AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy: ಸುಧಾಕರ್ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿ ತಿರುಗೇಟು

ಸಚಿವ ಡಾ. ಕೆ ಸುಧಾಕರ್ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಗಣಪತಿ ಶರ್ಮಾ
|

Updated on:Apr 04, 2023 | 6:20 PM

Share

ಮುಖ್ಯಾಂಶಗಳು

  • ಸಚಿವ ಡಾ. ಕೆ ಸುಧಾಕರ್ ಹೇಳಿಕೆಗೆ ಬೆಂಗಳೂರಿನಲ್ಲಿ ಕುಮಾರಸ್ವಾಮಿ ತಿರುಗೇಟು.
  • ಸುಧಾಕರ್ ಅವರ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ ಎಂದ ಜೆಡಿಎಸ್ ನಾಯಕ.
  • ಸುಧಾಕರ್ ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದ ಹೆಚ್​ಡಿಕೆ.

ಬೆಂಗಳೂರು: ಸಚಿವ ಡಾ. ಕೆ ಸುಧಾಕರ್ (K Sudhakar) ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​​ (JDS) 120 ಸ್ಥಾನಗಳಲ್ಲಿ ಗೆಲುವು ಸಾದಿಸಿದ್ದೇ ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಚಿವ ಡಾ. ಕೆ ಸುಧಾಕರ್ ಹೇಳಿಕೆಗೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಅವರು, ಸುಧಾಕರ್ ಅವರ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ. ಜನರಿಗೆ ಟಿವಿ, ರೆಫ್ರಿಜರೇಟರ್, ಸ್ಟೌವ್ ಎಲ್ಲವನ್ನೂ ಕೊಟ್ಟಿದ್ದಾರೆ ಪಾಪ. ಆರೋಗ್ಯ ಸಚಿವರು​ ಸಂಪತ್ಭರಿತರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇವರು (ಸುಧಾಕರ್) ಇಷ್ಟೆಲ್ಲ ಮಾಡಿದ್ದಾರಲ್ಲ ಎಂಬುದಾಗಿ ಜನರು ಈ ಬಾರಿ ಮನೆಯಲ್ಲೇ ಕುಳಿತುಕೊಳ್ಳುವಂತೆ ಮಾಡಿದರೆ? ಆಗ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲವಲ್ಲಾ? ಆ ರೀತಿ ಆದರೆ ಅವರು ಏನು ಮಾಡುತ್ತಾರೆ, ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​​ 100 ಸ್ಥಾನ ಗಳಿಸಲ್ಲ. ಒಂದು ವೇಳೆ ಆ ಪಕ್ಷ 120 ಸ್ಥಾನಗಳಲ್ಲಿ ಗೆಲುವು ಸಾದಿಸಿದ್ದೇ ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದರು. ಹಲವು ಬಾರಿ ಸಮ್ಮಿಶ್ರ ಸರ್ಕಾರಗಳ ಆಡಳಿತವನ್ನು ಕಂಡು ರೋಸಿಹೋಗಿರುವ ರಾಜ್ಯದ ಜನತೆ, ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದೂ ಹೇಳಿದ್ದರು.

ಇದನ್ನೂ ಓದಿ: K Sudhakar: ಜೆಡಿಎಸ್ 120 ಸ್ಥಾನ ಗೆದ್ದರೆ ರಾಜಕೀಯವಾಗಿ ನಿವೃತ್ತಿ; ಸಚಿವ ಕೆ ಸುಧಾಕರ್

ಕೆಲವು ಕಡೆ ಜೆಡಿಎಸ್ ಬಲಿಷ್ಠವಾಗಿಲ್ಲ; ಹೆಚ್​ಡಿಕೆ

ರಾಜ್ಯದ ಕೆಲವು ಕಡೆಗಳಲ್ಲಿ ಜೆಡಿಎಸ್​ ಸ್ಪಲ್ಪ ದುರ್ಬಲವಾಗಿದೆ, ಅದನ್ನು ಒಪ್ಪಿಕೊಳ್ಳುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲಿ ನಮಗೆ ಮತ ಹಾಕಲು ಜನ ಸಿದ್ಧರಿದ್ದಾರೆ. ಅವರನ್ನು ಸಮರ್ಥವಾಗಿ ಸೆಳೆಯಲು ಜೆಡಿಎಸ್ ಅಭ್ಯರ್ಥಿಗಳ ಕೊರತೆಯಿದೆ. ಅಂತಹ ಕಡೆ ಮತವಾಗಿ ಪರಿವರ್ತಿಸುವ ನಾಯಕರು ಬಂದಾಗ ಚಿಂತನೆ ಮಾಡಲಾಗುವುದು. ಕೆಲವೆಡೆ ಸಂಘಟನೆ, ಮತವಾಗಿ ಪರಿವರ್ತಿಸುವ ಅಭ್ಯರ್ಥಿ ಕೊರತೆಯಿದೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಕಾಂಗ್ರೆಸ್ ಹಾಗೂ ಬಿಜೆಪಿಯವರು ಅವರ ದೌರ್ಬಲ್ಯ ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ? ಅವರ ಪರಿಸ್ಥಿತಿ ಏನು ಎಂಬುದು ನನಗೂ ತಿಳಿದಿದೆ. ಸಮರ್ಥವಾದ ಅಭ್ಯರ್ಥಿಗಳು ಇರುವ ಕಡೆ ಘೋಷಣೆ ಮಾಡಿದ್ದೇವೆ. ಮತ ಪರಿವರ್ತಿಸುವುದಾಗಿ ಬರುವವರಿದ್ದರೆ ಜೆಡಿಎಸ್​ಗೆ ಸೇರಿಸಿಕೊಳ್ಳುತ್ತೇವೆ ಎಂದು ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎರಡನೇ ಪಟ್ಟಿಯಲ್ಲೇ ಹಾಸನ ಟಿಕೆಟ್ ಘೋಷಣೆ

ಜೆಡಿಎಸ್​ನ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲೇ ಹಾಸನ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗುವುದು. ಆ ಬಗ್ಗೆ ನಮಗಿಂತ ಹೆಚ್ಚಾಗಿ ನಿಮಗೇ ಕುತೂಹಲವಿದೆ. ಹಾಸನ ಬಿಟ್ಟು ಉಳಿದ ಕಡೆಗಳ ಪಟ್ಟಿ ಬಿಡುಗಡೆ ಮಾಡಿದ್ರೆ ಏನೇನೋ ಕತೆ ಶುರುವಾಗುತ್ತದೆ. ಹೀಗಾಗಿ 2ನೇ ಪಟ್ಟಿಯಲ್ಲೇ ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Tue, 4 April 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು