರ ಮಧ್ಯೆ ಬಿಜೆಪಿ ಸಹ ತನ್ನ ಬಲ ಹೆಚ್ಚಿಸಿಕೊಳ್ಳಲು ಜುಲೈ 18ರಂದು ಸಭೆ ಕರೆದಿದೆ. ಎನ್‌ಡಿಎ ಮೈತ್ರಿಕೂಟವನ್ನ ಮತ್ತೆ ಬಲಪಡಿಸಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳೋ ಪ್ರಯತ್ನಕ್ಕೆ ಮುಂದಾಗಿದೆ. ಈ ಪೈಕಿ ಜೆಡಿಎಸ್‌ಗೂ ಗಾಳ ಹಾಕಿದೆ. ಹೀಗಾಗಿ ವಿಪಕ್ಷಗಳ ಸಭೆಗೆ ಈ ಬಾರಿ ಜೆಡಿಎಸ್​ಗೆ ಅಧಿಕೃತವಾಗಿ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿಲ್ಲ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್