AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡ, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದ ಕುಮಾರಣ್ಣ

ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡವಿದ್ದು, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದು ಹೆಚ್​ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ಮತ್ತೊಮ್ಮೆ ಪರೋಕ್ಷವಾಗಿ ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡ,  ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದ ಕುಮಾರಣ್ಣ
ಎಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on:Jan 29, 2023 | 6:47 PM

Share

ರಾಯಚೂರು: ದಳಪತಿಗಳ ಕೋಟೆ ಹಾಸನದಲ್ಲಿ ಟಿಕೆಟ್ ಗೊಂದಲದಿಂದಾಗಿ ಕಾರ್ಯಕರ್ತರಲ್ಲಿ ಹೆಜ್ಜೆ ಹೆಜ್ಜೆಗೂ ತಳಮಳ ಶುರುವಾಗಿದೆ. ಹಾಸನ ಕಣದ ಟಿಕೆಟ್​​ಗೆ ದೊಡ್ಡ ಸಮರ ನಡೀತಿವೆ. ಟಿಕೆಟ್​ಗಾಗಿ ರೇವಣ್ಣ ಫ್ಯಾಮಿಲಿ ಮತ್ತು ಕುಮಾರಣ್ಣ ನಡುವೆ ಯುದ್ಧವೇ ನಡೆಯುತ್ತಿದೆ. ಈ ಟಿಕೆಟ್ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ರೇವಣ್ಣ ಮೌನ ಮುರಿದಿದ್ದು, ಹಾಸನ ಟಿಕೆಟ್​​ಗೆ ಅಡ್ಡಗೋಡೆಯ ಮೇಲೆ ದೀಪ ಇಟ್ಟು ಹೊಸ ಆಟ ಕಟ್ಟಿದ್ದಾರೆ. ಮತ್ತೊಂದೆಡೆ ಹೆಚ್​ಡಿ ಕುಮಾರಸ್ವಾಮಿ ಹಾಸನ ಟಿಕೆಟ್‌ ವಿಚಾರದಲ್ಲಿ ಶಕುನಿಗಳ ಕೈವಾಡವಿದ್ದು, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Hassan JDS Ticket Fight: ಕುಮಾರಸ್ವಾಮಿ ಭಾವುಕರಾದ ಬೆನ್ನಲ್ಲೇ ಮೌನ ಮುರಿದ ಹೆಚ್.ಡಿ.ರೇವಣ್ಣ

ರಾಯಚೂರಿನ ಸಿಂಧನೂರಿನಲ್ಲಿ ಮತಾನಾಡಿದ ಕುಮಾರಸ್ವಾಮಿ, ಭವಾನಿ ರೇವಣ್ಣಗೆ ಸೂಕ್ತ ಸಮಯದಲ್ಲಿ ಸೂಕ್ತ ಜವಾಬ್ದಾರಿ ನೀಡುತ್ತೇವೆ. ಮಕ್ಕಳು ಅವರ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅಂತಿಮವಾಗಿ ನಾವು ತೀರ್ಮಾನ ಕೈಗೊಳ್ಳುತ್ತೇವೆ. ಹೆಚ್​ಡಿ ರೇವಣ್ಣ ಹೇಳಿದ ಮೇಲೆ ಅದೇ ಅಂತಿಮ. ಹಾಸನದಲ್ಲಿ ರಾಜಕೀಯದಲ್ಲಿ ಶಕುನಿಗಳ ಕೈವಾಡ ಆರೋಪ ಇದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದರು.

ಮಕ್ಕಳು ಅವರವರ ಭಾವನೆಗಳನ್ನ ವ್ಯಕ್ತಪಡಿಸುತ್ತಾರೆ. ರೇವಣ್ಣ ಅವರು ಹೇಳಿದ್ದರಿಂದ ಅದು ಮುಗಿದು ಹೋಗಿದೆ. ಭವಾನಿ ರೇವಣ್ಣ ರಾಜ್ಯ ರಾಜ್ಯಕಾರಣದಲ್ಲಿ ಉಳಿತಾರೋ ಇಲ್ಲ ಸ್ಥಳೀಯ ಮಟ್ಟದ ರಾಜಕಾರಣದಲ್ಲಿ ಇರ್ತಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಯಾವ ಸೂಕ್ತ ಸಮಯದಲ್ಲಿ ಯಾವ ಸ್ಥಾನಮಾನದಲ್ಲಿ ಕೆಲಸ ಮಾಡಬೇಕು. ಆ ಜವಾಬ್ದಾರಿಯನ್ನ ಕೊಡುತ್ತೇವೆ. ಭವಾನಿ ರೇವಣ್ಣಗೆ ಸೂಕ್ತ ಸಮಯದಲ್ಲಿ ಸೂಕ್ತ ಜವಾಬ್ದಾರಿ ನೀಡುತ್ತೇವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಪರೋಕ್ಷವಾಗಿ ಈ ಬಾರಿ ಹಾಸನ ಟಿಕೆಟ್ ಇಲ್ಲ ಎಂದು ಪುನರುಚ್ಚರಿಸಿದರು.

ಇನ್ನು ಭವಾನಿ ಹಾಗೂ ಅವರ ಮಕ್ಕಳಾದ ಪ್ರಜ್ವಲ್ ರೇವಣ್ಣ ಸೂರಜ್ ರೇವಣ್ಣ ಟಿಕೆಟ್​ ಪಡೆಯಲೇಬೇಕೆಂದು ಹಠಕ್ಕೆ ಬಿದ್ದಿದ್ದಿದ್ದಾರೆ. ಆದ್ರೆ, ಇದರ ಹಿಂದೆ ಶಕುನಿಗಳ ಕೈವಾಡ ಇದ್ದು. ಅವರು ಈ ರೀತಿ ಮಾಡಿಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿ ಅವರ ಆರೋಪವಾಗಿದೆ. ಹಾಗಾದ್ರೆ, ಯಾರು ಆ ಶಕುನಿ? ಆ ಶಕುನಿ ಸ್ವಪಕ್ಷದಲ್ಲಿ ಇದ್ದಾರೋ ಅಥವಾ ವಿರೋಧ ಪಕ್ಷದಲ್ಲಿ ಇದ್ದಾರೋ? ಎನ್ನುವ ಚರ್ಚೆಗಳು ಶುರುವಾಗಿವೆ.

Published On - 6:47 pm, Sun, 29 January 23

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ