AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ನನ್ನು ತಿಹಾರ್ ಜೈಲಿಗೆ ಕಳಿಸಿ ಎಂದು ಅಮಿತ್ ಶಾಗೆ ಇವರೇ ಮನವಿ ಮಾಡಿದ್ದಾರೆ: ಹೆಚ್​ಡಿಕೆಗೆ ಡಿಕೆ ಸುರೇಶ್ ತಿರುಗೇಟು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK SHivakumar) ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎನ್ನುವ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.

ಡಿಕೆ ಶಿವಕುಮಾರ್​ನನ್ನು  ತಿಹಾರ್ ಜೈಲಿಗೆ ಕಳಿಸಿ ಎಂದು ಅಮಿತ್ ಶಾಗೆ ಇವರೇ ಮನವಿ ಮಾಡಿದ್ದಾರೆ: ಹೆಚ್​ಡಿಕೆಗೆ ಡಿಕೆ ಸುರೇಶ್ ತಿರುಗೇಟು
ಕುಮಾರಸ್ವಾಮಿ-ಡಿಕೆ ಸುರೇಶ್
ಪ್ರಸನ್ನ ಗಾಂವ್ಕರ್​
| Edited By: |

Updated on: Oct 09, 2023 | 2:14 PM

Share

ಬೆಂಗಳೂರು, (ಅಕ್ಟೋಬರ್ 09): ಈ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, 2024ರಲ್ಲಿ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೀಗ ಇದಕ್ಕೆ ಡಿಕೆ ಶಿವಕುಮಾರ್ ಅವರ ಸಹೋದರ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳಿಸಿ ಎಂದು ಅಮಿತ್ ಶಾಗೆ ಇವರೇ ಮನವಿ ಮಾಡಿ ಬಂದಿರಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 09) ಸುದ್ದಿಗಾರೊಂದಿಗೆ ಮಾತನಾಡಿದ ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರನ್ನ ತಿಹಾರ್ ಜೈಲಿಗೆ ಕಳಿಸಿ ಎಂದು ಬಹುಶಃ ಅಮಿತ್ ಶಾಗೆ ಇವರೇ (ಕುಮಾರಸ್ವಾಮಿ) ರಿಕ್ವೆಸ್ಟ್ ಮಾಡಿಕೊಂಡು ಬಂದಿರಬೇಕು. ದೆಹಲಿಗೆ ಹೋಗಿದ್ದರಲ್ಲ ಆಗ ಅಮಿತ್ ಶಾಗೆ ಮನವಿ ಮಾಡಿದ್ದರು ಅನ್ಸುತ್ತೆ. ಇವರ ಗೊಡ್ಡು ಬೆದರಿಕೆಗಳಿಗೆ ಹೆದರುವ ಜಾಯಮಾನ ನಮ್ಮದಲ್ಲ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: 2024ಕ್ಕೆ ಮತ್ತೆ ವಿಧಾನಸಭೆ ಚುನಾವಣೆ ಖಚಿತ; ಡಿಕೆಶಿ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಇವರ ದಾಖಲೆ ಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ದ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತದೆ. ಜೆಡಿಎಸ್ ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕಿದೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆ ನುಡಿ ನೋಡಿ ಅವರ ದಾರಿ ಅವರೇ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕುಮಾರಸ್ವಾಮಿ ಹೇಳುವುದು ಸುಳ್ಳಿನ ಮಹಾ ಭಾಗ, ಸುಳ್ಳಿನಲ್ಲಿ ಕುಮಾರಸ್ವಾಮಿ ಎಕ್ಸಪರ್ಟ್. ಇವರು ಯಾವ ಯಾವ ಸಂದರ್ಭದಲ್ಲಿ ಯಾರ ಜೊತೆಗೆ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವುದು ಗೊತ್ತಿದೆ. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವವರು ಅವರು ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಮೈತ್ರಿ ಧರ್ಮ ಪಾಲನೆ ಮಾಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನಿಖಿಲ್​ ಕುಮಾರಸ್ವಾಮಿಯನ್ನು ಮಂಡ್ಯದ ಜನರೇ ಅವರನ್ನು ತಿರಸ್ಕಾರ ಮಾಡಿದ್ರು, ನಾವಲ್ಲ ತಿರಸ್ಕಾರ ಮಾಡಿದ್ದು.ಮಂಡ್ಯದಲ್ಲಿ ನಮ್ಮ ಕಾರ್ಯಕರ್ತರು ಏನು ಸಹಕಾರ ಕೊಡಬೇಕೋ ಕೊಟ್ಟಿದ್ದರು. ಮಂಡ್ಯದ ಜನರನ್ನೇ ಯಾಕೆ ಸೋಲಿಸಿದರು ಎಂದು ಕೇಳಬೇಕು. ಈಗ ಬಂದು ನಮ್ಮನ್ನು ಕೇಳಿದರೆ ಹೇಗೆ? ಎಂದು ತಿವಿದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ