AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಿಂದ ಕುಮಾರಸ್ವಾಮಿ ವಾಪಸ್: ಕಾಂಬೋಡಿಯಾಗೆ ಹೋಗಿದ್ಯಾಕೆ? ಕಾರಣ ಬಿಚ್ಚಿಟ್ಟ ಮಾಜಿ ಸಿಎಂ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕಾಂಬೋಡಿಯಾದಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ನಿನ್ನೆ (ಆ.13) ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಬೋಡಿಯಾದ ಐತಿಹಾಸಿಕ ಪ್ರಸಿದ್ಧವಾದ ಆಂಗ್‌ಕರ್ ವಾಟ್ ದೇವಾಲಯ ಇತಿಹಾಸ, ಸಂಸ್ಕೃತಿಯನ್ನು ಹಾಡಿಹೊಗಳಿದ್ದಾರೆ. ಹಾಗಾದ್ರೆ, ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.

ವಿದೇಶದಿಂದ ಕುಮಾರಸ್ವಾಮಿ ವಾಪಸ್: ಕಾಂಬೋಡಿಯಾಗೆ ಹೋಗಿದ್ಯಾಕೆ? ಕಾರಣ ಬಿಚ್ಚಿಟ್ಟ ಮಾಜಿ ಸಿಎಂ
ಕಾಂಬೋಡಿಯಾದ ಆಂಗ್‌ಕರ್ ವಾಟ್ ದೇವಾಲಯದಲ್ಲಿ ಹೆಚ್​ಡಿಕೆ
ನವೀನ್ ಕುಮಾರ್ ಟಿ
| Edited By: |

Updated on:Aug 14, 2023 | 7:45 AM

Share

ಬೆಂಗಳೂರು, (ಆಗಸ್ಟ್ 14): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ವಿದೇಶ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ನಿನ್ನೆ (ಆಗಸ್ಟ್ 13) ರಾತ್ರಿ 11.30ರ ವಿಮಾನದಲ್ಲಿ ಕೌಲಾಲಂಪುರದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಹಿರಿಯರು ದೇಶ ಸುತ್ತು ಕೋಶ ಓದು ಅಂತ ಗಾದೆ ಮಾತು ಹೇಳಿದ್ದಾರೆ. ಯಾವ್ಯಾವ ದೇಶದಲ್ಲಿ ಏನೇನಿದೆ ಎಂದು ತಿಳಿದುಕೊಳ್ಳಬೇಕು ಅಲ್ವಾ. ಯಾವ್ಯಾವ ದೇಶದಲ್ಲಿ ಏನೆಲ್ಲ ಅಭಿವೃದ್ದಿಯಾಗಿದೆ. ನಮ್ಮಲ್ಲಿ ಯಾವ ರೀತಿ ನಡೆಯುತ್ತಿದೆ. ಇದನ್ನೆಲ್ಲ ನೋಡಲು ನಾನು ಕಂಬೋಡಿಯಾಗೆ(Cambodia) ಹಲವಾರು ಸ್ನೇಹಿತರ ಜೊತೆ ಹೋಗಿದ್ದೆ ಎಂದು ವಿದೇಶ ಪ್ರವಾಸದ ಕಾರಣ ಬಿಚ್ಚಿಟ್ಟರು.

ನಮಗೇನು ವಿದೇಶಕ್ಕೆ ಹೋಗುವ ಯೋಗ್ಯತೆ ಇಲ್ವಾ? ಆ ಪಾಪದ ಹಣವನ್ನ ತೆಗೆದುಕೊಂಡು ಹೋಗಬೇಕಾ ನಾನು. ನಾನು ಕಳೆದ 12 ವರ್ಷಗಳಿಂದ ಪಕ್ಷ ಸಂಘಟನೆಗೆ ನನ್ನ ಸಮಯವನ್ನ ಮೀಸಲಿಟ್ಟಿದ್ದೆ. ಮಲೇಶಿಯಾಗೆ ಹೋಗಿಲ್ಲ. ಕಾಂಬೋಡಿಯಾಗೆ ಹೋಗಿದ್ದೆ. ಅಲ್ಲಿನ ಸುಂದರ ಅತಿದೊಡ್ಡ ಹಿಂದೂ ದೇವಸ್ಥಾನ ನೋಡಲು ಹೋಗಿದ್ದೆ. ಮೂರು ದಿನ ಸುತ್ತಿದ್ರು ಆ ದೇವಸ್ಥಾನ ನೋಡಲು ಆಗುವುದಿಲ್ಲ. ಆ ಸಂಸ್ಕ್ರತಿಯನ್ನ ನೋಡಲು ಆದೇಶದ ಆರ್ಥಿಕ ಬೆಳವಣಿಗೆ ನೋಡಲು ಹೋಗಿದ್ದೆ ಎಂದರು.

ಇದನ್ನೂ ಓದಿ:  ನಮಗೇನು ಯೋಗ್ಯತೆ ಇಲ್ವಾ? ವಿದೇಶದಿಂದ ವಾಪಸ್ ಆಗ್ತಿದ್ದಂತೆ ಹೆಚ್​ಡಿ ಕುಮಾರಸ್ವಾಮಿ ಗರಂ ಆಗಿದ್ದೇಕೆ?

ಇನ್ನು ಇದೇ ವೇಳೆ ಹೆಚ್​ಡಿಕೆ ವಿದೇಶದಲ್ಲೇ ಇರಲಿ ಅವರಿಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೆಲ ಸಚಿವರು ಲೂಟಿ ಹೊಡೆಯಲು ಬಿಟ್ಟುಬಿಡಲಿ ಎಂದು ಹೀಗೆ ಹೇಳಿದ್ದಾರೆ. ವಿದೇಶದಲ್ಲಿ ಇದ್ದು ಬಿಡಿ ಅಂತಾ ಸಲಹೆ ಕೊಟ್ಟಿದ್ದಾರೆ. ಅದಕ್ಕೆ ಗೌರವ ಕೊಡಬೇಕಲ್ವಾ?, ಅವರ ಹೇಳಿಕೆ ಪಾಲಿಸಬೇಕಲ್ವಾ? ವಿದೇಶದಲ್ಲೇ ಇದ್ದು ಬಿಡಲಿ ಎಲ್ಲ ವ್ಯವಸ್ಥೆ ಮಾಡ್ತೀವಿ ಅಂತ ಹೇಳಿದ್ರು. ಮಾನ ಮರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ಅದಕ್ಕೆ ಸಚಿವರು ನಮ್ಮನ್ನು ವಿದೇಶದಲ್ಲೇ ಇರಲು ಹೇಳಿದ್ದಾರೆ ತಿರುಗೇಟು ನೀಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:17 am, Mon, 14 August 23

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!