ಮುಸ್ಲಿಮರ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವೇನು? ಕೊನೆಗೂ ಸ್ಪಷ್ಟನೆ ನೀಡಿದ ಹೆಚ್​ಡಿ ಕುಮಾರಸ್ವಾಮಿ

|

Updated on: Mar 24, 2025 | 2:06 PM

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರ ಗುತ್ತಿಗೆ ಮೀಸಲಾತಿ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಟೀಕಿಸಿರುವ ಅವರು, ಮೀಸಲಾತಿಯನ್ನು ಚುನಾವಣಾ ಸ್ವಾರ್ಥಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮುಸ್ಲಿಮರ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವೇನು? ಕೊನೆಗೂ ಸ್ಪಷ್ಟನೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
Follow us on

ನವದೆಹಲಿ/ಬೆಂಗಳೂರು, ಮಾರ್ಚ್​ 24: ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಮುಸ್ಲಿಮರಿಗೆ ಕಾಂಗ್ರೆಸ್​ ಸರಕಾರ 4% ಗುತ್ತಿಗೆ ಮೀಸಲಾತಿ (Muslim Reservation) ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎಂಬ ಹೇಳಿಕೆಗೆ ಚೆಕ್​ಮೆಟ್​ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಹೆಚ್​ಡಿ ಕುಮಾರಸ್ವಾಮಿ, ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ: ವಿಧೇಯಕದಲ್ಲೇನಿದೆ?
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್​ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಟ್ವಿಟರ್​ ಪೋಸ್ಟ್​

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ. ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ವಿಧೇಯಕ ಪಾಸು ಮಾಡಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ: ಯತ್ನಾಳ್

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು. ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Mon, 24 March 25