AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡ, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದ ಕುಮಾರಣ್ಣ

ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡವಿದ್ದು, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದು ಹೆಚ್​ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ಮತ್ತೊಮ್ಮೆ ಪರೋಕ್ಷವಾಗಿ ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡ,  ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದ ಕುಮಾರಣ್ಣ
ಎಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on:Jan 29, 2023 | 6:47 PM

Share

ರಾಯಚೂರು: ದಳಪತಿಗಳ ಕೋಟೆ ಹಾಸನದಲ್ಲಿ ಟಿಕೆಟ್ ಗೊಂದಲದಿಂದಾಗಿ ಕಾರ್ಯಕರ್ತರಲ್ಲಿ ಹೆಜ್ಜೆ ಹೆಜ್ಜೆಗೂ ತಳಮಳ ಶುರುವಾಗಿದೆ. ಹಾಸನ ಕಣದ ಟಿಕೆಟ್​​ಗೆ ದೊಡ್ಡ ಸಮರ ನಡೀತಿವೆ. ಟಿಕೆಟ್​ಗಾಗಿ ರೇವಣ್ಣ ಫ್ಯಾಮಿಲಿ ಮತ್ತು ಕುಮಾರಣ್ಣ ನಡುವೆ ಯುದ್ಧವೇ ನಡೆಯುತ್ತಿದೆ. ಈ ಟಿಕೆಟ್ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ರೇವಣ್ಣ ಮೌನ ಮುರಿದಿದ್ದು, ಹಾಸನ ಟಿಕೆಟ್​​ಗೆ ಅಡ್ಡಗೋಡೆಯ ಮೇಲೆ ದೀಪ ಇಟ್ಟು ಹೊಸ ಆಟ ಕಟ್ಟಿದ್ದಾರೆ. ಮತ್ತೊಂದೆಡೆ ಹೆಚ್​ಡಿ ಕುಮಾರಸ್ವಾಮಿ ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡವಿದ್ದು, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Hassan JDS Ticket Fight: ಕುಮಾರಸ್ವಾಮಿ ಭಾವುಕರಾದ ಬೆನ್ನಲ್ಲೇ ಮೌನ ಮುರಿದ ಹೆಚ್.ಡಿ.ರೇವಣ್ಣ

ರಾಯಚೂರಿನ ಸಿಂಧನೂರಿನಲ್ಲಿ ಮತಾನಾಡಿದ ಕುಮಾರಸ್ವಾಮಿ, ಭವಾನಿ ರೇವಣ್ಣಗೆ ಸೂಕ್ತ ಸಮಯದಲ್ಲಿ ಸೂಕ್ತ ಜವಾಬ್ದಾರಿ ನೀಡುತ್ತೇವೆ. ಮಕ್ಕಳು ಅವರ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅಂತಿಮವಾಗಿ ನಾವು ತೀರ್ಮಾನ ಕೈಗೊಳ್ಳುತ್ತೇವೆ. ಹೆಚ್​ಡಿ ರೇವಣ್ಣ ಹೇಳಿದ ಮೇಲೆ ಅದೇ ಅಂತಿಮ. ಹಾಸನದಲ್ಲಿ ರಾಜಕೀಯದಲ್ಲಿ ಶಕುನಿಗಳ ಕೈವಾಡ ಆರೋಪ ಇದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದರು.

ಮಕ್ಕಳು ಅವರವರ ಭಾವನೆಗಳನ್ನ ವ್ಯಕ್ತಪಡಿಸುತ್ತಾರೆ. ರೇವಣ್ಣ ಅವರು ಹೇಳಿದ್ದರಿಂದ ಅದು ಮುಗಿದು ಹೋಗಿದೆ. ಭವಾನಿ ರೇವಣ್ಣ ರಾಜ್ಯ ರಾಜ್ಯಕಾರಣದಲ್ಲಿ ಉಳಿತಾರೋ ಇಲ್ಲ ಸ್ಥಳೀಯ ಮಟ್ಟದ ರಾಜಕಾರಣದಲ್ಲಿ ಇರ್ತಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಯಾವ ಸೂಕ್ತ ಸಮಯದಲ್ಲಿ ಯಾವ ಸ್ಥಾನಮಾನದಲ್ಲಿ ಕೆಲಸ ಮಾಡಬೇಕು. ಆ ಜವಾಬ್ದಾರಿಯನ್ನ ಕೊಡುತ್ತೇವೆ. ಭವಾನಿ ರೇವಣ್ಣಗೆ ಸೂಕ್ತ ಸಮಯದಲ್ಲಿ ಸೂಕ್ತ ಜವಾಬ್ದಾರಿ ನೀಡುತ್ತೇವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಪರೋಕ್ಷವಾಗಿ ಈ ಬಾರಿ ಹಾಸನ ಟಿಕೆಟ್ ಇಲ್ಲ ಎಂದು ಪುನರುಚ್ಚರಿಸಿದರು.

ಇನ್ನು ಭವಾನಿ ಹಾಗೂ ಅವರ ಮಕ್ಕಳಾದ ಪ್ರಜ್ವಲ್ ರೇವಣ್ಣ ಸೂರಜ್ ರೇವಣ್ಣ ಟಿಕೆಟ್​ ಪಡೆಯಲೇಬೇಕೆಂದು ಹಠಕ್ಕೆ ಬಿದ್ದಿದ್ದಿದ್ದಾರೆ. ಆದ್ರೆ, ಇದರ ಹಿಂದೆ ಶಕುನಿಗಳ ಕೈವಾಡ ಇದ್ದು. ಅವರು ಈ ರೀತಿ ಮಾಡಿಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿ ಅವರ ಆರೋಪವಾಗಿದೆ. ಹಾಗಾದ್ರೆ, ಯಾರು ಆ ಶಕುನಿ? ಆ ಶಕುನಿ ಸ್ವಪಕ್ಷದಲ್ಲಿ ಇದ್ದಾರೋ ಅಥವಾ ವಿರೋಧ ಪಕ್ಷದಲ್ಲಿ ಇದ್ದಾರೋ? ಎನ್ನುವ ಚರ್ಚೆಗಳು ಶುರುವಾಗಿವೆ.

Published On - 6:47 pm, Sun, 29 January 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ