AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಘಟಬಂಧನ್​ನಿಂದ ಜೆಡಿಎಸ್​ನ್ನು ದೂರವಿಟ್ಟ ವಿಪಕ್ಷಗಳು: ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

ಇಂದಿನಿಂದ ಎರಡು ದಿನಗಳ ಕಾಳ ಬೆಂಗಳೂರಿನಲ್ಲಿ ವಿಪಕ್ಷಗಳ ಜಂಟಿ ಸಭೆ ನಡೆಯಲಿದ್ದು, ಈ ಸಭೆಯಿಂದ ಜೆಡಿಎಸ್​ ಪಕ್ಷವನ್ನು ದೂರ ಇಡಲಾಗಿದೆ. ಇದಕ್ಕೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು.

ಮಹಾಘಟಬಂಧನ್​ನಿಂದ ಜೆಡಿಎಸ್​ನ್ನು ದೂರವಿಟ್ಟ ವಿಪಕ್ಷಗಳು: ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಹೆಚ್​ ಡಿ ಕುಮಾರಸ್ವಾಮಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jul 17, 2023 | 10:27 AM

Share

ಬೆಂಗಳೂರು, (ಜುಲೈ 17): ಮುಂಬರುವ ಲೋಕಸಭೆ ಚುನಾವಣೆಗೆ (Loksabha Election’s 2024) ಭರ್ಜರಿ ತಯಾರಿ ನಡೆದಿವೆ. ಈ ಬಾರಿ ನರೇಂದ್ರ ಮೋದಿಯನ್ನು(Narendra Modi) ಮಣಿಸಲು ವಿಪಕ್ಷಗಳು(Opposition Meeting) ಒಗ್ಗಟ್ಟಾಗಿದ್ದು, ಈ ಸಂಬಂಧ ತಂತ್ರಗಳನ್ನು ರೂಪಿಸಲು ಇಂದಿನಿಂದ ಎರಡು ದಿನಗಳ ಬೆಂಗಳೂರಿನಲ್ಲಿ(Bengaluru) ಮಹತ್ವದ ಸಭೆ ನಡೆಸಲಿವೆ. ಆದ್ರೆ, ಈ ಸಭೆಗೆ ಜೆಡಿಎಸ್​ಗೆ ಆಹ್ವಾನ ಕೊಟ್ಟಿಲ್ಲ. ಇನ್ನು ಈ ಬಗ್ಗೆ ಸ್ವತಃ ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯಿಸಿದ್ದು, ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್​ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್​​​​ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಮಹಾಸಂಗಮ, ಮೋದಿ ವಿರುದ್ಧದ ಯುದ್ಧಕ್ಕೆ ಕರ್ನಾಟಕದಿಂದ್ಲೇ ರಣಕಹಳೆ!

ಬೆಂಗಳೂರಿನಲ್ಲಿ ಇಂದು (ಜುಲೈ 17) ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಪಾಪ ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ಇಟ್ಟಿಲ್ಲ. ಜೆಡಿಎಸ್ ಮುಳುಗಿಹೋಗಿದೆ ಅನ್ನೋ ಭ್ರಮೆಯಲ್ಲಿ ಮಹಾಘಟಬಂದನ್ ವ್ಯವಸ್ಥಾಪಕರು ಇದ್ದಾರೆ. ಆಹ್ವಾನ ಕೊಟ್ಟರು,ಇಲ್ಲವೋ ಎನ್ನುವುದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ಇವರಿಗೆ ರೈತರ ಸಾವು ಕಾಣಿಸುತ್ತಿಲ್ಲ. ಇಂದಿನವರೆಗೂ ಆತ್ಮಹತ್ಯೆಗೆ ಒಳಗಾಗಬೇಡಿ ಎಂದು ಸಂದೇಶ ಸರ್ಕಾರ ನೀಡಿಲ್ಲ. ಇದು ಬೇಕಾಗಿಲ್ಲ ಎಂದು ಪರೋಕ್ಷವಾಗಿ ಮಹಾಘಟಬಂದನ್ ಸಭೆ ಬಗ್ಗೆ ಟೀಕಿಸಿದರು.

ಇನ್ನು ಇದೇ ವೇಳೆ ಎನ್​ಡಿಎ ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ. ಮುಂದೆ ನೋಡೋಣ. ನನ್ನ ಪಕ್ಷ ಸಂಘಟನೆ ಏನಿದೆ, ನಾಡಿನ ಸಮಸ್ಯೆ ಏನಿದೆ ಅದನ್ನ ನೋಡುತ್ತಿದ್ದೇನೆ ಎಂದರು.

ಬಿಜೆಪಿ ಕಟ್ಟಿಹಾಕಲು ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗ್ತಿವೆ. ಇದರ ಮಧ್ಯೆ ಬಿಜೆಪಿ ಸಹ ತನ್ನ ಬಲ ಹೆಚ್ಚಿಸಿಕೊಳ್ಳಲು ಜುಲೈ 18ರಂದು ಸಭೆ ಕರೆದಿದೆ. ಎನ್‌ಡಿಎ ಮೈತ್ರಿಕೂಟವನ್ನ ಮತ್ತೆ ಬಲಪಡಿಸಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳೋ ಪ್ರಯತ್ನಕ್ಕೆ ಮುಂದಾಗಿದೆ. ಈ ಪೈಕಿ ಜೆಡಿಎಸ್‌ಗೂ ಗಾಳ ಹಾಕಿದೆ. ಹೀಗಾಗಿ ವಿಪಕ್ಷಗಳ ಸಭೆಗೆ ಈ ಬಾರಿ ಜೆಡಿಎಸ್​ಗೆ ಅಧಿಕೃತವಾಗಿ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿಲ್ಲ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ