AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಭವಿಷ್ಯಕ್ಕೆ ಎರವಾದ ಚುನಾವಣಾ ಲಾಭದ ಅಗ್ಗದ ಗ್ಯಾರಂಟಿ: ಹೆಚ್​ಡಿ ಕುಮಾರಸ್ವಾಮಿ ಟೀಕೆ

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮಕ್ಕಳ ಭವಿಷ್ಯಕ್ಕೆ ಎರವಾದ ಚುನಾವಣಾ ಲಾಭದ ಅಗ್ಗದ ಗ್ಯಾರಂಟಿ: ಹೆಚ್​ಡಿ ಕುಮಾರಸ್ವಾಮಿ ಟೀಕೆ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: Ganapathi Sharma

Updated on:Jan 03, 2024 | 2:58 PM

ಬೆಂಗಳೂರು, ಜನವರಿ 3: ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ (Congress Government) ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ಬಸ್ ಹತ್ತಲಾಗದೆ ಪರದಾಡುತ್ತಿರುವ ಮತ್ತು ಮಕ್ಕಳು ಹತ್ತುತ್ತಿಂದತೆಯೇ ಬಸ್ ಮುಂದಕ್ಕೆ ಚಲಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹಂಚಿಕೊಂಡಿರುವ ಅವರು, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆಂದು ಹೊರಟ ಕಾಂಗ್ರೆಸ್ ಪಕ್ಷದ ಸರ್ಕಾರ ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನಿತ್ಯಾನಂದ ಸ್ವಾಮೀಜಿಯಂತೆ ಸಿದ್ದರಾಮಯ್ಯಗೂ ಭಕ್ತರಿದ್ದಾರೆ: ಬಿಕೆ ಹರಿಪ್ರಸಾದ್

ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲ ಎನ್ನುವ ವರದಿ ಆಘಾತಕಾರಿ. ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು. ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕದ ಮಾದರಿ! ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:56 pm, Wed, 3 January 24

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ