AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ

ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ
ಹೆಚ್.ಡಿ. ಕುಮಾರಸ್ವಾಮಿ
TV9 Web
| Edited By: |

Updated on:Oct 03, 2021 | 5:47 PM

Share

ಬೆಂಗಳೂರು: ದೇಶ ಉಳಿಸಲು ಮುಸಲ್ಮಾನ ಬಾಂಧವರ ಮನೆ ಮನೆಗೆ ಜೆಡಿಎಸ್ ಪಕ್ಷವನ್ನು ತಲುಪಿಸಬೇಕು ಎಂದು 5ನೆ ದಿನದ ಜೆಡಿಎಸ್ ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದ ಮುಖಂಡರನ್ನುದ್ದೇಶಿಸಿ ಕರೆ ನೀಡಿದರು. ಜೆಡಿಎಸ್ ಬಿಜೆಪಿ ಬಿ ಟೀಂ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ಆದರೆ ಅದು ಸುಳ್ಳೆಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ರಾಮಮಂದಿರ ಕಟ್ಟಲು ದೇಣಿಗೆ ನೀಡಿದ ಇಟ್ಟಿಗೆಗಳು ಈಗ ಎಲ್ಲಿ ಹೋದವೊ ತಿಳಿಯದು ಎಂದು ಅವರು ಟೀಕಿಸಿದರು.

19 ಪರ್ಸೆಂಟ್ ಇರುವ ಮುಸಲ್ಮಾನ್ ಬಂಧುಗಳನ್ನು ದ್ರೋಹಿಗಳು ಎಂದು ಬಿಂಬಿಸಲಾಗುತ್ತಿದೆ. ನಮ್ಮ ಸಂವಿಧಾನದ ವ್ಯವಸ್ಥೆಯಲ್ಲಿ ನಾವೆಲ್ಲಾ ಒಂದು ಕುಟುಂಬದಂತೆ ಬದುಕಬೇಕು. ಕಾಂಗ್ರೆಸ್ ಸುದೀರ್ಘವಾಗಿ ಆಡಳಿತ ನಡೆಸಿದೆ. ತುರ್ತು ಪರಿಸ್ಥಿತಿಯವರೆಗೆ ಕಾಂಗ್ರೆಸ್ ಹತ್ತಿರಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕಾಂಗ್ರೆಸ್ ಸಂಪೂರ್ಣವಾಗಿ ನಶಿಸಿ ಹೋಗುತ್ತಿದೆ. ಕಾಂಗ್ರೆಸ್ ಸ್ವಯಂಕೃತ್ಯ ಅಪರಾಧವೇ ಅದಕ್ಕೆ ಕಾರಣ. ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ಈ ದೇಶ ಈ ಪರಿಸ್ಥಿತಿಗೆ ಬರಲು ಕಾರಣ ಏನು ಅಂತ ಯೋಚನೆ ಮಾಡಿ. ಕಾಂಗ್ರೆಸ್ ಪಕ್ಷ ನಮ್ಮನ್ನು ಗುಲಾಮರಂತೆ ನೋಡಿತು. ಮುಸ್ಲಿಂ ಸಮುದಾಯದವರ ಮುಗ್ಧತೆಯನ್ನು ಬಳಸಿಕೊಂಡಿತು. 2004 ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಾಗಿತ್ತು. ಆಗಲೂ ನಮಗೆ ಅಧಿಕಾರ ಮಾಡಲು ಬಿಡಲಿಲ್ಲ. ಪಕ್ಷದ ಕಾರ್ಯಕ್ರಮ ಬಿಟ್ಟು ಅಹಿಂದ ಅಂತಾ ಸಿದ್ದರಾಮಯ್ಯ ಹೊರಟರು.. ಮತ್ತೆ ಚುನಾವಣೆಗೆ ಹೋಗಬೇಕು ಅಂದುಕೊಂಡಿದ್ದೆವು. ಆದರೆ ನಮ್ಮ ಶಾಸಕರು ಕೈ ಮುಗಿದು ಬೇಡಿ ಮತ್ತೆ ಚುನಾವಣೆ ಬೇಡ ಅಂದ್ರು. ಬಿಜೆಪಿಯವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದು. ಬಿಜೆಪಿಯವರು ಸಹ ನಮ್ಮನ್ನು ಅವರಿಗೆ ಬೇಕಾದಾಗ ಬಳಸಿಕೊಂಡರು ಎಂದು ಎಚ್ಡಿಕೆ ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದರು.

ಇದನ್ನೂ ಓದಿ: 

ಬಹಿರಂಗ ಹೇಳಿಕೆ ನೀಡದಂತೆ ಜೆಡಿಎಸ್ ಶಾಸಕರಿಗೆ ಹೆಚ್ ಡಿ ಕುಮಾರಸ್ವಾಮಿ ಸೂಚನೆ

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

Published On - 5:42 pm, Sun, 3 October 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ