AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ

ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ
ಹೆಚ್.ಡಿ. ಕುಮಾರಸ್ವಾಮಿ
TV9 Web
| Edited By: |

Updated on:Oct 03, 2021 | 5:47 PM

Share

ಬೆಂಗಳೂರು: ದೇಶ ಉಳಿಸಲು ಮುಸಲ್ಮಾನ ಬಾಂಧವರ ಮನೆ ಮನೆಗೆ ಜೆಡಿಎಸ್ ಪಕ್ಷವನ್ನು ತಲುಪಿಸಬೇಕು ಎಂದು 5ನೆ ದಿನದ ಜೆಡಿಎಸ್ ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದ ಮುಖಂಡರನ್ನುದ್ದೇಶಿಸಿ ಕರೆ ನೀಡಿದರು. ಜೆಡಿಎಸ್ ಬಿಜೆಪಿ ಬಿ ಟೀಂ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ಆದರೆ ಅದು ಸುಳ್ಳೆಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ರಾಮಮಂದಿರ ಕಟ್ಟಲು ದೇಣಿಗೆ ನೀಡಿದ ಇಟ್ಟಿಗೆಗಳು ಈಗ ಎಲ್ಲಿ ಹೋದವೊ ತಿಳಿಯದು ಎಂದು ಅವರು ಟೀಕಿಸಿದರು.

19 ಪರ್ಸೆಂಟ್ ಇರುವ ಮುಸಲ್ಮಾನ್ ಬಂಧುಗಳನ್ನು ದ್ರೋಹಿಗಳು ಎಂದು ಬಿಂಬಿಸಲಾಗುತ್ತಿದೆ. ನಮ್ಮ ಸಂವಿಧಾನದ ವ್ಯವಸ್ಥೆಯಲ್ಲಿ ನಾವೆಲ್ಲಾ ಒಂದು ಕುಟುಂಬದಂತೆ ಬದುಕಬೇಕು. ಕಾಂಗ್ರೆಸ್ ಸುದೀರ್ಘವಾಗಿ ಆಡಳಿತ ನಡೆಸಿದೆ. ತುರ್ತು ಪರಿಸ್ಥಿತಿಯವರೆಗೆ ಕಾಂಗ್ರೆಸ್ ಹತ್ತಿರಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕಾಂಗ್ರೆಸ್ ಸಂಪೂರ್ಣವಾಗಿ ನಶಿಸಿ ಹೋಗುತ್ತಿದೆ. ಕಾಂಗ್ರೆಸ್ ಸ್ವಯಂಕೃತ್ಯ ಅಪರಾಧವೇ ಅದಕ್ಕೆ ಕಾರಣ. ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ಈ ದೇಶ ಈ ಪರಿಸ್ಥಿತಿಗೆ ಬರಲು ಕಾರಣ ಏನು ಅಂತ ಯೋಚನೆ ಮಾಡಿ. ಕಾಂಗ್ರೆಸ್ ಪಕ್ಷ ನಮ್ಮನ್ನು ಗುಲಾಮರಂತೆ ನೋಡಿತು. ಮುಸ್ಲಿಂ ಸಮುದಾಯದವರ ಮುಗ್ಧತೆಯನ್ನು ಬಳಸಿಕೊಂಡಿತು. 2004 ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಾಗಿತ್ತು. ಆಗಲೂ ನಮಗೆ ಅಧಿಕಾರ ಮಾಡಲು ಬಿಡಲಿಲ್ಲ. ಪಕ್ಷದ ಕಾರ್ಯಕ್ರಮ ಬಿಟ್ಟು ಅಹಿಂದ ಅಂತಾ ಸಿದ್ದರಾಮಯ್ಯ ಹೊರಟರು.. ಮತ್ತೆ ಚುನಾವಣೆಗೆ ಹೋಗಬೇಕು ಅಂದುಕೊಂಡಿದ್ದೆವು. ಆದರೆ ನಮ್ಮ ಶಾಸಕರು ಕೈ ಮುಗಿದು ಬೇಡಿ ಮತ್ತೆ ಚುನಾವಣೆ ಬೇಡ ಅಂದ್ರು. ಬಿಜೆಪಿಯವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದು. ಬಿಜೆಪಿಯವರು ಸಹ ನಮ್ಮನ್ನು ಅವರಿಗೆ ಬೇಕಾದಾಗ ಬಳಸಿಕೊಂಡರು ಎಂದು ಎಚ್ಡಿಕೆ ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದರು.

ಇದನ್ನೂ ಓದಿ: 

ಬಹಿರಂಗ ಹೇಳಿಕೆ ನೀಡದಂತೆ ಜೆಡಿಎಸ್ ಶಾಸಕರಿಗೆ ಹೆಚ್ ಡಿ ಕುಮಾರಸ್ವಾಮಿ ಸೂಚನೆ

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

Published On - 5:42 pm, Sun, 3 October 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್