AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಪ್ತ್​-ಗುಪ್ತ್ ಮಾತುಕತೆ: ವಿಜಯೇಂದ್ರ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು?

ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ಜು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಗುಪ್ತ್​-ಗುಪ್ತ್ ಮಾತುಕತೆ: ವಿಜಯೇಂದ್ರ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು?
ವಿಜಯೇಂದ್ರ-ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Nov 26, 2023 | 4:54 PM

Share

ಬೆಂಗಳೂರು (ನವೆಂಬರ್ 26): ಬಿವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಿತ್ರ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಿಡದಿಯ ಅವರ ತೋಟದ ಮನೆಯಲ್ಲಿ ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ಬಾಮಿ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿಯಾಗಿದೆ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. 2006-07 ರಲ್ಲಿ ಯಡಿಯೂರಪ್ಪ ನಾನು ಸರ್ಕಾರ ನಡೆಸಿದ್ದೋ, ಇವತ್ತೂ ಸಹ ಅಂತಹ ಸರ್ಕಾರ ಬರಬೇಕು ಎನ್ನುವುದು ಜನರ ಅಭಿಪ್ರಾಯ ಇದೆ. ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗುತ್ತಾರೆ. ಉತ್ತಮ ಬಾಂಧವ್ಯ ಜೊತೆಗೆ ಚುನಾವಣೆ ಮಾಡುತ್ತಾರೆ ಎಂದರು.

ಇದನ್ನೂ ಓದಿ: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿಯನ್ನ ಭೇಟಿಯಾದ ವಿಜಯೇಂದ್ರ

ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡುತ್ತಾರೆ. ಇನ್ನು ಸಿಎಂ ಸಿದ್ದರಾಮಯ್ಯ ಜನತಾ ದರ್ಶನಕ್ಕಾಗಿ ದೊಡ್ಡ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ. ನಾವು ಅಂದೇ ಜನತಾ ದರ್ಶನ ಯಶಸ್ವಿಯಾಗಿ ಮಾಡಿ ತೋರಿಸಿದ್ದೆವು. ಈಗ ಕೇವಲ ಪ್ರಚಾರದ ಕೆಲಸ ಅಷ್ಟೇ ಎಂದು ಕಿಡಿಕಾರಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ